ಅನಾರೋಗ್ಯದಿಂದ ಯೋಧ ಸಾವು : ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ
Team Udayavani, Aug 21, 2021, 8:55 PM IST
ಬೈಲಹೊಂಗಲ: ಅನಾರೋಗ್ಯದಿಂದ ನಿಧನರಾದ ತಾಲೂಕಿನ ಮಾಸ್ತಮರರ್ಡಿ ಗ್ರಾಮದ ವೀರಯೋಧ ಬಾಬಾ ಸಿದ್ದಪ್ಪ ಈರೈನ್ನವರ (30) ಅವರ ಪಾರ್ಥಿವ ಶರೀರವನ್ನು ಮೆರವಣಿಗೆಯೊಂದಿಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮೃತ ಯೋಧ 2007 ರಲ್ಲಿ ಎಸ್ಎಸ್ಎಲ್ಸಿ ವಿದ್ಯಾಬ್ಯಾಸ ಪೂರೈಸಿ 2011ರಲ್ಲಿ ಅಟಲರಿ ಓಪಿಎಸ್ ವೈರಲೆಸ್ ಆಪರೇಟರ್ ಆಗಿ ಸೇನೆಗೆ ಸೇರಿದರು. ನಂತರ 110 ರೆಜಿಮೆಂಟ್ ದಿಲ್ಲಿಯಲ್ಲಿ ಸೇವೆ ಪ್ರಾರಂಭಿಸಿ ವಿವಿಧೆಡೆ ಉತ್ತಮ ಕಾರ್ಯ ಮಾಡಿದ್ದಾರೆ 10 ವರ್ಷ 4 ತಿಂಗಳ ಕಾಲ ದೇಶ ಸೇವೆ ಸಲ್ಲಿಸಿರುವ ಸಿದ್ದಪ್ಪನಿಗೆ ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಕಾಲಿಗೆ ಗುಂಡು ತಗುಲಿತ್ತು. ಕಳೆದ ಒಂದು ವರ್ಷದಿಂದ ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ (ಆ.20) ಮೃತಪಟ್ಟಿದ್ದರು.’
ಬೆಳಗಾವಿ ಮರಾಠಾ ಇನ್ಪೆಂಟರಿ ಯೋಧರು ಬೆಳಗಾವಿಯಿಂದ ಪಾರ್ಥಿವ ಶರೀರವನ್ನು ಗ್ರಾಮಕ್ಕೆ ತಂದು ಹೂಹಾರ ಅರ್ಪಿಸಿ ಗೌರವ ಸಲ್ಲಿಸಿದರು.
ಮೃತರಿಗೆ ತಂದೆ, ತಾಯಿ, ಸಹೋದರ,ಸಹೋದರಿ, ಅಪಾರ ಬಂಧುಗಳು ಇದ್ದಾರೆ. ತಹಶೀಲ್ದಾರ ಬಸವರಾಜ ನಾಗರಾಳ, ಜಿ.ಪಂ ಸದಸ್ಯ ನಿಂಗಪ್ಪಅರಕೇರಿ, ಪಿಎಸ್ಐ ವಾಯ್.ಎಲ್.ಶಿಗಿಹಳ್ಳಿ, ಗ್ರಾ.ಪಂ ಅಧ್ಯಕ್ಷ ಸಿದ್ದಪ್ಪ ಮಿಂಡೊಳ್ಳಿ, ನಿಂಗಪ್ಪ ಪೋತಲಿ , ಯುವ ದುರೀಣ ನಿಂಗನಗೌಡ ದೊಡ್ಡಗೌಡರ, ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ.ಬಿ.ಅಂಬಲಿ , ಗ್ರಾಮ ಲೆಕ್ಕಾಧಿಕಾರಿ ಬಿ.ಬಿ.ಕೆರಕ್ಕನವರ, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ