ಜನರ ವಿಶ್ವಾಸ ಗಳಿಸಿ ಕೆಲಸ ಮಾಡಿ: ರಮೇಶ


Team Udayavani, Mar 30, 2020, 5:30 PM IST

bg-tdy-1

ಗೋಕಾಕ: ಭಾರತ ಲಾಕ್‌ಡೌನ್‌ ಸಂಪೂರ್ಣ ಯಶಸ್ವಿಗೊಳಿಸಲು ಅಧಿಕಾರಿಗಳು ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗƒಹ ಕಚೇರಿಯಲ್ಲಿ ರವಿವಾರ ತಾಲೂಕು ಆಡಳಿತ, ನಗರಸಭೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನರಲ್ಲಿ ಕೋವಿಡ್ 19 ಭೀತಿ ಇದ್ದರೂ ಅದರಿಂದ ಹೇಗೆ ಬಚಾವಾಗಬೇಕು ಎಂಬ ಕುರಿತು ತಿಳಿವಳಿಕೆ ಇಲ್ಲವಾದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಷಯವನ್ನು ಮನದಟ್ಟು ಮಾಡಬೇಕಿದೆ. ಹೀಗಾಗಿ, ಅರಿವು ಮೂಡಿಸಲು ಪೊಲೀಸ್‌ ಇಲಾಖೆ ಒತ್ತು ನೀಡಬೇಕೇ ಹೊರತು ಹೆದರಿಸಿ ಇಲ್ಲವೇ ಬೆದರಿಸುವ ಮೂಲಕ ಅಲ್ಲ ಎಂದು ನುಡಿದರು.

ಸ್ಥಳೀಯ ಸದಸ್ಯರು ತಿಳಿವಳಿಕೆ ನೀಡಲಿ:  ನಗರ ಹಾಗೂ ತಾಲೂಕಿನ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಏ. 14 ರತನಕ ದಿನಂಪ್ರತಿ ಸಂಚರಿಸಿ ಲಾಕ್‌ ಡೌನ್‌ ಉಲ್ಲಂಘಿಸದಂತೆ ಜನತೆಗೆ ತಿಳಿವಳಿಕೆ ನೀಡಬೇಕು ಎಂದು ಕೋರಿದರು.

ಬಡಜನತೆಗೆ ಕಿರುಕಳ ಆಗದಂತಿರಲಿ: ಅಧಿಕಾರಿಗಳು ಕೋವಿಡ್‌-19 ನಿಯಂತ್ರಣಕ್ಕಾಗಿ ಎಂಥದ್ದೇ ಕ್ರಮ ಜರುಗಿಸಲಿ. ಆದರೆ ಬಡ ಜನತೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ಅ ಕಾರಿಗಳಿಗೆ ಸೂಚಿಸಿದರು.

ವರ್ತಕರು ಸಂಯಮತೆ ಪ್ರದರ್ಶಿಸಲಿ: ಜನತೆಗೆ ಜೀವನಾವಶ್ಯಕ ವಸ್ತುಗಳ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ವರ್ತಕರು ದರ ಹೆಚ್ಚಳ, ಕೃತಕ ಕೊರತೆ ಸೃಷ್ಟಿಸಬಾರದು ಎಂದು ಮನವಿ ಮಾಡಿದರು. ತಪ್ಪಿದಲ್ಲಿ ವ್ಯಾಪಾರ ವಹಿವಾಟನ್ನು ಎಪಿಎಂಸಿ ಸಮಿತಿ ವ್ಯಾಪ್ತಿಗೊಳಪಡಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು. ತಹಶೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಮತ್ತು ತಾಲೂಕು ಆರೋಗ್ಯ ಅಧಿಕಾರಿ ಡಾ| ರವೀಂದ್ರ ಅಂಟಿನ ತಾಲೂಕಿನ ಸದ್ಯದ ಸ್ಥಿತಿಗತಿ ವಿವರಿಸಿದರು. ಬೆಳಗ್ಗೆ 7ರಿಂದ 10ರವರೆಗೆ ನಿರಾತಂಕವಾಗಿ ಅಗತ್ಯ ವಸ್ತುಗಳ ಮಾರಾಟ ನಡೆಯುತ್ತಿದ್ದು, ಅಗತ್ಯ ಎನಿಸಿದರೆ ಇನ್ನೂ ಸಮಯ ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು. ಯಾವುದೇ ಕೋವಿಡ್ 19  ಸೋಂಕು ಪ್ರಕರಣ ತಾಲೂಕಿನಲ್ಲಿ ವರದಿಯಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಡಿವೈಎಸ್ಪಿ ಪ್ರಭು ಡಿ.ಟಿ., ಗೋಕಾಕ ನಗರಸಭೆ ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ, ಇತರರು ಇದ್ದರು. ನಂತರ ಸಚಿವರು ನಗರಸಭೆ ಸದಸ್ಯ ಎಸ್‌.ಎ.ಕೋತವಾಲ ಜೊತೆ ನಗರದಾದ್ಯಂತ ಬೈಕ್‌ ಮೇಲೆ ಸಂಚರಿಸಿ ಪರಿಸ್ಥಿತಿ ವೀಕ್ಷಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.