ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
Team Udayavani, Jan 28, 2021, 9:22 AM IST
ಬೆಳಗಾವಿ: ಸಾಲದ ಹೊರೆಯಿಂದ ನೊಂದಿದ್ದ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ರೈಲಿನಡಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ಬೀರಡಿ ಗ್ರಾಮದ ಸಾತಪ್ಪ ಅಣ್ಣಪ್ಪಾ ಸುತಾರ (60), ಪತ್ನಿ ಮಹಾದೇವಿ ಸುತಾರ (50) ಮಕ್ಕಳಾದ ದತ್ತಾತ್ರೇಯ ಸುತಾರ (28), ಸಂತೋಷ ಸುತಾರ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಇದನ್ನೂ ಓದಿ:ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
ರಾಯಬಾಗ ತಾಲೂಕಿನ ಬಿರಡಿ ಗ್ರಾಮದ ಬಳಿ ಬುಧವಾರ ರಾತ್ರಿ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಮೂಲಗಳ ಪ್ರಕಾರ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ತಿಳಿದಿದೆ.
ಇದನ್ನೂ ಓದಿ: ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!
ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.