ವಿಟಿಯು ಅವ್ಯವಹಾರ: ಯೋಗಾನಂದ ಬಂಧನ
Team Udayavani, Sep 21, 2018, 6:30 AM IST
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಿಗೆ ಲ್ಯಾಬ್ ಪರಿಕರ ಖರೀದಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಸ್ನಾತಕೋತ್ತರ ಕೇಂದ್ರದ ಮಷಿನ್ ಡಿಸೈನ್ ವಿಭಾಗದ ಪ್ರಾಧ್ಯಾಪಕ ಪ್ರೊ.ಯೋಗಾನಂದ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ ಗುರುವಾರ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಜತೆಗೆ ಆಗಿನ ರೆಸಿಡೆಂಟ್ ಎಂಜಿನಿಯರ್ ಶಾಂತಪ್ಪ, ಕುಲಸಚಿವ ಹಾಗೂ ಹಣಕಾಸು ಅಧಿಕಾರಿಯಾಗಿದ್ದ ಕೆ.ವಿ. ಪ್ರಕಾಶ ಹಾಗೂ ಉಪ ಕುಲಪತಿಯಾಗಿದ್ದ ಡಾ.ಮಹೇಶಪ್ಪ ವಿರುದ್ಧವೂ ಸಿಸಿಬಿ ಪೊಲೀಸರು ದೂರು ದಾಖಲಿಸಿ ವಿಚಾರಣೆಗೊಳಪಡಿಸಿದ್ದಾರೆ.
2015ರಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕಾಲೇಜುಗಳಲ್ಲಿ ಲ್ಯಾಬ್ ಪರಿಕರಗಳ ಖರೀದಿಗಾಗಿ ಟೆಂಡರ್ ಕರೆದು ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ಕೋ ಆರ್ಡಿನೇಟರ್ ಆಗಿದ್ದ ಯೋಗಾನಂದ್ ಪರಿಕರಗಳನ್ನು ದಾವಣಗೆರೆ ವಿಟಿಯು ಉಗ್ರಾಣದಲ್ಲಿರಿಸಿದ್ದು, ಬಳಿಕ ಎಲ್ಲ ಕಡೆ ಪರಿಕರ ಅಳವಡಿಸಲಾಗಿದೆ ಎಂದು ಪ್ರಮಾಣ ಪತ್ರ ನೀಡಿರುವುದು ತಿಳಿದು
ಬಂದಿದೆ. ಇದನ್ನು ಪರಿಗಣಿಸಿ ಮೊದಲ ಹಂತದ ಹಣ ಬಿಡುಗಡೆಯಾಗಿದೆ.
ಏತನ್ಮಧ್ಯೆ ರಾಜ್ಯಪಾಲರಿಗೆ ಅನೇಕ ದೂರು ಬಂದಿರುವ ಹಿನ್ನೆಲೆ ಸಮಿತಿ ರಚಿಸಿ ಕಾರ್ಯಾಚರಣೆ ನಡೆಸಿದಾಗ ಅಪರಾಧ
ಪತ್ತೆಯಾಗಿದೆ. ಬಳಿಕ ದೂರಿನನ್ವಯ ಸಿಸಿಬಿ ಪೊಲೀಸರು ಯೋಗಾನಂದ ಅವರನ್ನು ಕರೆಸಿ ವಿಚಾರಿಸಿದಾಗ ಅಪರಾಧ ಸಾಬೀತಾಗಿದ್ದು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ