ಬ್ರ್ಯಾಂಚ್ ಕೆನಾಲ್‌ಗೆ ನೀರು; ರೈತರಲ್ಲಿ ಸಂತಸ

ವಿಶೇಷ ಅನುದಾನ ಮಂಜೂರು ಮಾಡಿಸಿ 33 ಕಿ.ಮೀ ಕಾಲುವೆ ದುರಸ್ತಿ ಮಾಡಿಸಿದ್ದಾರೆ.

Team Udayavani, Jan 16, 2023, 4:00 PM IST

ಬ್ರ್ಯಾಂಚ್ ಕೆನಾಲ್‌ಗೆ ನೀರು; ರೈತರಲ್ಲಿ ಸಂತಸ

ಚಿಕ್ಕೋಡಿ: ಕಸ ಕಡ್ಡಿಯಿಂದ ಹೂಳು ತುಂಬಿಕೊಂಡು ನೀರು ಸೋರಿಕೆಯಾಗುತ್ತಿದ್ದ ಚಿಕ್ಕೋಡಿ ಸಿಬಿಸಿ ಕಾಲುವೆ ಸದ್ಯ ಸಂಪೂರ್ಣ ದುರಸ್ತಿಗೊಂಡಿದೆ. ಇದರಿಂದ ಕೊನೆ ಹಳ್ಳಿಯ ತನಕ ನೀರು ತಲುಪುತ್ತದೆ ಎನ್ನುವ ಆಶಾಭಾವನೆ ರೈತರಲ್ಲಿ ಮೂಡಿದೆ. ಚಿಕ್ಕೋಡಿ ಸಿಬಿಸಿ ಕಾಲುವೆಯಲ್ಲಿ ಕಸ, ಕಡ್ಡಿ ಹಾಗೂ ಕಾಲುವೆಗೆ ಬರುವ ನೀರು ಸೋರಿಕೆಯಿಂದ ರೈತರಿಗೆ ಸಮರ್ಪಕ ನೀರು ತಲುಪುತ್ತಿರಲಿಲ್ಲ. ನೀರಾವರಿ ಇಲಾಖೆಗೆ ಹಲವು ಬಾರಿ ಮನವಿ ಮಾಡಿ ರೈತರು ಕೂಡ ಬೇಸತ್ತು ಹೋಗಿದ್ದರು. ಈಗ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ರೈತರ ಸಮಸ್ಯೆಗೆ ಸ್ಪಂದಿಸಿ ಸಿಬಿಸಿ 33 ಕಿ.ಮೀ ಕಾಲುವೆ ದುರಸ್ತಿಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಿದ್ದಾರೆ.

ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಚಿಕ್ಕೋಡಿ ಬ್ರ್ಯಾಂಚ್ ಕೆನಾಲ್‌(ಸಿಬಿಸಿ ಕಾಲುವೆ)ಯಲ್ಲಿ ಕಸ, ಕಡ್ಡಿ ತುಂಬಿಕೊಂಡಿತ್ತು. ಅಲ್ಲಲ್ಲಿ ಕಾಲುವೆ ಶಿಥಿಲವಾಗಿ ನೀರು ಸೋರಿಕೆಯಾಗಿ ಹಳ್ಳ ಸೇರುತ್ತಿತ್ತು. ರೈತರ ಮನವಿಗೆ ಸ್ಪಂದಿಸಿದ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ನೀರಾವರಿ ಇಲಾಖೆಯಿಂದ 2.90 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿಸಿ 33 ಕಿ.ಮೀ ಕಾಲುವೆ ದುರಸ್ತಿ ಮಾಡಿಸಿದ್ದಾರೆ.

ಹಿಡಕಲ್‌ ಜಲಾಶಯ ನೀರು ಮತ್ತು ಕೃಷ್ಣಾ ನದಿ ನೀರು ಈ ಕಾಲುವೆಗೆ ಹರಿಯುವುದರಿಂದ ಸಿಬಿಸಿ ಕಾಲುವೆ ವ್ಯಾಪ್ತಿಯ ಬಸವನಾಳಗಡ್ಡೆ, ಕೇರೂರ, ಹಿರೇಕೊಡಿ, ಶಿರಗಾಂವ, ಶಿರಗಾಂವಾಡಿ, ತಪಕರವಾಡಿ, ನವಲಿಹಾಳ, ಸಂಕನವಾಡಿ, ಖಡಕಲಾಟ, ಚಿಕ್ಕಲವಾಳ, ನೇಜ ರೈತರಿಗೆ ಉಪಯೋಗವಾಗಲಿದೆ. ನರೇಗಾ ಯೋಜನೆಯಡಿ ಸಹ ಕಾಲುವೆ ದುರಸ್ತಿ ಕಾರ್ಯ ನಡೆದಿದೆ. ತಾಲೂಕಿನ ನೇಜ ಮತ್ತು ಹಿರೇಕೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1 ಕೋಟಿ ರೂ. ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ಕೃಷ್ಣಾ ನದಿಯ ಕಲ್ಲೋಳ ಹತ್ತಿರ ಜಾಕ್ವೆಲ್‌ದಿಂದ ನೀರನ್ನು ಎತ್ತಿ ಬಸವನಾಳಗಡ್ಡೆ ಹತ್ತಿರ ಸಿಬಿಸಿ ಕಾಲುವೆಗೆ ನೀರು ಬಿಡಲಾಗಿದೆ. ಅಲ್ಲಿಂದ ಕಾಲುವೆ ಕೊನೆ ಹಳ್ಳಿಗೆ ನೀರು ತಲುಪಿಸುವ ಪಣ ಹುಕ್ಕೇರಿ ಕುಟುಂಬದ್ದಾಗಿದೆ. ಈಗ ದುರಸ್ತಿಗೊಂಡಿರುವ ಕಾಲುವೆಗೆ ನೀರು ಸರಾಗವಾಗಿ ಹೋಗುತ್ತದೆ. ರೈತರ ಬೇಡಿಕೆ ಅನುಗುಣವಾಗಿ ನೀರು ಬಿಡುವ ಸಂಕಲ್ಪ ಗಣೇಶ ಹುಕ್ಕೇರಿ ಮಾಡಿರುವುದು ಗಡಿ ಭಾಗದ ರೈತರಿಗೆ ಭಾರಿ ಅನುಕೂಲವಾಗಲಿದೆ.

ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

boರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ

1-sadsdasd

Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ

3-sathish-jarakoholi

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್‌ ಜಾರಕಿಹೊಳಿ

ಉಗರಗೋಳ: ಸಂಪ್ರದಾಯ-ಸಂಸ್ಕೃತಿ ಉಳಿಸುವ ಜಾತ್ರೆಗಳು

ಉಗರಗೋಳ: ಸಂಪ್ರದಾಯ-ಸಂಸ್ಕೃತಿ ಉಳಿಸುವ ಜಾತ್ರೆಗಳು

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ