ನೀರಿನ ಅಭಾವ; ಜನರ ಪರದಾಟ
Team Udayavani, Jun 9, 2020, 11:29 AM IST
ಅಥಣಿ: ಶಿರಹಟ್ಟಿ ಗ್ರಾಮದ ಪುನರ್ವಸತಿ ಕೇಂದ್ರದ ಮೂವತ್ತಕ್ಕೂ ಹೆಚ್ಚು ಕುಟುಂಬಗಳು ಕುಡಿವ ನೀರಿಗೆ ಪರಿತಪಿಸುವಂತಾಗಿದೆ. ಕಳೆದ 25 ದಿನಗಳ ಹಿಂದೆ ಕೊಳವೆ ಬಾವಿ ಮೋಟಾರ್ ತೊಂದರೆಯಿಂದ ಜನ-ಜಾನುವಾರುಗಳಿಗೆ ನೀರಿಲ್ಲದೆ ಸಮಸ್ಯೆ ಉಂಟಾಗಿದೆ.
ಅಕ್ಕಪಕ್ಕದಲ್ಲೂ ನೀರಿನ ಮೂಲ ಇಲ್ಲದೆ ತುಂಬಾ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಸ್ಥಳೀಯ ಪಿಡಿಒ ನಿರ್ಲಕ್ಷ ಮಾಡುತ್ತಿದ್ದಾರೆಂದು ಗ್ರಾಮಸ್ಥ ಸಂಜೀವ ಶಿವನೂರ ಆರೋಪಿಸಿದರು.
ಸಂದೀಪ್ ನೇಸೂರ ಎಂಬುವರು ಮಾತನಾಡಿ, ಹಲವಾರು ದಿನಗಳಿಂದ ಕೊಳವೆ ಬಾವಿ ಮೋಟಾರ್ ಬಂದ್ ಆಗಿದೆ. ಜನಪ್ರತಿನಿಧಿಗಳು ಈ ಕಡೆ ಬರೋಲ್ಲ, ಅಧಿಕಾರಿಗಳಿಗೆ ಹೇಳಿದರೆ ಯಾರೂ ಗಮನಿಸುತ್ತಿಲ್ಲ. ಆದಷ್ಟು ಬೇಗ ನಮಗೆ ನೀರು ಬರುವಂತೆ ಮಾಡಿ ಎಂದು ಮನವಿ ಮಾಡಿಕೊಂಡರು.
ಈ ಕುರಿತು ಶಿರಹಟ್ಟಿ ಗ್ರಾಮದ ಪಿಡಿಒ ಅಶೋಕ ಫಲಸಮಠ ಪ್ರತಿಕ್ರಿಯಿಸಿ, ಅಲ್ಲಿ ನೀರಿನ ಅಭಾವ ಆಗಿರುವುದು ನಿಜ. ಎರಡು ದಿನಗಳಲ್ಲಿ ಮೋಟಾರ್ ರಿಪೇರಿ ಮಾಡಿಸಿ ನೀರು ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ