ಬೇಕಾಬಿಟ್ಟಿ ವಾಹನ ನಿಲ್ಲಿಸಿದ್ರೆ ಹುಷಾರ್‌!

|ನಗರದಲ್ಲಿ ಸಂಚರಿಸುತ್ತಿವೆ ಟೋವಿಂಗ್‌ ವಾಹನ |ನೋ ಪಾಕಿಂಗ್‌ನಲ್ಲಿ ವಾಹನ ನಿಲ್ಲಿಸಿದರೆ ದೊಡ್ಡ ಪ್ರಮಾಣದ ದಂಡ

Team Udayavani, Jul 23, 2019, 10:01 AM IST

bg-tdy-1

ಬೆಳಗಾವಿ: ನಗರದಲ್ಲಿ ನೋ ಪಾರ್ಕಿಂಗ್‌ ಸ್ಥಳದಲ್ಲಿ ನಿಂತ ವಾಹನಗಳನ್ನು ಟೋವಿಂಗ್‌ ಕಾರ್ಯಾಚರಣೆ ನಡೆಸಲಾಯಿತು.

ಬೆಳಗಾವಿ: ನಗರಲ್ಲಿ ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ನಿಮಗೆ ಇನ್ನು ಮುಂದೆ ದೊಡ್ಡ ಪ್ರಮಾಣದ ದಂಡ ಬೀಳುವುದು ಖಚಿತ. ನೋ ಪಾರ್ಕಿಂಗ್‌ ಜಾಗದಲ್ಲಿ ವಾಹನ ನಿಲ್ಲಿಸಿದರೆ ಟೋವಿಂಗ್‌ ವಾಹನ ಬಂದು ಎತ್ತಿಕೊಂಡು ಹೋಗುವುದು ಗ್ಯಾರಂಟಿ.

ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಜನದಟ್ಟಣೆ ಕಡಿಮೆ ಮಾಡಲು ಮಹಾನಗರ ಪೊಲೀಸ್‌ ಕಮೀಷನರೇಟ್ ಎಷ್ಟೇ ಶ್ರಮ ವಹಿಸಿದರೂ, ಕಟ್ಟುನಿಟ್ಟಿನ ನಿಯಮಗಳನ್ನು ಹಾಕಿದರೂ ಇದಕ್ಕೆ ತೀಲಾಂಜಲಿ ಹೇಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಈಗ ಸಂಚಾರ ದಟ್ಟಣೆ ಪ್ರಮಾಣ ಇಳಿಸಲು ಟೋವಿಂಗ್‌ ವಾಹನಗಳನ್ನು ಟೆಂಡರ್‌ ಮೂಲಕ ಕರೆಯಿಸಿದ್ದು, ಸದ್ಯ ಬೆಳಗಾವಿ ಮಹಾನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ ಎರಡು ವಾಹನಗಳು ಕಾರ್ಯಾಚರಣೆ ನಡೆಸಿವೆ.

ಎತ್ತಿಕೊಂಡು ಒಯ್ತಾರೆ ಎಚ್ಚರ: ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರಿ ಪೊಲೀಸರಿಗೆ ಭಾರೀ ಕಿರಿಕಿರಿಯಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರ ಜೊತೆಗೆ ವಾಗ್ವಾದಕ್ಕೂ ಕಾರಣವಾಗಿದೆ. ದಂಡ ಹಾಕಿದರೆ ವಾಹನ ಸವಾರರು ಪೊಲೀಸರೊಂದಿಗೆ ಜಗಳ ಮಾಡಿ ಉದಾಹರಣೆಗಳೂ ಉಂಟು. ಈ ಎಲ್ಲ ಜಗಳ, ವಾಗ್ವಾದಕ್ಕೆ ಇತಿಶ್ರೀ ಹೇಳಲು ಟೋವಿಂಗ್‌ ವಾಹನಗಳು ನಗರಕ್ಕೆ ಬಂದಿದ್ದು, ನೋ ಪಾರ್ಕಿಂಗ್‌ನಲ್ಲಿದ್ದ ದ್ವಿಚಕ್ರ ವಾಹನವನ್ನು ಟೋವಿಂಗ್‌ನಲ್ಲಿ ಕ್ರೇನ್‌ ಮೂಲಕ ಎತ್ತಿಹಾಕಿ ನೇರವಾಗಿ ಪೊಲೀಸ್‌ ಠಾಣೆಗೆ ಒಯ್ಯಲಾಗುತ್ತದೆ.

ದಂಡ ಮೊತ್ತವೇ ಜಾಸ್ತಿ: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಅತಿ ಹೆಚ್ಚಿನ ದಂಡದ ಮೊತ್ತ ತೆರಬೇಕಾಗುತ್ತದೆ. ಕಳೆದ 15 ದಿನಗಳ ಹಿಂದೆಯಷ್ಟೇ ದಂಡ ಪರಿಷ್ಕೃತ ಆಗಿದೆ. ಈ ನಿಟ್ಟಿನಲ್ಲಿ ನೋ ಪಾರ್ಕಿಂಗ್‌ನಲ್ಲಿ ನಿಂತ ವಾಹನಗಳಿಗೆ ಒಂದು ಸಾವಿರ ರೂ. ದಂಡ ಇದೆ. ಟೋವಿಂಗ್‌ನಲ್ಲಿ ಹಾಕಿಕೊಂಡು ಹೋದರೆ 1650 ರೂ. ನೀಡಬೇಕಾಗುತ್ತದೆ. ಈ ದಂಡದ ಮೊತ್ತದಲ್ಲಿ 1 ಸಾವಿರ ರೂ. ದಂಡ, 400 ರೂ. ಸರ್ಕಾರಿ ಶುಲ್ಕ ಹಾಗೂ ಇನ್ನುಳಿದ ಹಣ ಟೋವಿಂಗ್‌ ವಾಹನದವರಿಗೆ ಜಮಾ ಆಗುತ್ತದೆ.

ಎಲ್ಲೆಲ್ಲಿ ಕಾರ್ಯಾಚರಣೆ: ಸುಮಾರು 10-12 ದಿನಗಳಿಂದ ಟೋವಿಂಗ್‌ ವಾಹನಗಳು ಕಾರ್ಯಾಚರಣೆ ನಡೆಸಿವೆ. ಈವರೆಗೆ 40-50 ವಾಹನಗಳನ್ನು ಟೋವಿಂಗ್‌ ಮಾಡಿ ಎತ್ತಿಕೊಂಡು ಹೋಗಲಾಗಿದೆ. ನಗರದ ಖಡೇಬಜಾರ್‌, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಾಲೇಜು ರಸ್ತೆ, ಸಮಾದೇವಿ ಗಲ್ಲಿ, ರಾಮದೇವ ಗಲ್ಲಿ, ಕಿರ್ಲೋಸ್ಕರ್‌ ರೋಡ್‌ ಸೇರಿದಂತೆ ಜನದಟ್ಟಣೆ ಪ್ರದೇಶಗಳಲ್ಲಿ ಟೋವಿಂಗ್‌ ಕಾರ್ಯಾಚರಣೆ ಮಾಡುತ್ತಿದೆ.

ಜಾಗವೇ ಇಲ್ಲ, ನಿಲ್ಲಿಸೋದು ಎಲ್ಲಿ?: ನಗರದ ಬಹುತೇಕ ಪ್ರದೇಶಗಳಲ್ಲಿ ಪಾರ್ಕಿಂಗ್‌ ಸಮಸ್ಯೆ ಇದೆ. ಮಾರುಕಟ್ಟೆ ಪ್ರದೇಶಗಳಲ್ಲಿ ಅಂತೂ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ತಮ್ಮ ಅಂಗಡಿಗಳ ಮುಂದೆ ಪಾರ್ಕಿಂಗ್‌ ಮಾಡಿರುತ್ತಾರೆ. ಆದರೆ ಮಾರುಕಟ್ಟೆಗೆ ಬರುವ ವಾಹನ ಸವಾರರು ವಾಹನಗಳನ್ನು ಎಲ್ಲಿ ಪಾರ್ಕಿಂಗ್‌ ಮಾಡುವುದೇ ದೊಡ್ಡ ಸಮಸ್ಯೆ ಆಗಿದೆ. ಹೀಗಾಗಿ ಪೊಲೀಸರು ಹಾಗೂ ವಾಹನ ಸವಾರರ ಮಧ್ಯೆ ಗುದ್ದಾಟಕ್ಕೆ ಕಾರಣವಾಗಿದೆ.

ಟೋವಿಂಗ್‌ ವಾಹನಗಳು ಕಾರ್ಯಾಚರಣೆ ನಡೆಸುತ್ತಿರುವುದರಿಂದ ಮಾರುಕಟ್ಟೆ ಪ್ರದೇಶಗಳಲ್ಲಿ ಮೊದಲಿನಂತೆ ರಸ್ತೆ ಮೇಲೆ, ಎಲ್ಲೆಂದರಲ್ಲಿ ವಾಹನಗಳು ನಿಲ್ಲುತ್ತಿಲ್ಲ. ಪಾರ್ಕಿಂಗ್‌ ಇರದಿದ್ದರೂ ದೂರದ ಜಾಗಕ್ಕೆ ಹೋಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಮಹಾನಗರ ಪಾಲಿಕೆ ಕೂಡಲೇ ಆಯಾ ಸ್ಥಳಗಳಲ್ಲಿ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.

ಸಂಚಾರ ದಟ್ಟಣೆ ತಡೆಯಲು ಟೋವಿಂಗ್‌ ವಾಹನಗಳ ಕಾರ್ಯಾಚರಣೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಆದರೆ ನಗರದ ಬಹುತೇಕ ಕಡೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಜಾಗವೇ ಇಲ್ಲ. ಮಾರುಕಟ್ಟೆ ಪ್ರದೇಶಗಳಿಗೆ ಬರುವ ಜನರು ವಾಹನಗಳನ್ನು ಎಲ್ಲಿ ನಿಲ್ಲಿಸುವುದು ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಮಹಾನಗರ ಪಾಲಿಕೆಯವರು ಸೂಕ್ತ ಸ್ಥಳಾವಕಾಶ ಮಾಡಬೇಕು. • ಡಾ| ನಾರಾಯಣ ನಾಯ್ಕ, ನಗರ ನಿವಾಸಿ
ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ಬೀಳುವುದು ಗ್ಯಾರಂಟಿ. ಈಗಾಗಲೇ ದಂಡದ ಮೊತ್ತ ಪರಿಷ್ಕರಣೆ ಆಗಿದೆ. ನೋ ಪಾರ್ಕಿಂಗ್‌ ಸ್ಥಳದಲ್ಲಿ ವಾಹನ ನಿಲ್ಲಿಸಿದರೆ ಟೋವಿಂಗ್‌ ವಾಹನಗಳು ಕಾರ್ಯಾಚರಣೆ ನಡೆಸುತ್ತವೆ. ಹೀಗಾಗಿ ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸಿ, ನಗರದಲ್ಲಿ ಜನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಸಹಕರಿಸಬೇಕು. • ಬಿ.ಎಸ್‌. ಲೋಕೇಶಕುಮಾರ, ಪೊಲೀಸ್‌ ಕಮೀಷನರ್‌
•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.