ಸರ್ಕಾರಿ ವೈದ್ಯೆಗೆ ಧಮಕಿ, ಗೂಂಡಾ ವರ್ತನೆ: ಆರೋಪಿಗಳ ಬಂಧನ


Team Udayavani, May 13, 2020, 4:51 AM IST

ಸರ್ಕಾರಿ ವೈದ್ಯೆಗೆ ಧಮಕಿ, ಗೂಂಡಾ ವರ್ತನೆ: ಆರೋಪಿಗಳ ಬಂಧನ

ಚನ್ನಮ್ಮ ಕಿತ್ತೂರು: ಸ್ಥಳೀಯ ಸರಕಾರಿ ವೈದ್ಯೆ ಡಾ| ಅನ್ನಪೂರ್ಣಾ ಅಂಗಡಿ ಅವರ ಮೇಲೆ ಸೋಮವಾರ ತಡರಾತ್ರಿ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಐವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಅಬ್ದುಲ್‌ ಮುಜಾವರ, ಹಾಗೂ ಸಮೀರ ಮುಜಾವರ, ಸರಫರಾಜ ಮುಜಾವರ, ಸುಹೇಲ್‌ ಇಮಾಮನವರ, ದಸ್ತಗೀರ ಇಮಾಮನವರ ವಿರುದ್ಧ ಕಿತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಕುರಿತಂತೆ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಸರಕಾರಿ ಹಿರಿಯ ವೈದ್ಯರಾದ ಡಾ| ಶಿವಾನಂದ ಮಾಸ್ತಿಹೊಳಿ, ಸುಮಾರು ಒಂದು ತಿಂಗಳಿನಿಂದ ನಿತ್ಯ ಸರಕಾರಿ ಆಸ್ಪತ್ರೆಗೆ ತನ್ನ ಸಹಚರರೊಂದಿಗೆ ಆಗಮಿಸುತ್ತಿದ್ದ ಅಬ್ದುಲ್‌ ಇಮಾಮಹುಸೇನ್‌ ಮುಜಾವರ ಎಂಬ ಯುವಕ ವೈದ್ಯರು ಕೋವಿಡ್ ಪರೀಕ್ಷೆ ಮಾಡುವ  ಸಂದರ್ಭದಲ್ಲಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದ. ಅಲ್ಲದೇ ನೀವು ಸುಮ್ಮನೇ ಎಲ್ಲ ರೋಗಿಗಳನ್ನು ಪರೀಕ್ಷೆ ಮಾಡುವುದೇಕೆ ಎಂದು ಬೆದರಿಸುತ್ತಿದ್ದ. ಯುವಕನ ಮನೆಗೆ ಕೊರೊನಾ ಪರೀಕ್ಷೆಗೆ ಆಶಾ ಕಾಯಕರ್ತೆಯರು ಹೋದಾಗಲೂ ಅಸಭ್ಯವಾಗಿ ವರ್ತಿಸಿದ್ದ. ಅಲ್ಲದೇ ನನಗೆ ನೀವು ತಿಂಗಳಾ ಹಫ್ತಾ ಕೊಡಬೇಕು ಎಂದು ಮಹಿಳಾ ವೈದ್ಯೆಗೆ ಬೇಡಿಕೆ ಇಟ್ಟು ಧಮಕಿ ಹಾಕಿದ್ದ. ಹಫ್ತಾ ಕೊಡದಿದ್ದರೆ ನಿನ್ನ ಉಳಿಸೊಲ್ಲ ಎಂದು  ಫೋನ್‌ನಲ್ಲಿ ಹೆದರಿಸುತ್ತಿದ್ದ. ಸೊಮವಾರ ರಾತ್ರಿ 1 ಗಂಟೆಗೆ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಾಲ್ಕು ಜನರೊಂದಿಗೆ ಆಗಮಿಸಿದ ಈ ಯುವಕ ವೈದ್ಯೆಯನ್ನು ಕರೆದಿದ್ದಾನೆ. ವೈದ್ಯರು ಡಿಲೆವರಿ ಪೇಶೆಂಟ್‌ ಬಂದಿದೆ. ಬೇರೆ ವೈದ್ಯರಿದ್ದಾರೆ ಅವರನ್ನು ಭೇಟಿಯಾಗಿ ಎಂದು ಹೇಳಿದ್ದಾರೆ.

ಅಷ್ಟಕ್ಕೇ ವೈದ್ಯೆ ಡಾ| ಅನ್ನಪೂರ್ಣಾ ಅವರನ್ನು ಅವಾಚ್ಯ ಶಬ್ದಳಿಂದ ನಿಂದಿಸಿದ್ದಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಆಸ್ಪತ್ರೆಯಲ್ಲಿನ ಆಶಾ ಕಾರ್ಯಕರ್ತೆಯರನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಅವರ ಮೈಮೇಲೆ ಏರಿ ಹೋಗಿದ್ದಾನೆ. ಹೆದರಿದ ಆಶಾ ಕಾರ್ಯಕರ್ತೆಯರು ಪೊಲೀಸರಿಗೆ ´ಫೋನ್‌ ಮಾಡಿ ತಿಳಿಸಿದಾಗ ಅಲ್ಲಿಂದ ಓಡಿಹೋದ ಯುವಕ ಮತ್ತೆ ಮಂಗಳವಾರ ಬೆಳಿಗ್ಗೆ ಫೋನ್‌ ಮೂಲಕ ಧಮಕಿ ಹಾಕಿದ್ದಾನೆ. ಇದರಿಂದ ರೋಸಿ ಹೋಗಿ ಮಂಗಳವಾರ ಸಂಜೆ 5 ಯುವಕರ ಮೇಲೂ ಡಾ| ಅನ್ನಪೂರ್ಣಾ ಅಂಗಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು.

ಖಾಸಗಿ ವೈದ್ಯರ ಸಂಘದ ಅಧ್ಯಕ್ಷ ಡಾ. ವೆಂಕಟೇಶ ಉಣಕಲ್ಲಕರ, ಉಪಾಧ್ಯಕ್ಷ ಡಾ. ಲಾಡಖಾನ್‌ ಹಾಗೂ ಕಾರ್ಯದರ್ಶಿ ಡಾ. ಬಸವರಾಜ ಪರವನ್ನವರ ಮಾತನಾಡಿ, ಮಹಿಳಾ ವೈದ್ಯೆ ಮೇಲೆ ಹಲ್ಲೆಗೆ ಪ್ರಯತ್ನಿಸಿದ ಗೂಂಡಾಗಳ ಮೇಲೆ ಸರಕಾರ ಕೂಡಲೇ ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಜೈಲಿಗೆ ಅಟ್ಟಬೇಕು ಎಂದು ಒತ್ತಾಯಿಸಿದರು. ಕಿತ್ತೂರು ಹಾಗೂ ಸುತ್ತಲಿನ ಖಾಸಗಿ ವೈದ್ಯರ ಸಂಘದವರು ಪ್ರಕರಣವನ್ನು ಖಂಡಿಸಿ ಆರೋಪಿಗಳನ್ನು ಬಂಧಿಸುವಂತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

ತುಂಬಾ ಒತ್ತಡದಲ್ಲಿ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ವಿನಾಕಾರಣ ಕಳೆದ 15 ದಿನಗಳಿಂದ ಕಿರುಕುಳ ನೀಡುತ್ತಿದ್ದಾರೆ. ಪದೇ ಪದೇ ಆಸ್ಪತ್ರೆಗೆ ಆಗಮಿಸಿ ನಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ತಿಂಗಳು ಹಫ್ತಾ ನೀಡಬೇಕು, ಇಲ್ಲದಿದ್ದರೆ ಜೀವಕ್ಕೆ ತೊಂದರೆ ಮಾಡುತ್ತೇವೆ ಎಂದು ಧಮಿಕಿ ಹಾಕುತ್ತಿದ್ದಾರೆ. –ಡಾ| ಅನ್ನಪೂರ್ಣ ಅಂಗಡಿ, ಕಿತ್ತೂರು

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.