ಬಿಜೆಪಿಗೆ ಬಂದರೆ ಸ್ವಾಗತ: ಡಾ| ಕೋರೆ
Team Udayavani, Sep 13, 2018, 7:00 AM IST
ಬೆಳಗಾವಿ: “ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಸೇರಿದಂತೆ ಯಾರೇ ಬಿಜೆಪಿಗೆ ಬಂದರೂ ಸ್ವಾಗತ. ರಾಜಕೀಯವಾಗಿ ಸದ್ಯ ಜಾರಕಿಹೊಳಿ ಸಹೋದರರು ನನ್ನ ಸಂಪರ್ಕದಲ್ಲಿ ಇಲ್ಲ’ ಎಂದು ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ, ಡಾ| ಪ್ರಭಾಕರ ಕೋರೆ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ರಾಜಕಾರಣದಲ್ಲಿ ಒಗ್ಗಟ್ಟಿಲ್ಲ. ವೈಯಕ್ತಿಕವಾಗಿ ಎಲ್ಲರೂ ಪ್ರಬಲರಾಗಿದ್ದರೂ ಒಗ್ಗಟ್ಟು ಇಲ್ಲದೆ ಇಲ್ಲಿಯವರು ಹಿಂದುಳಿಯಲು ಕಾರಣವಾಗಿದೆ. ನಾವೆಲ್ಲರೂ ಗಟ್ಟಿಯಾದರೆ ಮುಂದಿನ ದಿನಗಳಲ್ಲಿ ಇಲ್ಲಿಯವರೇ ಮುಖ್ಯಮಂತ್ರಿ ಆಗಲಿದ್ದಾರೆ. ರಾಜ್ಯ ಸರಕಾರದ ಭವಿಷ್ಯ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಅಡಗಿದೆ. ಆದರೆ, ಈವರೆಗೂ ಬೆಳಗಾವಿಯ ಒಬ್ಬರೂ ಮುಖ್ಯಮಂತ್ರಿ ಆಗದಿರುವುದು ನೋವಿನ ಸಂಗತಿ. ಈಗಿನ ಕಾಂಗ್ರೆಸ್ಸಿನಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. ಹೊರಗಡೆಯಿಂದ ಹೋದವರೇ ಹೆಚ್ಚಾಗಿ ಉಳಿದುಕೊಂಡಿದ್ದಾರೆ. ಸಿದ್ದರಾಮಯ್ಯ ಕೂಡ ಹೊರಗಡೆಯಿಂದ ಹೋದವರೇ ಆಗಿದ್ದಾರೆ. ಇನ್ನುಳಿದವರ ಹೆಸರನ್ನು ನಾನು ಪ್ರಸ್ತಾಪಿಸಲು ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು