ತವರು ಸೇರುವ ಧಾವಂತದಲ್ಲಿ ದಾರಿ ತಪ್ಪಿದ್ರು

ಎಲ್ಲಿಗೋ ಹೋಗಬೇಕಾದ ಕಾರ್ಮಿಕರು ಬೆಳಗಾವಿಗೆ ಬಂದ್ರು

Team Udayavani, May 7, 2020, 3:20 PM IST

ತವರು ಸೇರುವ ಧಾವಂತದಲ್ಲಿ ದಾರಿ ತಪ್ಪಿದ್ರು

ಬೆಳಗಾವಿ: ಹೇಳ್ಳೋರಿಲ್ಲ, ಕೇಳ್ಳೋರಿಲ್ಲ. ಬಸ್‌ನಲ್ಲಿ ಎಲ್ಲಿಗೋ ಹೋಗಬೇಕಾದವರು ಎಲ್ಲೆಲ್ಲೋ ಸಿಕ್ಕಿ ಹಾಕಿಕೊಳ್ಳುತ್ತಿದ್ದು, ಬೆಂಗಳೂರಿನಿಂದ ಬೇರೆ ಬೇರೆ ರಾಜ್ಯಗಳಿಗೆ ತೆರಳಬೇಕಾದ ವಲಸೆ ಕಾರ್ಮಿಕರು ಧಾವಂತದಲ್ಲಿ ಸರಿಯಾದ ಮಾಹಿತಿ ಇಲ್ಲದೇ ತಪ್ಪಾಗಿ ಬೆಳಗಾವಿಗೆ ಬಂದು ಇಕ್ಕಟ್ಟಿಗೆ ಸಿಲುಕಿ ಅತಂತ್ರರಾಗಿದ್ದಾರೆ.

ಲಾಕ್‌ಡೌನ್‌ನಲ್ಲಿ ಕಳೆದ 40 ದಿನಗಳಿಂದ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರಿಗೆ ಸ್ವಲ್ಪ ಸಡಿಲಿಕೆ ಸಿಕ್ಕಿದ್ದರಿಂದ ತವರೂರಿಗೆ ಸೇರಬೇಕೆಂಬ ಧಾವಂತದಲ್ಲಿ ಮಧ್ಯದಲ್ಲಿಯೇ ಅತಂತ್ರರಾಗಿದ್ದಾರೆ. ಬೆಂಗಳೂರಿನಿಂದ ತಾವು ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಯಾರನ್ನೂ ಕೇಳದೇ ಹತ್ತಿ ಕುಳಿತು ನಿರ್ವಾಹಕರು ಇಲ್ಲದ್ದಕ್ಕೆ ತಪ್ಪಾಗಿ ಬೆಳಗಾವಿಗೆ ಬಂದಿಳಿದಿರುವ ಪ್ರಸಂಗ ನಡೆದಿದೆ.

ಪರಿವೇ ಇಲ್ಲದೇ ಹತ್ತಿ ಕುಳಿತರು: ಬೆಂಗಳೂರಿನಿಂದ ಕೂಲಿ ಕಾರ್ಮಿಕರಿಗಾಗಿಯೇ ವಿಶೇಷ ಹಾಗೂ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಬಸ್‌ಗಳು ಬರುತ್ತಿವೆ. ಬೆಂಗಳೂರಿನಿಂದ ಹತ್ತಿದ ಕಾರ್ಮಿಕರು ಆ ಬಸ್‌ ಎಲ್ಲಿಗೆ ಪ್ರಯಾಣಿಸುತ್ತಿದೆ, ಯಾವ ಊರಿಗೆ ಹೋಗುತ್ತದೆ, ಯಾವಾಗ ತಲುಪುತ್ತದೆ ಎಂಬ ಪರಿವೇ ಇಲ್ಲದೇ ಕುಳಿತುಕೊಂಡಿದ್ದಾರೆ. ಯಾರನ್ನೂ ಚೌಕಾಶಿ ಮಾಡದೇ ಬಸ್‌ ಹತ್ತಿ ಕುಳಿತಿರುವ ಕಾರ್ಮಿಕರು ಈಗ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

ಮಹಾರಾಷ್ಟ್ರ, ಹರಿಯಾಣಾ, ಪಶ್ಚಿಮ ಬಂಗಾಲ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ ಇತರೆ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಉಚಿತ ಬಸ್‌ ಹತ್ತಿ ಬೆಳಗಾವಿಗೆ ಬಂದಿದ್ದಾರೆ. ಎಲ್ಲರೂ ಬಂದಾಗ ಇವರ ವಿಳಾಸ ಕೇಳಿದ ಅಧಿ ಕಾರಿಗಳಿಗೆ ಶಾಕ್‌ ಆಗಿದೆ. ಬೆಳಗಾವಿಯಲ್ಲಿ ಇದ್ದವರನ್ನೇ ಇಲ್ಲಿಂದ ಕಳುಹಿಸಬೇಕು ಎನ್ನುವಷ್ಟರಲ್ಲಿ ಮತ್ತಷ್ಟು ಕಾರ್ಮಿಕರ ಆರೈಕೆ, ಊಟ, ವಸತಿ ವ್ಯವಸ್ಥೆ ಮಾಡುವುದು ಕಷ್ಟಕರವಾಗಿದೆ.

ಉಚಿತ ಬಸ್‌ನಿಂದಾದ ಎಡವಟ್ಟು: ಬಸ್‌ ಗಳಲ್ಲಿ ಟಿಕೆಟ್‌ ಪಡೆಯುವ ವ್ಯವಸ್ಥೆ ಇದ್ದಿದ್ದರೆ ಎಲ್ಲಿಗೆ ಹೋಗಬೇಕು ಎಂದು ನಿರ್ವಾಹಕರು ಕೇಳುತ್ತಿದ್ದರು. ಆದರೆ ಯಾರೂ ಕೇಳ್ಳೋರಿಲ್ಲ, ಹೇಳ್ಳೋರಿಲ್ಲ ಎಂಬ ವ್ಯವಸ್ಥೆಯಿಂದಾಗಿ ಕಾರ್ಮಿಕರ ಸ್ಥಿತಿ ತ್ರಿಶಂಕು ಸ್ಥಿತಿಯಾಗಿದೆ. ಎರಡು ದಿನಗಳ ಅವಧಿ ಯಲ್ಲಿ ಬೆಂಗಳೂರಿನಿಂದ ಬಂದ ಸುಮಾರು 133 ಕಾರ್ಮಿಕರು ಈಗ ಕ್ವಾರಂಟೈನ್‌ ಆಗಿದ್ದಾರೆ. ಹುಕ್ಕೇರಿ ತಾಲೂಕಿನ ಹಾಲಭಾಂವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಎಲ್ಲರನ್ನೂ ಇರಿಸಲಾಗಿದೆ. ಲಾಕ್‌ಡೌನ್‌ ಪ್ರಾರಂಭದಲ್ಲಿ ರಾಜಸ್ಥಾನ ಹಾಗೂ ಮಧ್ಯ ಪ್ರದೇಶದ ಕಾರ್ಮಿಕರು ಬಂದಿದ್ದರು. ಅದರಲ್ಲಿ ರಾಜಸ್ಥಾನದವರನ್ನು ಕಳುಹಿಸಲಾಗಿದೆ. ಮಧ್ಯಪ್ರದೇಶದ ಇನ್ನೂ 83 ಜನ ಉಳಿದುಕೊಂಡಿದ್ದು, ಈ ಎಲ್ಲರ ಮಾಹಿತಿಯನ್ನು ಆನ್‌ಲೆ„ನ್‌ ಭರ್ತಿ ಮಾಡಿ ಕಳುಹಿಸ ಬೇಕು ಎನ್ನುವಷ್ಟರಲ್ಲಿಯೇ ಮತ್ತೂಂದು ತಂಡ ಇಲ್ಲಿಗೆ ಬಂದಿದ್ದು ಅಧಿ ಕಾರಿಗಳಿಗೆ ತಲೆ ಬಿಸಿಯಾಗಿದೆ.

ಬುಧವಾರ ರಾತ್ರಿ ಮತ್ತೆ 18 ಬಸ್‌ಗಳು ಪ್ರಯಾಣ ಬೆಳೆಸಿದ್ದು, ಇದರಲ್ಲಿ ಇನ್ನೂ ಎಷ್ಟು ಜನ ದಾರಿ ತಪ್ಪಿ ಬರಬಹುದೆಂಬ ಆತಂಕ ಅಧಿಕಾರಿಗಳನ್ನು ಕಾಡುತ್ತಿದೆ. ಮಹಾನಗರ ಪಾಲಿಕೆ ಉಪ ಆಯುಕ್ತ ಎಸ್‌.ಬಿ. ದೊಡಗೌಡರ ಸೇರಿದಂತೆ ಸಿಬ್ಬಂದಿ ಇದ್ದರು.

ಕಾರ್ಮಿಕರನ್ನು ಭೇಟಿಯಾಗಿ ಧೈರ್ಯ ತುಂಬಿದ ಶಾಸಕಿ :  ಬೆಂಗಳೂರಿಂದ ಬೆಳಗಾವಿಗೆ ದಾರಿ ತಪ್ಪಿ ಆಗಮಿಸಿದ ಪರ ರಾಜ್ಯಗಳ ಕಾರ್ಮಿಕರನ್ನು ಬುಧವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಭೇಟಿಯಾಗಿ ಧೆ„ರ್ಯ ತುಂಬಿದರು. ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳ ಕಾರ್ಮಿಕರು ಮತ್ತು ಅಸಹಾಯಕ ಜನರು ರಾಜ್ಯ ಸರಕಾರಿ ಬಸ್‌ಗಳ ಮೂಲಕ ಬೆಳಗಾವಿಗೆ ತಲುಪಿರುವ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಹೆಬ್ಟಾಳಕರ ಅವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಹಲವಾರು ಕಾರ್ಮಿಕರಿಗೆ ಹಸುಗೂಸುಗಳಿದ್ದು ಅವರ ಪಾಡು ಹೇಳತೀರದು. ಅವರಿಗೆಲ್ಲ ಹಾಲು, ಬಿಸ್ಕೀಟ್‌, ಬ್ರೆಡ್‌, ಸೋಪು ಇತರೆ ವಸ್ತುಗಳನ್ನು ವೈಯಕ್ತಿಕ ಕಾಳಜಿಯಿಂದ ವಿತರಿಸಿದರು. ನಂತರ ಮಾತನಾಡಿದ ಅವರು, ಉತ್ತರ ಭಾರತೀಯರ ಆಹಾರ ಕ್ರಮದ ಅರಿವು ಇದ್ದು, ಅವರಿಗೆ ಬೇಕಾಗುವ ರೊಟ್ಟಿ- ಪಲ್ಲೆ ಮುಂತಾದ ಆಹಾರ ಪದಾರ್ಥಗಳನ್ನು ಒದಗಿಸುತ್ತೇನೆ. ಜತೆಗೆ ಬೆಳಗಾವಿ ಜಿಲ್ಲಾಡಳಿತದ ಪಾಲನೆಯ ಸುಪ ರ್ದಿಯಲ್ಲಿರುವ ಈ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಮುಂದಿರುವ ಮಾರ್ಗಗಳ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

 

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.