ನಮ್ಮ ಬಳಿ ಹಣವಿಲ್ಲ, ಹೀಗಾಗಿ ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ: ಸಾರಿಗೆ ಸಚಿವ ಸವದಿ
Team Udayavani, Nov 14, 2020, 4:35 PM IST
ಬೆಳಗಾವಿ: ಕೋವಿಡ್ ಕಾರಣದಿಂದ ಬಸ್ ಸಂಚಾರಕ್ಕೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ನಮಗೆ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ನೌಕರರಿಗೆ ಸಂಬಳ ಕೊಡಲು ನಮ್ಮ ಬಳಿ ದುಡ್ಡಿಲ್ಲ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಮಂದಿ ನೌಕರರಿದ್ದಾರೆ. ಅವರಿಗೆ ಸಂಬಳ ನೀಡಲು 325 ಕೋಟಿ ರೂ. ಬೇಕಾಗುತ್ತದೆ. ಲಾಕ್ ಡೌನ್ ನಂತರ ಮೊದಲ ಎರಡು ತಿಂಗಳು ಸರ್ಕಾರದಿಂದ ಸಂಬಳ ನೀಡಿದ್ದೇವೆ. ಆದರೆ ಬಸ್ನಲ್ಲಿ ಯಾರು ಜನ ಬರುತ್ತಿಲ್ಲ. ಹೀಗಾಗಿ ಆದಾಯ ಬರೀ ಡೀಸೆಲ್ಗೆ ಸಾಕಾಗುತ್ತಿದೆ ಎಂದರು.
ಇದನ್ನೂ ಓದಿ:ಗಂಡು ಮಗುವಿಗಾಗಿ ಮಗಳನ್ನೇ ಬಲಿಕೊಟ್ಟ ತಂದೆ! ಮಾಂತ್ರಿಕನ ಬಂಧನಕ್ಕೆ ಶೋಧ
ಸಂಬಳಕ್ಕಾಗಿ ಮೂರು ತಿಂಗಳಿಂದ ಎರಡು ಬಾರಿ ಪ್ರಸ್ತಾವನೆ ಕಳುಹಿಸಿದ್ದೆವು. ಅದರಲ್ಲಿ ಎರಡು ಬಾರಿ ನಾವು ಕಳುಹಿಸಿದ ಪ್ರಸ್ತಾವನೆ ವಾಪಸ್ಸು ಬಂದಿದೆ. ಮತ್ತೆ ಈಗ ಪ್ರಸ್ತಾವನೆ ಕಳುಹಿಸಿದ್ದೇವೆ. ಶೇಕಡಾ 70ರಷ್ಟಾದರೂ ಸರ್ಕಾರ ಹಣ ಕೊಟ್ಟರೆ ಉಳಿದ ಹಣವನ್ನು ಸಾಲ ಪಡೆದುಕೊಂಡಾದರೂ ಸಂಬಳ ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ