ನಿರ್ವಹಣೆಗೆ ಕಾಯುತ್ತಿವೆ ನೀರಿನ ಘಟಕಗಳು


Team Udayavani, Mar 14, 2020, 1:12 PM IST

ನಿರ್ವಹಣೆಗೆ ಕಾಯುತ್ತಿವೆ ನೀರಿನ ಘಟಕಗಳು

ಸಾಂದರ್ಭಿಕ ಚಿತ್ರ

ಬೈಲಹೊಂಗಲ: ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸರ್ಕಾರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಾರಂಭಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ನಿಷ್ಪಯೋಜಕವಾಗಿ ಗ್ರಾಮಸ್ಥರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಬೆಳಗಾವಿ ಜಿಪಂನ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದವರ ಉಸ್ತುವಾರಿಯಲ್ಲಿರುವ ಬೈಲಹೊಂಗಲ ತಾಲೂಕಿನಲ್ಲಿ 92 ಹಾಗೂ ಕಿತ್ತೂರು ತಾಲೂಕಿನಲ್ಲಿ 43 ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೊಟ್ಯಂತರ ಖರ್ಚು ಮಾಡಿ ನಿರ್ಮಿಸಲಾಗಿದೆ. ಆದರೆ ದೊಡವಾಡದಲ್ಲಿ ಒಂದು ಘಟಕ ಧರ್ಮಸ್ಥಳ ಯೋಜನೆಯಡಿ ಕಾರ್ಯನಿರ್ವಹಿಸುತ್ತಿದೆ. ಇನ್ನೂ ಹಲವು ಘಟಕಗಳನ್ನು ಈ ಸಂಘಟನೆ ತಾವು ನಿರ್ವಹಿಸುವುದಾಗಿಸರ್ಕಾರದ ಮುಂದೆ ಬೇಡಿಕೆ ಇಟ್ಟಿದೆ. ಈಗೀರುವ ಘಟಕಗಳು ಸೂಕ್ತ ನಿರ್ವಹಣೆಯಿಲ್ಲದೆ ಹಲವೆಡೆ ಕೆಟ್ಟು ನಿಂತ ಸ್ಥಿತಿಯಲ್ಲಿವೆ.

ಘಟಕಗಳ ನಿರ್ವಹಣೆ:ಈ ಹಿಂದೆ ಕರ್ನಾಟಕ ರೂರಲ್‌ ಇನ್‌ಫ್ರಾಸ್ಟ್ರಕ್ಚರ್‌ ಡೆವಲಪ್‌ ಮೆಂಟ್‌ ಲಿ.(ಕೆಆರ್‌ ಐಡಿಎಲ್‌) ಮೇಲು ಉಸ್ತುವಾರಿಯಲ್ಲಿದ್ದ ಘಟಕಗಳನ್ನು ಸದ್ಯ ಜಿಪಂನ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದವರು ನೋಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಘಟಕಗಳ ಸ್ಥಾಪನೆಗೆ 635.40 ಲಕ್ಷ ವ್ಯಯಿಸಲಾಗಿದೆ. ಈ ಯೋಜನೆಯಡಿ ದೊಡ್ಡ ಘಟಕಗಳನ್ನು ಸ್ಥಾಪಿಸಲು ಪ್ರತಿ ಒಂದಕ್ಕೆ 8 ಲಕ್ಷ 15 ಲಕ್ಷ 85 ಸಾವಿರ ರೂ. ಖರ್ಚು ಮಾಡಲಾಗಿದೆ. ಇಷ್ಟೆಲ್ಲ ಹಣ ಖರ್ಚು ವ್ಯಯಿಸಿದ್ದರೂ ನಾಗರಿಕರಿಗೆ ಕುಡಿಯುವ ನೀರು ಸಮರ್ಪಕವಾಗಿ ಸಿಗುತ್ತಿಲ್ಲ. ಗ್ರಾಪಂನವರು 1 ರೂ. ಗೆ 10ಲೀ ನೀರು ಕೊಟ್ಟು ಬಂದಂತಹ ಹಣವನ್ನು ಬಳಕೆಗೆ ತೆಗೆದುಕೊಂಡು ಅದರ ಘಟಕ ನಿರ್ವಹಣೆಗೆ ಮೊತ್ತವನ್ನು ಬಳಸಲಾಗುತ್ತಿದೆ. ಹಲವೆಡೆ ಎಟಿಎಂ ಕಾರ್ಡ್ ನಂತಹ ಕಾರ್ಡ್‌ ನೀಡಿ ಬಳಕೆ ಮಾಡಲಾಗುತ್ತಿದೆ.

ಘಟಕದ ಉದ್ದೇಶ: ಹಲವಾರು ಗ್ರಾಮಗಳಲ್ಲಿ ಬೊರವೆಲ್‌, ಬಾಂವಿಗಳಿಂದ ಕುಡಿಯುವ ನೀರು ಬಳಸಲಾಗುತ್ತಿದೆ. ಆದರೆ ಇದರಿಂದ ಕಲುಷಿತ ನೀರಿನಿಂದ ಜನರಿಗೆ ಕಾಲರಾ, ವಾಂತಿಬೇದಿ ಇತ್ಯಾದಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಇರುತ್ತದೆ. ಇಂಥ ಸಮಸ್ಯೆ ದೂರ ಮಾಡಲು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರತಿ ಗ್ರಾಮಗಳಲ್ಲಿ ನಿರ್ಮಿಸಲಾಗಿದೆ. ಈ ಘಟಕಗಳಲ್ಲಿ ಶುದ್ಧ ನೀರು ಸಿಗುವದರಿಂದ ಜನರಿಗೆ ಒಳ್ಳೆಯ ಯೋಜನೆಯಾಗಿ ಪರಿಣಮಿಸಿದೆ. ಬೇಸಿಗೆ ವೇಳೆಯಲ್ಲಿ ನೀರಿನ ಕೊರತೆ ಹೆಚ್ಚಾಗಿರುವುದರಿಂದ ಕುಡಿಯುವ ನೀರಿನ ಘಟಕಗಳನ್ನು ಶೀಘ್ರ ಪ್ರಾರಂಭಿಸಿದಲ್ಲಿ ಜನರ ನೀರಿನ ಸಮಸ್ಯೆ ನಿಗಿಸಬಹುದಾಗಿದೆ. ಇನ್ನಾದರೂ ಇಂಥ ಘಟಕಗಳ ನಿರ್ವಹಣೆಗೆ ಸಮಿತಿ ನಿರ್ಮಿಸಿ ಸೂಕ್ತ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕಿದೆ.

ಎನ್‌ಜಿಒಗಳಿಂದ ಟಿಂಡರ್‌ ಕರೆದು ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಎನ್‌ಜಿಒ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಅಡೆತಡೆಗಳಿಲ್ಲದೆ ನಡೆಸಲಾಗುತ್ತಿದೆ. ತಾಲೂಕಿನಲ್ಲಿ 7ರಿಂದ 8 ಕಡೆ ಮಷೀನ್‌ ಹಾಳಾಗಿವೆ. ಶೀಘ್ರವೇ ದುರಸ್ತಿಗೊಳಿಸಲಾಗುವುದು.  ಎಚ್‌.ಕೆ. ವಂಟಗೂಡಿ, ಕಾರ್ಯನಿರ್ವಾಹಕ ಎಂಜಿನಿಯರ್‌, ಜಿಪಂ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಬೈಲಹೊಂಗಲ

 

-ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.