![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
15 ಹಳ್ಳಿಗಳಿಗೆ ಜಲಧಾರೆ ಯೋಜನೆ ನೀರು
•105 ಕೋಟಿ ವೆಚ್ಚ •ಐಟಿ ಪಾರ್ಕ್; ರೆಪ್ಲಿಕಾ ಪಾರ್ಕ್ ನಿರ್ಮಾಣ
Team Udayavani, May 15, 2019, 12:05 PM IST
![belegavi-tdy-2](https://www.udayavani.com/wp-content/uploads/2019/05/belegavi-tdy-2-515x465.jpg)
ಬೆಳಗಾವಿ: ದಕ್ಷಿಣ ಕ್ಷೇತ್ರದ 15 ಹಳ್ಳಿಗಳಲ್ಲಿ ಹಲವಾರು ವರ್ಷಗಳಿಂದ ವಿಪರೀತ ನೀರಿನ ಸಮಸ್ಯೆ ಇದ್ದು, ಇದಕ್ಕೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆಯಡಿ ನೀರಿನ ಸಮಸ್ಯೆಗೆ ಮುಕ್ತಿ ನೀಡಲಾಗುತ್ತಿದೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೀರನವಾಡಿ, ಮಚ್ಛೆ, ಧಾಮಣೆ ಹಾಗೂ ಯಳ್ಳೂರು ಗ್ರಾಪಂ ವ್ಯಾಪ್ತಿಯ 15 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಇದಕ್ಕಾಗಿ ಖಾನಾಪುರದಿಂದ ನೀರು ಪೂರೈಸುವ ಯೋಜನೆಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಪ್ರಸ್ತಾವನೆಗೆ ಮಂಜೂರಾತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಗರದಲ್ಲಿ ಹೆರಿಟೆಜ್ ಪಾರ್ಕ್ 3ನೇ ಹಂತದಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣ ಹಾಗೂ ದೇಶಕ್ಕಾಗಿ ಹೋರಾಡಿದ ಮಹಾನ್ ನಾಯಕರ ರೆಪ್ಲಿಕಾ ಪಾರ್ಕ್ ನಿರ್ಮಾಣಕ್ಕಾಗಿ ವಿಧಾನಸಭೆ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಐಟಿ ಪಾರ್ಕ್ ನಿರ್ಮಾಣವಾದರೆ ಇಡೀ ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಮಹತ್ವದ ಪಾತ್ರ ವಹಿಸಲಿದ್ದು, ಸುಮಾರು 40 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ ಎಂದು ವಿವರಿಸಿದರು.
ನೇಕಾರಿಕೆ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜವಳಿ ಪಾರ್ಕ್, ಆಧುನಿಕ ಟೆಕ್ಸಟೈಲ್ ಟ್ರೇನಿಂಗ್ ಸೆಂಟರ್ ಹಾಗೂ ಕ್ಲಸ್ಟರ್ ಮಾದರಿಯ ವರ್ಕ್ ಕಮ್ ರೆಸಿಡೆನ್ಸಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರದಲ್ಲಿ ಶಾಪಿಂಗ್ ಉತ್ಸವ ಏರ್ಪಡಿಸುವ ಯೋಜನೆ ರೂಪಿಸಲಾಗಿದೆ ಎಂದರು.
10 ಕೋಟಿ ರೂ. ವೆಚ್ಚದ ಅನುದಾನದಲ್ಲಿ ನಗರದ ವಿವಿಧ ರಸ್ತೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. 2 ಕೋಟಿ ರೂ. ವೆಚ್ಚದಲ್ಲಿ ನಾಥ ಪೈ ವೃತ್ತದಿಂದ ಬ್ಯಾಂಕ್ ಆಫ್ ಇಂಡಿಯಾ ವರೆಗಿನ ರಸ್ತೆಗೆ ಯು.ಜಿ. ಕೇಬಲ್ ಮತ್ತು ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ, ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣ, ನವೀಕರಣಕ್ಕೆ 1.74 ಕೋಟಿ ರೂ., 12.94 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳ ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.