ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ: ಸಚಿವ ಸೋಮಣ್ಣ
Team Udayavani, Nov 4, 2019, 11:52 AM IST
ಬೆಳಗಾವಿ: ಜಗತ್ತಿಗೆ ಅನರ್ಹರ ಶಾಸಕರು ಯಾಕೇ ರಾಜೀನಾಮೆ ಕೊಟ್ಟಿದ್ದಾರೆ ಅನ್ನುವುದು ಗೊತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅವ್ಯವಸ್ಥೆ, ಗೌರವ ಕೊಡದ ಬಗ್ಗೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅನರ್ಹ ಶಾಸಕರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಂತ ನಾವು ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಪಕ್ಷ ದವರು ವಿನಾಕಾರಣ ಗೊಂದಲ ಹುಟ್ಟುಹಾಕುತ್ತಿದ್ದಾರೆ ಎಂದರು. ಅನರ್ಹ ಶಾಸಕರ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲಾ..ಧೀರನು ಅಲ್ಲ. ಇದು ವಿರೋಧ ಪಕ್ಷದವರಿಗೆ ಅನ್ವಯವಾಗುತ್ತದೆ.ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ಎಂದು ಟಾಂಗ್ ಕೊಟ್ಟರು.
ಅನರ್ಹ ಶಾಸಕರು ಹಾಗೂ ಅವರ ತೀರ್ಮಾನದ ಬಗ್ಗೆ ನಮಗೆ ಗೌರವ ಇದೆ ,ಬಿಎಸ್ ವೈ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುತ್ತಿರುವುದು ಹಾಗೂ ಜೆಡಿಎಸ್ ಬಿಜೆಪಿ ಗೆ ಬೆಂಬಲಿಸುವ ವಿಚಾರದ ಬಗ್ಗೆ ಮಾತಾನಾಡಿದ ಅವರು ಸೋಮಣ್ಣ ಕಾಂಗ್ರೆಸ್, ಜೆಡಿಎಸ್ ಹೇಳಿಕೆಗಳು ತೋಳ ಕುರಿಮರಿ ಕಥೆ ಆಗಿದೆ. ಬಿಎಸವೈ ಸರ್ಕಾರ ಸುಭದ್ರವಾಗಿ ಇರಲಿದೆ. ಪೂರ್ಣಾವಧಿಯ ಆಡಳಿತ ನೀಡಲಿದೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದಾಗ ವೈರಾಗ್ಯದ ಮಾತುಗಳು ಆಡಿದ್ದಾರೆ ಮಹದಾಯಿ ವಿವಾದ ಕಾನೂನು ಚೌಕಟ್ಟಿನಲ್ಲಿ ಪರಿಹರಿಸುವ ಕೆಲಸ ಆಗುತ್ತಿದೆ. ಈ ವಿಚಾರದಲ್ಲಿ ಸಿಎಂ ಹೆಚ್ಚಿನ ಒತ್ತು ನೀಡುವ ಮೂಲಕ ಬದ್ಧತೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ