ಬರಿದಾಗುತ್ತಿದೆ ಮಲಪ್ರಭೆ ಒಡಲು
Team Udayavani, May 27, 2019, 7:17 AM IST
ಬೆಳಗಾವಿ: ನೀರಿಲ್ಲದೇ ಬರಿದಾಗಿ ಕಾಣುತ್ತಿರುವ ಮಲಪ್ರಭಾ ಜಲಾಶಯ ಚಿತ್ರ.
ನೀರಾವರಿ ನಿಗಮದ ಅಧಿಕಾರಿಗಳ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಜಲಾಶಯದಲ್ಲಿ ಸುಮಾರು ಒಂದು ಟಿಎಂಸಿ ನೀರಿನ ಕೊರತೆ ಇದೆ. ಆದರೆ ಜೂನ್ ಅಂತ್ಯದವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವದಿಲ್ಲ. ಈಗ ಇರುವ ನೀರಿನಿಂದ ನಿಭಾಯಿಸಬಹುದು. ನೀರಾವರಿಗೆ ನೀರು ಪೂರೈಕೆ ನಿಲ್ಲಿಸಿರುವದರಿಂದ ಅಂತಹ ಗಂಭೀರತೆ ಇದುವರೆಗೆ ನಿರ್ಮಾಣ ಆಗಿಲ್ಲ.
ನಾಲ್ಕು ದಶಕಗಳ ಹಿಂದೆ ನಿರ್ಮಾಣವಾಗಿರುವ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.73 ಟಿಎಂಸಿ ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದಾಗಿನಿಂದ ಇದುವರೆಗೆ ನಾಲ್ಕು ಬಾರಿ ಮಾತ್ರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಕೇವಲ ಮಲಪ್ರಭಾ ನದಿಯನ್ನು ಮಾತ್ರ ಅವಲಂಬಿಸಿರುವದರಿಂದ ನದಿಯಲ್ಲಿ ಹರಿಯುವ ನೀರು ಹಾಗೂ ಅದರ ವ್ಯಾಪ್ತಿಯಲ್ಲಿ ಆಗುವ ಮಳೆಯ ಪ್ರಮಾಣದ ಮೇಲೆ ನೀರಿನ ಲಭ್ಯತೆಯ ಬಗ್ಗೆ ಅಂದಾಜಿಸಬೇಕಾಗಿದೆ.
ಸದ್ಯ ಜಲಾಶಯದಲ್ಲಿ 1ಟಿಎಂಸಿ ನೀರು ಇರುವದರಿಂದ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ. ಜಲಾಶಯದಲ್ಲಿ ಮೇ 26 ಅಂಕಿ ಅಂಶಗಳ ಪ್ರಕಾರ 1.408(ಬಳಕೆಗೆ) ಟಿಎಂಸಿ ನೀರಿನ ಸಂಗ್ರಹವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಕಡಿಮೆಯೇ. 2018 ಮೇ 26ರಂದು ಜಲಾಶಯದಲ್ಲಿ 1.903 ಟಿಎಂಸಿ ನೀರು ಸಂಗ್ರಹವಿತ್ತು. ಮುಂದಿನ ತಿಂಗಳು ಮಳೆ ಆರಂಭವಾಗುವದರಿಂದ ಜಲಾಶಯಕ್ಕೆ ಹೊಸ ನೀರು ಬರುತ್ತದೆ ಎನ್ನುತ್ತಾರೆ ನೀರಾವರಿ ನಿಗಮದ ಅಧಿಕಾರಿಗಳು.
ಮಲಪ್ರಭಾ ಜಲಾಶಯದ ಪಕ್ಕದಲ್ಲೇ ಇರುವ ನೂರಾರು ಗ್ರಾಮಗಳಿಗೆ ನದಿಯ ಮೂಲಕವೇ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಬೇಸಿಗೆ ಸಮಯದಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುವದರಿಂದ ಕೆಳಗಿನ ಹಳ್ಳಿಗಳಿಗೆ ನೀರು ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ಜನ ಮತ್ತು ಜಾನುವಾರುಗಳು ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗುತ್ತದೆ. ಜೂನ್ದಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೆ ಜಲಾಶಯದ ಒಡಲು ಖಾಲಿಯಾಗಿದೆ.
•ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ