ಬೇಕಾಬಿಟ್ಟಿ ವಾಹನ ನಿಲ್ಲಿಸಿದ್ರೆ ಹುಷಾರ್!
|ನಗರದಲ್ಲಿ ಸಂಚರಿಸುತ್ತಿವೆ ಟೋವಿಂಗ್ ವಾಹನ |ನೋ ಪಾಕಿಂಗ್ನಲ್ಲಿ ವಾಹನ ನಿಲ್ಲಿಸಿದರೆ ದೊಡ್ಡ ಪ್ರಮಾಣದ ದಂಡ
Team Udayavani, Jul 23, 2019, 10:01 AM IST
ಬೆಳಗಾವಿ: ನಗರದಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತ ವಾಹನಗಳನ್ನು ಟೋವಿಂಗ್ ಕಾರ್ಯಾಚರಣೆ ನಡೆಸಲಾಯಿತು.
ಬೆಳಗಾವಿ: ನಗರಲ್ಲಿ ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ನಿಮಗೆ ಇನ್ನು ಮುಂದೆ ದೊಡ್ಡ ಪ್ರಮಾಣದ ದಂಡ ಬೀಳುವುದು ಖಚಿತ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ ಟೋವಿಂಗ್ ವಾಹನ ಬಂದು ಎತ್ತಿಕೊಂಡು ಹೋಗುವುದು ಗ್ಯಾರಂಟಿ.
ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಜನದಟ್ಟಣೆ ಕಡಿಮೆ ಮಾಡಲು ಮಹಾನಗರ ಪೊಲೀಸ್ ಕಮೀಷನರೇಟ್ ಎಷ್ಟೇ ಶ್ರಮ ವಹಿಸಿದರೂ, ಕಟ್ಟುನಿಟ್ಟಿನ ನಿಯಮಗಳನ್ನು ಹಾಕಿದರೂ ಇದಕ್ಕೆ ತೀಲಾಂಜಲಿ ಹೇಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಈಗ ಸಂಚಾರ ದಟ್ಟಣೆ ಪ್ರಮಾಣ ಇಳಿಸಲು ಟೋವಿಂಗ್ ವಾಹನಗಳನ್ನು ಟೆಂಡರ್ ಮೂಲಕ ಕರೆಯಿಸಿದ್ದು, ಸದ್ಯ ಬೆಳಗಾವಿ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಎರಡು ವಾಹನಗಳು ಕಾರ್ಯಾಚರಣೆ ನಡೆಸಿವೆ.
ಎತ್ತಿಕೊಂಡು ಒಯ್ತಾರೆ ಎಚ್ಚರ: ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರಿ ಪೊಲೀಸರಿಗೆ ಭಾರೀ ಕಿರಿಕಿರಿಯಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರ ಜೊತೆಗೆ ವಾಗ್ವಾದಕ್ಕೂ ಕಾರಣವಾಗಿದೆ. ದಂಡ ಹಾಕಿದರೆ ವಾಹನ ಸವಾರರು ಪೊಲೀಸರೊಂದಿಗೆ ಜಗಳ ಮಾಡಿ ಉದಾಹರಣೆಗಳೂ ಉಂಟು. ಈ ಎಲ್ಲ ಜಗಳ, ವಾಗ್ವಾದಕ್ಕೆ ಇತಿಶ್ರೀ ಹೇಳಲು ಟೋವಿಂಗ್ ವಾಹನಗಳು ನಗರಕ್ಕೆ ಬಂದಿದ್ದು, ನೋ ಪಾರ್ಕಿಂಗ್ನಲ್ಲಿದ್ದ ದ್ವಿಚಕ್ರ ವಾಹನವನ್ನು ಟೋವಿಂಗ್ನಲ್ಲಿ ಕ್ರೇನ್ ಮೂಲಕ ಎತ್ತಿಹಾಕಿ ನೇರವಾಗಿ ಪೊಲೀಸ್ ಠಾಣೆಗೆ ಒಯ್ಯಲಾಗುತ್ತದೆ.
ದಂಡ ಮೊತ್ತವೇ ಜಾಸ್ತಿ: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಅತಿ ಹೆಚ್ಚಿನ ದಂಡದ ಮೊತ್ತ ತೆರಬೇಕಾಗುತ್ತದೆ. ಕಳೆದ 15 ದಿನಗಳ ಹಿಂದೆಯಷ್ಟೇ ದಂಡ ಪರಿಷ್ಕೃತ ಆಗಿದೆ. ಈ ನಿಟ್ಟಿನಲ್ಲಿ ನೋ ಪಾರ್ಕಿಂಗ್ನಲ್ಲಿ ನಿಂತ ವಾಹನಗಳಿಗೆ ಒಂದು ಸಾವಿರ ರೂ. ದಂಡ ಇದೆ. ಟೋವಿಂಗ್ನಲ್ಲಿ ಹಾಕಿಕೊಂಡು ಹೋದರೆ 1650 ರೂ. ನೀಡಬೇಕಾಗುತ್ತದೆ. ಈ ದಂಡದ ಮೊತ್ತದಲ್ಲಿ 1 ಸಾವಿರ ರೂ. ದಂಡ, 400 ರೂ. ಸರ್ಕಾರಿ ಶುಲ್ಕ ಹಾಗೂ ಇನ್ನುಳಿದ ಹಣ ಟೋವಿಂಗ್ ವಾಹನದವರಿಗೆ ಜಮಾ ಆಗುತ್ತದೆ.
ಎಲ್ಲೆಲ್ಲಿ ಕಾರ್ಯಾಚರಣೆ: ಸುಮಾರು 10-12 ದಿನಗಳಿಂದ ಟೋವಿಂಗ್ ವಾಹನಗಳು ಕಾರ್ಯಾಚರಣೆ ನಡೆಸಿವೆ. ಈವರೆಗೆ 40-50 ವಾಹನಗಳನ್ನು ಟೋವಿಂಗ್ ಮಾಡಿ ಎತ್ತಿಕೊಂಡು ಹೋಗಲಾಗಿದೆ. ನಗರದ ಖಡೇಬಜಾರ್, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಾಲೇಜು ರಸ್ತೆ, ಸಮಾದೇವಿ ಗಲ್ಲಿ, ರಾಮದೇವ ಗಲ್ಲಿ, ಕಿರ್ಲೋಸ್ಕರ್ ರೋಡ್ ಸೇರಿದಂತೆ ಜನದಟ್ಟಣೆ ಪ್ರದೇಶಗಳಲ್ಲಿ ಟೋವಿಂಗ್ ಕಾರ್ಯಾಚರಣೆ ಮಾಡುತ್ತಿದೆ.
ಜಾಗವೇ ಇಲ್ಲ, ನಿಲ್ಲಿಸೋದು ಎಲ್ಲಿ?: ನಗರದ ಬಹುತೇಕ ಪ್ರದೇಶಗಳಲ್ಲಿ ಪಾರ್ಕಿಂಗ್ ಸಮಸ್ಯೆ ಇದೆ. ಮಾರುಕಟ್ಟೆ ಪ್ರದೇಶಗಳಲ್ಲಿ ಅಂತೂ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ತಮ್ಮ ಅಂಗಡಿಗಳ ಮುಂದೆ ಪಾರ್ಕಿಂಗ್ ಮಾಡಿರುತ್ತಾರೆ. ಆದರೆ ಮಾರುಕಟ್ಟೆಗೆ ಬರುವ ವಾಹನ ಸವಾರರು ವಾಹನಗಳನ್ನು ಎಲ್ಲಿ ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆ ಆಗಿದೆ. ಹೀಗಾಗಿ ಪೊಲೀಸರು ಹಾಗೂ ವಾಹನ ಸವಾರರ ಮಧ್ಯೆ ಗುದ್ದಾಟಕ್ಕೆ ಕಾರಣವಾಗಿದೆ.
ಟೋವಿಂಗ್ ವಾಹನಗಳು ಕಾರ್ಯಾಚರಣೆ ನಡೆಸುತ್ತಿರುವುದರಿಂದ ಮಾರುಕಟ್ಟೆ ಪ್ರದೇಶಗಳಲ್ಲಿ ಮೊದಲಿನಂತೆ ರಸ್ತೆ ಮೇಲೆ, ಎಲ್ಲೆಂದರಲ್ಲಿ ವಾಹನಗಳು ನಿಲ್ಲುತ್ತಿಲ್ಲ. ಪಾರ್ಕಿಂಗ್ ಇರದಿದ್ದರೂ ದೂರದ ಜಾಗಕ್ಕೆ ಹೋಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಮಹಾನಗರ ಪಾಲಿಕೆ ಕೂಡಲೇ ಆಯಾ ಸ್ಥಳಗಳಲ್ಲಿ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್