ಅಡವಿ ಸಿದ್ಧೇಶ್ವರ ಮಠಕ್ಕೆ ನುಗ್ಗಿದ ನೀರು
• 3 ಗಂಟೆಗಳ ಯಶಸ್ವಿ ಕಾರ್ಯಾಚರಣೆ •19 ಜನರ ರಕ್ಷಣೆ
Team Udayavani, Aug 5, 2019, 9:11 AM IST
ಗೋಕಾಕ: ತಾಲೂಕಿನಲ್ಲಿ ಸತತ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ.
ತಾಲೂಕಿನ ಕುಂದರಗಿ ಗ್ರಾಮದ ಅಡವಿ ಸಿದ್ಧೇಶ್ವರ ಮಠಕ್ಕೆ ಬಳ್ಳಾರಿ ಹಳ್ಳದ ನೀರು ಹೊಕ್ಕಿದ್ದರಿಂದ ಮಠದಲ್ಲಿ ಸಿಲುಕಿಕೊಂಡಿದ್ದ 19 ಜನರನ್ನು ಪೊಲೀಸ್ ಇಲಾಖೆ, ತಾಲೂಕಾಡಳಿತ, ಗೋಕಾಕದ ಅಯ್ಯುಬ ಖಾನ ತಂಡ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆ ತಂದಿದ್ದಾರೆ.
ತಡರಾತ್ರಿಯವರೆಗೆ ಹರಿವು ಕಡಿಮೆ ಆಗದೇ ಹೆಚ್ಚಾಗುತ್ತಿರುವುದನ್ನು ಮನಗಂಡ ಮಠದಲ್ಲಿ ವಾಸವಿದ್ದ ಸ್ವಾಮೀಜಿಯೊಬ್ಬರು ರವಿವಾರ ಬೆಳಗ್ಗೆ ಮೊಬೈಲ್ ಮೂಲಕ ಮಠದ ಸ್ವಾಮೀಜಿ ಅವರಿಗೆ ತಿಳಿಸಿದಾಗ ಅವರು ಹತ್ತಿರದ ಅಂಕಲಗಿ ಠಾಣೆಗೆ ವಿಷಯ ತಿಳಿಸಿದ್ದಾರೆ.
ನಂತರ ಕಾರ್ಯ ಪ್ರವೃತ್ತರಾದ ಪೊಲೀಸ್ ಇಲಾಖೆ ಆಗ್ನಿಶಾಮಕ ದಳದೊಂದಿಗೆ ಸ್ಥಳಕ್ಕೆ ಆಗಮಿಸಿ ಜಿಲ್ಲಾಡಳಿತಕ್ಕೆ ವಿಷಯ ತಿಳಿಸಿದ್ದಾರೆ. ನಂತರ ಗೋಕಾಕ ನಗರದ ಅಯ್ಯುಬ ಖಾನ ಅವರಿಗೆ ಮೊಬೈಲ್ ಮೂಲಕ ಕರೆ ಮಾಡಿ ಅವರನ್ನು ಕರೆಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ 14 ಜನರ ತಂಡ 4 ಬೋಟ್ಗಳೊಂದಿಗೆ 3 ಗಂಟೆಗಳ ಕಾಲ ಯಶಸ್ವಿ ಕಾರ್ಯಾಚರಣೆ ನಡೆಸಿ ಮಠದಲ್ಲಿದ್ದ 12 ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 19 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮಠದಲ್ಲಿದ್ದ ಸಾಕು ಪ್ರಾಣಿಗಳ ಹಗ್ಗವನ್ನು ಬಿಚ್ಚಿ ಬಿಡಲಾಗಿದೆ.
ಬೈಲಹೊಂಗಲ ಉಪವಿಭಾಗ ಅಧಿಕಾರಿ ಶಿವಾನಂದ ಭಜಂತ್ರಿ, ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೊಳ, ಡಿವೈಎಸ್ಪಿ ಡಿ.ಟಿ. ಪ್ರಭು, ಸಿಪಿಐ ಶ್ರೀಧರ ಸಾತಾರೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.
ಸಂಚಾರ ಸ್ಥಗಿತ: ಸದ್ಯ ಅಂಕಲಗಿ ಗ್ರಾಮದ ಬಳಿ ಹೆಸ್ಕಾಂ ಇಲಾಖೆಯ ಹತ್ತಿರವಿರುವ ಇನ್ನೊಂದು ಸೇತುವೆ ಮೇಲೆ ನೀರು ಹೆಚ್ಚಾಗಿದ್ದರಿಂದ ಸಂಚಾರ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ