ಮಲಪ್ರಭಾ ನದಿಯಿಂದ 137 ಹಳ್ಳಿಗಳಿಗೆ ನೀರು ಪೂರೈಕೆ
ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮುಂದೆ ನಿಂತುಕೊಂಡು ಕೆಲಸ ಮಾಡಿಸಿಕೊಳ್ಳಬೇಕು.
Team Udayavani, Feb 9, 2022, 6:03 PM IST
ರಾಮದುರ್ಗ: ಗ್ರಾಮೀಣ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಸದುದ್ದೇಶದಿಂದ 340 ಕೋಟಿ ಅನುದಾನದಲ್ಲಿ ಮಲಪ್ರಭಾ ನದಿಯಿಂದ 137 ಹಳ್ಳಿಗಳಿಗೆ ನೀರು ಪೂರೈಸುವ ಕಾರ್ಯವನ್ನು ಸದ್ಯದಲ್ಲಿಯೇ ಕೈಗೊಳ್ಳಲಾಗುವುದು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ತಾಲೂಕಿನ ಅವರಾದಿಯಲ್ಲಿ 22.34 ಲಕ್ಷ ರೂ., ರೇವಡಿಕೊಪ್ಪದಲ್ಲಿ 24.10 ಲಕ್ಷ ರೂ., ದೊಡಮಂಗಡಿಯಲ್ಲಿ 20.99 ರೂ., ರಂಕಲಕೊಪ್ಪದಲ್ಲಿ 10.64 ಲಕ್ಷ ರೂ., ಹಳೇ ತೋರಗಲ್ಲ ತಾಂಡಾದಲ್ಲಿ 10.69 ಲಕ್ಷ ರೂ., ಸರ್ವಾಪುರದಲ್ಲಿ 10.69 ಏರಟ್ಯಾಂಕ್ ಹಾಗೂ ಸುಳ್ಳಿಕೇರಿಯಲ್ಲಿ 10.69 ಲಕ್ಷ ರೂ. ಏರಟ್ಯಾಂಕ್ ಹಾಗೂ ರೂ.12 ಲಕ್ಷದಲ್ಲಿ ಶಾಲಾ ಕೊಠಡಿ ನಿರ್ಮಾಣ ಸೇರಿದಂತೆ ಒಟ್ಟು 1.22 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ 340 ಕೋಟಿ ಯೋಜನೆಯ ಕಾಮಗಾರಿಗೆ ತಾಂತ್ರಿಕ ಸಮಿತಿ ಅನುಮೋದನೆ ಆಗಿದ್ದು, ಕ್ಯಾಬಿನೆಟ್ ಅನುಮೋದನೆಗೊಂಡ ನಂತರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಮಗಾರಿ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮುಂದೆ ನಿಂತುಕೊಂಡು ಕೆಲಸ ಮಾಡಿಸಿಕೊಳ್ಳಬೇಕು. ಗುತ್ತಿಗೆದಾರರು ಏನಾದರು ಕಳಪೆ ಮಾಡುತ್ತಿರುವ ಬಗ್ಗೆ ಕಂಡುಬಂದಲ್ಲಿ ತಮ್ಮ ಗಮನಕ್ಕೆ ತಂದಲ್ಲಿ ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.
ಸರಕಾರ ಗ್ರಾಮಗಳ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಒದಗಿಸುತ್ತಿದ್ದು, ಅದರ ಸಮರ್ಪಕ ಬಳಕೆ ಮಾಡಿಕೊಳ್ಳುವಲ್ಲಿ ಗ್ರಾಮಸ್ಥರು ಮುಂದಾಗಬೇಕು. ದೊಡಮಂಗಡಿ ಗ್ರಾಮದಲ್ಲಿ ಶಾಲೆ ನಿರ್ಮಾಣ ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಘಟಕನೂರ ಗ್ರಾ.ಪಂ ಅಧ್ಯಕ್ಷ ಈರಪ್ಪ ಕೂಗಿ, ತುರುನೂರ ಗ್ರಾ.ಪಂ ಅಧ್ಯಕ್ಷೆ ಶಾಂತವ್ವ ಗುದಗಿ, ಮುಖಂಡರಾದ ತಿರಕಪ್ಪ ಬಾಡಗಾರ, ನಿಂಗಪ್ಪ ಗುದಗಿ, ಸಿದ್ದನಗೌಡ ಪಾಟೀಲ, ಲಕ್ಷ್ಮಣ ಬಿಲ್ಲಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಶ್ರೀನಿವಾಸ ವಿಶ್ವಕರ್ಮ, ಮುರ್ತೋಜಿ ಪೆಂಡಾರಿ, ಮಹಮ್ಮದಗೌಸ್ ಖಾಜಿ ಸೇರಿದಂತೆ ಗ್ರಾಪಂ ಸದಸ್ಯರು, ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ