ವಿವಿಧತೆಯಲ್ಲಿ ಏಕತೆ ಸಾರುವ ದೇಶ ನಮ್ಮದು
ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರೆಯಲ್ಲಿ ಶಾಸಕ ಬಾಲಚಂದ್ರ-ಸರ್ವೋತ್ತಮ-ರಾಹುಲ ಜಾರಕಿಹೊಳಿ ಭಾಗಿ
Team Udayavani, May 17, 2022, 12:59 PM IST
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು ಇಟ್ಟುಕೊಂಡು ನಿರಂತರವಾಗಿ ದೇವರ ಸ್ಮರಣೆಯಲ್ಲಿ ಇರುತ್ತಾರೆ.ತಮ್ಮ ಕಷ್ಟ-ಕಾರ್ಪಣ್ಯಗಳ ನಿವಾರಣೆಗೆ ದೇವರಲ್ಲಿ ಮೊರೆ ಹೋಗುತ್ತಾರೆಂದು ತಿಳಿಸಿದರು.
ಗಣೇಶವಾಡಿ ಗ್ರಾಮಸ್ಥರು ಮೊದಲಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡವರು. ನಮಗೆ ಪ್ರತಿ ಹಂತದಲ್ಲೂ ಬೆನ್ನೆಲುಬಾಗಿ ನಿಂತವರು. ಕಳೆದ ಎರಡು ದಶಕಗಳಿಂದ ಈ ಕ್ಷೇತ್ರದ ಜನರೊಂದಿಗೆ ನಿಕಟ ಬಾಂಧವ್ಯವನ್ನಿಟ್ಟುಕೊಂಡು 18 ವರ್ಷಗಳಿಂದ ಈ ಭಾಗದ ಪ್ರತಿನಿಧಿಯಾಗಿ ಗಣೇಶವಾಡಿ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಹಲವಾರು ಜನೋಪಯೋಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಗ್ರಾಮಸ್ಥರ ಒಗ್ಗಟ್ಟಿನ ಸಂಘಟನೆಯಿಂದಾಗಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡಿದ್ದು, ಲಕ್ಷೀದೇವಿಯ ಕೃಪೆಯಿಂದ ಎಲ್ಲರಿಗೂ ಒಳ್ಳೆಯದಾಗಲಿ. ಮಳೆ-ಬೆಳೆ ಚೆನ್ನಾಗಿ ಬಂದು ಸಮೃದ್ಧಿ ಹೊಂದಲಿ ಎಂದು ಅವರು ಆಶಿಸಿದರು.
ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದರು.
ಬೆಂಗಳೂರು ಸಹಕಾರ ಮಾರಾಟ ಮಹಾಮಂಡಳಿ ಉಪಾಧ್ಯಕ್ಷ ಬಸಗೌಡ ಪಾಟೀಲ(ನಾಗನೂರ), ಯುವ ನಾಯಕ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ಪ್ರಭಾಶುಗರ್ ಅಧ್ಯಕ್ಷ ಅಶೋಕ ಪಾಟೀಲ, ಪ್ರಭಾಶುಗರ್ ನಿರ್ದೇಶಕರಾದ ಬಸಗೌಡ ಪಾಟೀಲ(ಕಲ್ಲೋಳಿ), ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಮಾಳಪ್ಪ ಜಾಗನೂರ, ಎಪಿಎಂಸಿ ಮಾಜಿ ಅಧ್ಯಕ್ಷ ಶ್ರೀಪತಿ ಗಣೇಶವಾಡಿ, ಮದನ ದೇಶಪಾಂಡೆ, ನ್ಯಾಯವಾದಿ ಸುರೇಶ ಜಾಧವ, ಅರಭಾವಿ ಪಿಕೆಪಿಎಸ್ ಅಧ್ಯಕ್ಷ ಹಣಮಂತ ಚಿಪ್ಪಲಕಟ್ಟಿ, ಕೆಂಚಪ್ಪ ಪಾಟೀಲ, ಹಣಮಂತ ಜಾಧವ, ಬಸವರಾಜ ಮಾಳ್ಯಾಗೋಳ, ಬಾಳಪ್ಪ ಗಣೇಶವಾಡಿ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ತಳವಾರ, ಬಾಳೇಶ ಜಾಧವ, ಮಹಾದೇವ ತುಕ್ಕಾನಟ್ಟಿ, ಸಿದ್ರಾಮ ಮೂಲಿಮನಿ, ಗ್ರಾಮ ಪಂಚಾಯತ ಸದಸ್ಯರು, ಸುತ್ತಮುತ್ತಲಿನ ಪ್ರಮುಖರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಸತ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ