ಗಡಿ ಭಾಗದ ನಿಪ್ಪಾಣಿ ನಗರದಲ್ಲಿ ಬೃಹತ್ ಯೋಗ ದಿನಾಚರಣೆ: ಜೊಲ್ಲೆ ಗ್ರೂಪ್ ನಿಂದ ಆಯೋಜನೆ
Team Udayavani, Jun 21, 2022, 11:41 AM IST
ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ಭಾರತದ ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ದಿನನಿತ್ಯದಲ್ಲಿ ಯೋಗ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ನಿಪ್ಪಾಣಿ ನಗರದ ಶಿರಪೇವಾಡಿ ಜೊಲ್ಲೆ ಉದ್ಯೋಗ ಸಮೂಹದ ಸಿಬಿಎಸ್ ಸಿ ಶಾಲೆಯ ಮೈದಾನದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಯೋಗ ಮನುಷ್ಯನ ಆರೋಗ್ಯದ ಜೊತೆಗೆ ಮನಸ್ಸು ಶಾಂತಿಗೊಳಿಸುತ್ತದೆ ಎಂದರು.
ಪಥಂಜಲಿ ಯೋಗ ಪೀಠದ ಕಾರ್ನಾಟಕ ಅಧ್ಯಕ್ಷ ಬಾಬರಲಾಲ ಆರ್ಯ ಅವರು. ಯೋಗದ ಮಹತ್ವ ತಿಳಿಸಿ ಶಿಬಿರಾರ್ಥಿಗಳಿಗೆ ಯೋಗ ಹೇಳಿಕೊಟ್ಟರು.
ವೇದಿಕೆ ಮೇಲೆ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ.ಡಿಡಿಪಿಐ ಮೋಹನಕುಮಾರ ಹಂಚ್ಯಾಟೆ. ಎಡಿಎಚ್ ಒ ಡಾ.ಎಸ್.ಎಸ್.ಗಡೇದ, ಡಿವೈಎಸ್ ಪಿ ಬಸವರಾಜ ಎಲಿಗಾರ, ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ. ಬೀರೇಶ್ವರ ಸೊಸಾಯಿಟಿ ಚೇರಮನ್ ಜಯಾನಂದ ಜಾಧವ, ತಹಶೀಲ್ದಾರ ಮೋಹನ ಭಸ್ಮೆ,ಪ್ರಗತಿಪರ ಕೃಷಿಕ ಶಿವಮೂರ್ತಿ ಫಡಲಾಳೆ, ನ್ಯಾಯವಾದಿ ಅಶೋಕ ಹರಗಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು