ದೂಧಗಂಗಾ ನದಿ ಸೇರಿದ ಲಕ್ಷಾಂತರ ಲೀ. ತ್ಯಾಜ್ಯ ನೀರು!


Team Udayavani, Apr 12, 2021, 3:02 PM IST

ದೂಧಗಂಗಾ ನದಿ ಸೇರಿದ ಲಕ್ಷಾಂತರ ಲೀ. ತ್ಯಾಜ್ಯ ನೀರು!

ಚಿಕ್ಕೋಡಿ: ತಾಲೂಕಿನ ಸದಲಗಾ ಪಟ್ಟಣದಲ್ಲಿ ನಿರ್ಮಾಣವಾದ ತ್ಯಾಜ್ಯ ನೀರು ಸಂಗ್ರಹಣಾಘಟಕ ಸೋರಿಕೆಯಿಂದ ಅಪಾರ ಪ್ರಮಾಣದತ್ಯಾಜ್ಯ ನೀರು ದೂಧಗಂಗಾ ನದಿಗೆ ಸೇರಿದೆ. ಇದರಿಂದ ಗಡಿ ಭಾಗದ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

2018ರಲ್ಲಿ ಸದಲಗಾ ಪಟ್ಟಣದಲ್ಲಿ ತ್ಯಾಜ್ಯ ನೀರು ಸಂಗ್ರಹ ಘಟಕ ನಿರ್ಮಿಸಲಾಗಿತ್ತು.ಕಾಮಗಾರಿ ಮುಗಿದು ಮೂರೇ ವರ್ಷದಲ್ಲಿತ್ಯಾಜ್ಯ ನೀರು ಸಂಗ್ರಹ ಘಟಕದ ಟ್ಯಾಂಕ್‌ಸೋರಿಕೆಯಾಗುತ್ತಿದೆ. ಕಳಪೆ ಕಾಮಗಾರಿನಡೆದಿದೆ ಎಂಬುದು ಪಟ್ಟಣದ ನಾಗರಿಕರ ಆರೋಪವಾಗಿದೆ. ಶನಿವಾರ ರಾತ್ರಿ ತ್ಯಾಜ್ಯನೀರಿನ ಘಟಕ ಸೋರಿಕೆಯಾಗಿ ಲಕ್ಷಾಂತರ ಲೀಟರ್‌ ತ್ಯಾಜ್ಯ ನೀರು ನದಿ ಸೇರಿದೆ.

ದೂಧಗಂಗಾ ನದಿ ವ್ಯಾಪ್ತಿಯಲ್ಲಿ ಸದಲಗಾ, ಮಲಿಕವಾಡ, ಯಕ್ಸಂಬಾ ಮತ್ತು ಕಲ್ಲೋಳಹಾಗೂ ನೆರೆಯ ಮಹಾರಾಷ್ಟ್ರದ ಅನೇಕ ಹಳ್ಳಿಗಳು ಬರುತ್ತವೆ. ಈಗಾಗಲೇ ತ್ಯಾಜ್ಯನೀರು ನದಿ ಸೇರಿರುವುದರಿಂದ ನದಿ ನೀರುಕಲುಷಿತಗೊಂಡಿದೆ. ನದಿ ನೀರನ್ನು ಮೂರು ದಿನ ಬಳಕೆ ಮಾಡದಂತೆ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಡಂಗೂರ ಸಾರುತ್ತಿದ್ದಾರೆ.

ಗಡಿ ಭಾಗದಲ್ಲಿ ಕೋವಿಡ್ ಹೊಡೆತದಿಂದ ಮೊದಲೆ ಜನ ಸಂಕಷ್ಟ ಎದುರಿಸುತ್ತಿದ್ದಾರೆ.ಇಂತಹ ಕಠಿಣ ಪರಿಸ್ಥಿಯಲ್ಲಿ ತ್ಯಾಜ್ಯ ನೀರಿನ ಘಟಕ ಸೋರಿಕೆಯಿಂದ ಅಪಾರ ಪ್ರಮಾಣದ ತ್ಯಾಜ್ಯ ನೀರು ನದಿಗೆ ಹೋಗಿರುವುದು ನದಿ ತೀರದ ಗ್ರಾಮಸ್ಥರ ಆಕ್ರೋಶ ಹೆಚ್ಚಿಸಿದೆ. ನೆತ್ತಿಸುಡುವ ಬಿಸಿಲಿನ ಝಳಕ್ಕೆ ಜನ ಕಂಗೆಟ್ಟುಹೋಗಿದ್ದಾರೆ. ದನಕರುಗಳಿಗೆ ಕುಡಿಯಲುನದಿ ನೀರು ಬಳಕೆ ಮಾಡುವ ನದಿ ತೀರದಗ್ರಾಮಸ್ಥರಿಗೆ ಇದು ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ನದಿಯಲ್ಲಿನ ಜಲಚರಗಳಿಗೂ ಅಪಾಯ ತಪ್ಪಿದ್ದಲ್ಲ.

ನಿರ್ಲಕ್ಷ ತೋರಿದ ಅಧಿಕಾರಿ ಹಾಗೂ ಗುತ್ತಿಗೆದಾರ ಮೇಲೆ ಕ್ರಮವಾಗಲಿ: ಪದೇ ಪದೇ ತ್ಯಾಜ್ಯ ನೀರು ಸೋರಿಕೆಯಾಗಿ ಹಳ್ಳದಮೂಲಕ ನದಿ ಸೇರುತ್ತದೆ. ಅಕ್ಕಪಕ್ಕದ ರೈತರಜಾನುವಾರಗಳ ಆರೋಗ್ಯದ ಮೇಲೆ ಪರಿಣಾಮಬಿರುತ್ತದೆ. ಈಗ ಅಪಾರ ಪ್ರಮಾಣದ ನೀರುಸೋರಿಕೆಯಾಗಿ ನದಿ ನೀರು ಮಲಿನವಾಗಿದೆ.ಈ ಘಟನೆಗೆ ನಿರ್ಲಕ್ಷ ತೋರಿದ ಅ ಧಿಕಾರಿಗಳುಮತ್ತು ಗುತ್ತಿಗೆದಾರರ ಮೇಲೆ ಕ್ರಮಜರುಗಿಸಬೇಕು ಎಂದು ಸದಲಗಾ ಪಟ್ಟಣದ ನಾಗರಿಕರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಸಂಗ್ರಹಣಾಘಟಕದ ತ್ಯಾಜ್ಯ ನೀರು ಸೋರಿಕೆಯಾಗಿದೆಎಂಬ ವಿಷಯ ತಿಳಿದ ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ತಕ್ಷಣ ಸದಲಗಾ ಪಟ್ಟಣದ ಯುಜಿಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಸದಲಗಾ ನಾಗರಿಕರ ಮಧ್ಯೆ ಮಾತಿನ ಚಕಮಕಿ ಕೂಡಾ ನಡೆಯಿತು.

ಕಳೆದ 2019ರಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ತ್ಯಾಜ್ಯ ನೀರಿನ ಘಟಕಕ್ಕೆ ಹಾನಿಯುಂಟಾಗಿದೆ. ಫೌಂಡೇಶನ್‌ದಲ್ಲಿ ಹಾನಿಯಾಗಿದ್ದರಿಂದ ತ್ಯಾಜ್ಯ ನೀರು ಹೊರಗಡೆ ಹೋಗಿದೆ. ಎರಡು ಅಥವಾ ಮೂರು ದಿನ ನದಿ ನೀರು ಸೇವಿಸಬಾರದೆಂದು ನದಿ ತೀರದ ಗ್ರಾಮಸ್ಥರಿಗೆ ಮನವಿ ಮಾಡಲಾಗುತ್ತಿದೆ. ಉಮೇಶ, ಎಇಇ, ನೀರು ಸರಬರಾಜು ಹಾಗೂ ಒಳಚರಂಡಿ ಚಿಕ್ಕೋಡಿ ವಿಭಾಗ.  ತ್ಯಾಜ್ಯ ನೀರಿನ ಘಟಕ ಸೋರಿಕೆಯಾಗಿದೆ ಎಂಬ ವಿಷಯ ಗಮನಕ್ಕೆ ಬಂದಿದೆ. ತಕ್ಷಣ ಪರಿಶೀಲಿಸಿ ವರದಿ ನೀಡುವಂತೆ ಪುರಸಭೆ ಮುಖ್ಯಾ ಧಿಕಾರಿಗೆ ಸೂಚನೆ ನೀಡಲಾಗಿದೆ. – ಪ್ರವೀಣ ಜೈನ್‌, ತಹಶೀಲ್ದಾರ್‌, ಚಿಕ್ಕೋಡಿ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.