ಸಾವು ಬದುಕು ನಮ್ಮ ಕೈಯಲ್ಲಿಲ್ಲ, ಕೋವಿಡ್ ಜೊತೆಗೆ ಬದುಕಲಿ ಕಲಿಯಬೇಕು: ರಮೇಶ್ ಜಾರಕಿಹೊಳಿ
Team Udayavani, Jul 27, 2020, 4:01 PM IST
ಬೆಳಗಾವಿ: ನಾವು ಕೋವಿಡ್-19 ಜೊತೆ ಬದುಕುವುದನ್ನು ಕಲಿಯಬೇಕು. ಸಾವು ಬದುಕು ನಮ್ಮ ಕೈಯಲ್ಲಿಲ್ಲ, ಹೋರಾಟ ಮಾಡಿ ಉಳಿಸುವ ಯತ್ನ ಮಾಡಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ ನಾವು ಅಂದುಕೊಂಡಂತೆ ದೊಡ್ಡ ರೋಗವೇನಲ್ಲ. ಜನರು ಇದಕ್ಕೆ ಹೆದರಬಾರದು ಎಂದರು.
ಈ ವೇಳೆ ಬಿಮ್ಸ್ ದಲ್ಲಿ ನಡೆದಿರುವ ಅವಾಂತರಗಳ ಬಗ್ಗೆ ಪ್ರಸ್ತಾಪಿಸಿದ ಸಚಿವರು ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಬಿಮ್ಸ್ ಬಳಿ ಆ್ಯಂಬುಲೆನ್ಸ್ ಸುಟ್ಟ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತೇವೆ. ಅಧಿಕಾರಿಗಳು ಯಾರಾದರೂ ತಪ್ಪು ಮಾಡಿದ್ದರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಬಿಮ್ಸ್ ಆಡಳಿತ ಮಂಡಳಿಗೆ ಶೀಘ್ರ ಸರ್ಜರಿ ಮಾಡಲಾಗುವದು. ಅಲ್ಲಿಯ ವ್ಯವಸ್ಥೆ ಸುಧಾರಣೆ ಮಾಡಲು ಗಮನ ಹರಿಸಲಾಗುವದು ಭರವಸೆ ನೀಡಿದರು.
ಕೋವಿಡ್ ನಿಯಂತ್ರಣ ಸಂದರ್ಭದಲ್ಲಿ ವರ್ಗಾವಣೆ ಮಾಡಿದರೆ ತಪ್ಪು ಸಂದೇಶ ಹೋಗುತ್ತದೆ ಎಂಬ ಕಾರಣದಿಂದ ಸುಮ್ಮನಿದ್ದೇವೆ ಎಂದು ಹೇಳಿದ ಸಚಿವರು ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿಸಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ