ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲ್ಲ: ಮಾಜಿ ಸಚಿವ ಬಾಬಾಗೌಡ ಪಾಟೀಲ
Team Udayavani, Apr 8, 2021, 12:58 PM IST
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ನಮ್ಮ ಮತ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಹೇಳಿದರು.
ಬೆಳಗಾವಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಮ್ಮ ಮತ ಇಲ್ಲಾ ಅನ್ನೋದು ರೈತರ ಆಂದೋಲನದ ಒಂದು ಭಾಗ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ಕಳುಹಿಸುತ್ತೇವೆ ಎಂದರು.
ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಮ್ಮ ಮನೆಗೆ ಬಂದಿದ್ದರು. ಉಪಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ನಾವು ಈಗಾಗಲೇ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಮಾಜಿ ಸಚಿವ ಬಾಬಾಗೌಡ ಪಾಟೀಲರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರೈತರನ್ನು ಕೇಳಿ ಅನೇಕ ವಿಷಯ ಸೇರಿಸಬೇಕು ಎಂದು ಹೇಳಿದ್ದೇನೆ. ಡಿ ಕೆ ಶಿವಕುಮಾರ್ ಅವರು ಈ ಬಗ್ಗೆ ಹೈಕಮಾಂಡ್ ಜೊತೆಗೆ ಮಾತನಾಡುವ ಭರವಸೆ ಕೊಟ್ಟಿದ್ದಾರೆ. ನಾನು ಸಹ ಎಲ್ಲ ಸಂಘಟನೆಗಳ ಜೊತೆಗೆ ಮಾತನಾಡುತ್ತೆನೆ ಎಂದಿದ್ದೇನೆ. ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಿರಲು ತೀರ್ಮಾನ ಮಾಡಿದ್ದೇವೆ. ಇದು ಸಹಜವಾಗಿಯೇ ಕಾಂಗ್ರೆಸ್ ಬೆಂಬಲಿಸುವಂತೆ ಅರ್ಥವಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ