ಬೆಳೆ ವಿಮೆ ಪಾವತಿ ಸಮಸ್ಯೆಗೆ ಕೊನೆ ಎಂದು?
ಒಂದಕ್ಕಿಂತ ಹೆಚ್ಚು ಜಮೀನುಳ್ಳ ರೈತರ ಬೆಳೆ ವಿಮೆ ಪಾವತಿಗೆ ಪ್ರಾಬ್ಲಂ
Team Udayavani, Jun 9, 2022, 11:57 AM IST
ತೆಲಸಂಗ: ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಆನ್ ಲೈನ್ ಅರ್ಜಿ ಹಾಕುವಾಗ ಉಂಟಾಗಿದ್ದ ಸಮಸ್ಯೆ ಪರಿಹಾರವಾಗಿದ್ದಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದು, ಆದರೆ ಒಂದಕ್ಕಿಂತ ಹೆಚ್ಚು ಖಾತೆ ಹೊಂದಿದ ಬೆಳೆಗಾರರಿಗೆ ಮತ್ತೂಂದು ಸಮಸ್ಯೆ ಎದುರಾಗಿದೆ.
ಪ್ರಸಕ್ತ ವರ್ಷ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಯೋಜನೆಯ ಆನ್ಲೈನ್ ಅರ್ಜಿ ಆ್ಯಪ್ ಮರುವಿನ್ಯಾಸಗೊಳಿಸಿದ್ದರಿಂದ ರೈತರು ವಿಮೆ ಭರಿಸಲು ಪರದಾಡುವಂತಾಗಿತ್ತು. ಪಹಣಿ ಪತ್ರದಲ್ಲಿನ ಹೆಸರು, ಆಧಾರ ಕಾರ್ಡ್ಲ್ಲಿನ ಹೆಸರು ತಿರುವು ಮುರುವಾಗಿದ್ದರೂ ವಿಮೆ ಅರ್ಜಿ ತಿರಸ್ಕಾರಗೊಳ್ಳುತ್ತಿತ್ತು. ಬುಧವಾರ ಮಧ್ಯಾಹ್ನದ ಹೊತ್ತಿಗೆ ಅಧಿಕಾರಿಗಳು ಸಮಸ್ಯೆ ಪರಿಹರಿಸಿದ್ದು, ಎಲ್ಲ ರೈತರು ವಿಮೆ ಪಾವತಿಸಬಹುದಾಗಿದೆ. ಆದರೆ ಇದೀಗ ಅದೇ ಆ್ಯಪ್ಲ್ಲಿ ಮತ್ತೂಂದು ಸಮಸ್ಯೆ ಎದುರಾಗಿದೆ.
ಏನದು ಸಮಸ್ಯೆ: ಒಬ್ಬ ರೈತ ಬೇರೆ ಬೇರೆ ಸರ್ವೇ ನಂ. ನ ಒಂದಕ್ಕಿಂತ ಹೆಚ್ಚು ಭೂಮಿ ಹೊಂದಿದ್ದರೆ ಒಂದು ಜಮೀನಿನ ಬೆಳೆ ವಿಮೆ ಪಾವತಿಸಿದ ಬಳಿಕ ಇನ್ನೊಂದು ಸರ್ವೇ ಸಂಖ್ಯೆಯ ಬೆಳೆಗೆ ವಿಮೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಆನ್ಲೈನ್ ಅರ್ಜಿ ಹಣ ಪಾವತಿ ಮಾಡುವಾಗ ರಿಜೆಕ್ಟ್ ಮಾಡುತ್ತಿದೆ. ಇದರಿಂದ ಒಂದಕ್ಕಿಂತ ಹೆಚ್ಚು ಜಮೀನು ಹೊಂದಿದ ರೈತರು ವಿಮೆ ಭರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಅನೇಕ ರೈತರು ಈ ಯೋಜನೆಯಿಂದ ವಂಚಿತರಾಗುತ್ತಿದ್ದು, ಸಮಸ್ಯೆ ಸರಿಪಡಿಸಲು ಆಗ್ರಹಿಸಿದ್ದಾರೆ.
ಹೆಸರು ಮ್ಯಾಚ್ ಆಗದ್ದನ್ನು ಸರಿಪಡಿಸಲಾಗಿದೆ. ರೈತರು ಇವತ್ತಿನಿಂದ ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು. ಸದ್ಯ ಇವತ್ತಿಂದ ಒಂದೇ ಭೂಮಿಯ ಬೆಳೆಗೆ ಮಾತ್ರ ವಿಮೆ ಪಾವತಿ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಅದನ್ನೂ ಸರಿಪಡಿಸುವ ಕೆಲಸ ಮಾಡುತ್ತೇವೆ. – ಶ್ವೇತಾ ಹಾಡಕರ್, ತೋಟಗಾರಿಕಾ ನಿರ್ದೇಶಕರು, ಅಥಣಿ.
ನಮ್ಮದು ಮೂರು ದ್ರಾಕ್ಷಿ ತೋಟಗಳಿವೆ. ಸದ್ಯ ಒಂದಕ್ಕೆ ವಿಮೆ ಪಾವತಿಸಿದ್ದೇನೆ. ಇನ್ನೂ ಎರಡು ದ್ರಾಕ್ಷಿ ತೋಟಗಳಿಗೂ ವಿಮೆ ಪಾವತಿಸಬೇಕಿದೆ. ಆನ್ಲೈನ್ ಅರ್ಜಿ ಸ್ವೀಕರಿಸುತ್ತಿಲ್ಲ. ಈ ಹಿಂದೆ ಹೀಗಿರಲಿಲ್ಲ. ಪ್ರಸಕ್ತ ವರ್ಷ ಈ ಸಮಸ್ಯೆ ಎದುರಾಗಿದ್ದು, ತಕ್ಷಣದಿಂದಲೇ ಸರಿಪಡಿಸಿದರೆ ಅನುಕೂಲವಾಗುತ್ತದೆ. – ಬಸೀರಹ್ಮದ ಮುಜಾವರ, ದ್ರಾಕ್ಷಿ ಬೆಳೆಗಾರ, ತೆಲಸಂಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ