ರಾಜಿಗೆ ಒಪ್ಪದ ಪತ್ನಿ; ದಂಪತಿ ವಿವೇಚನೆಗೆ ಬಿಟ್ಟ ಪೊಲೀಸರು
Team Udayavani, Sep 27, 2018, 6:40 AM IST
ಬೆಳಗಾವಿ: 500 ರೂ.ಸಾಲ ವಾಪಸ್ ಕೊಡಲು ವಿಳಂಬ ಮಾಡಿದ್ದಕ್ಕೆ ಸ್ನೇಹಿತ ಪತ್ನಿಯನ್ನೇ ಹೊತ್ತೂಯ್ದು ಮದುವೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಪತ್ನಿಯನ್ನು ಠಾಣೆಗೆ ಕರೆಸಿದ ಪೊಲೀಸರು, ಕೌಟುಂಬಿಕ ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ದಂಪತಿಗೆ ಸಲಹೆ ನೀಡಿದ್ದಾರೆ.
ಈ ಸಂಬಂಧ ಬುಧವಾರ ಮಾರ್ಕೆಟ್ ಪೊಲೀಸ್ ಠಾಣೆಗೆ ದಂಪತಿಯನ್ನು ಕರೆದು ರಾಜಿಗೆ ಒಪ್ಪಿಸಲು ಪ್ರಯತ್ನಿಸಿದರು. ಆದರೆ, ಬಸವರಾಜ ಕೋನನ್ನವರ ಪತ್ನಿ ಪಾರ್ವತಿ, ಮೊದಲ ಪತಿಯೊಂದಿಗೆ ಸಂಸಾರ ಮಾಡುವುದಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಆದರೆ, ಪತಿ ಬಸವರಾಜ ತನ್ನ ಪತ್ನಿಯನ್ನು ತನ್ನೊಂದಿಗೆ ಕಳುಹಿಸಿ ಕೊಡುವಂತೆ ಮನವಿ ಮಾಡಿದರು. ಇದು ಕೌಟುಂಬಿಕ ಕಲಹವಾಗಿರುವುದರಿಂದ ನೀವೇ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಪೊಲೀಸರು ಸಲಹೆ ನೀಡಿದರು. ಈ ಸಂಬಂಧ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳುವಂತೆ ಸೂಚಿಸಿದರು.
ಪ್ರಕರಣವೇನು?: ಬೆಳಗಾವಿಯ ಹೊಟೆಲ್ವೊಂದರಲ್ಲಿ ಬೈಲಹೊಂಗಲ ತಾಲೂಕಿನ ಮುರಕಿಬಾಂವಿಯ ಬಸವರಾಜ ಕೋನನ್ನವರ ಹಾಗೂ ಗೋಕಾಕ ತಾಲೂಕಿನ ಮಿಡಕನಟ್ಟಿ ಗ್ರಾಮದ ರಮೇಶ ಉಡಕೇರಿ ಎಂಬುವರು ಕೆಲಸ ಮಾಡುತ್ತಿದ್ದರು. ಬಸವರಾಜ, ಸ್ನೇಹಿತ ರಮೇಶನಿಂದ 500 ಸಾಲ ಪಡೆದಿದ್ದು, ಅದನ್ನು ತೀರಿಸಿರಲಿಲ್ಲ. ಈ ಸಾಲದ ಬಾಕಿ ನೆಪವೊಡ್ಡಿ ತನ್ನ ಪತ್ನಿ ಪಾರ್ವತಿಯನ್ನು ಎರಡು ತಿಂಗಳ ಹಿಂದೆ ರಮೇಶ ಪುಸಲಾಯಿಸಿ ಮದುವೆ ಮಾಡಿಕೊಂಡಿದ್ದಾನೆ ಎಂದು ಬಸವರಾಜ ಆರೋಪಿಸಿದ್ದ. ಈ ಬಗ್ಗೆ ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟ ಬಸವರಾಜ ಹಾಗೂ ಈತನ ಪತ್ನಿಯನ್ನು ಕರೆಸಿ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ. ಆದರೆ, ಪತ್ನಿ ಪಾರ್ವತಿ ಬಸವರಾಜನೊಂದಿಗೆ ಹೋಗಲು ಒಪ್ಪಲಿಲ್ಲ. ಹೀಗಾಗಿ, ಕುಟುಂಬ ಕಲಹವನ್ನು ತಾವೇ ಬಗೆಹರಿಸಿಕೊಳ್ಳುವಂತೆ ಮಾರ್ಕೆಟ್ ಇನ್ಸ್ಪೆಕ್ಟರ್ ವಿಜಯ ಮುರಗುಂಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ