140 ಅಡಿ ಕಂದಕಕ್ಕೆ ಬಿದ್ದರೂ ಬದುಕುಳಿದ ಯುವಕ |
Team Udayavani, Oct 4, 2021, 7:30 PM IST
ಬೆಳಗಾವಿ/ಗೋಕಾಕ: ಪ್ರವಾಸಿ ತಾಣ ನೋಡಲು ಬಂದಿದ್ದ ಯುವಕನೋರ್ವ ಸೆಲ್ಫಿ ತೆಗೆದುಕೊಳ್ಳುವಾಗ 140 ಅಡಿ ಕಂದಕಕ್ಕೆ ಬಿದ್ದು “ಯುವಕ ಬದುಕುಳಿದಿಲ್ಲ’ ಎಂದು ರಕ್ಷಣಾ ಸಿಬ್ಬಂದಿ ವಾಪಸ್ ತೆರಳಿದ ಬಳಿಕ ತನ್ನ ಗೆಳೆಯರಿಗೆ ಕರೆ ಮಾಡಿ ಲೋಕೇಷನ್ ಶೇರ್ ಮಾಡಿ ರಕ್ಷಿಸುವಂತೆ ಕೋರಿದ ಘಟನೆ ಗೋಕಾಕ ಫಾಲ್ಸ್ನಲ್ಲಿ ನಡೆದಿದೆ.
ಬೆಳಗಾವಿಯ ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿರುವ ಕಲಬುರಗಿ ಜಿಲ್ಲೆ ಜೇವರ್ಗಿ ಮೂಲದ ಪ್ರದೀಪ ಸಾಗರ್ ಎಂಬಾತ ಶನಿವಾರ ಸಂಜೆ ಸ್ನೇಹಿತರೊಂದಿಗೆ ಫಾಲ್ಸ್ ನೋಡಲು ಬಂದಿದ್ದ. ಬಂಡೆ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸುವ ವೇಳೆ 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದಾನೆ. ಈ ಬಗ್ಗೆ ಸ್ನೇಹಿತರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಅಗ್ನಿಶಾಮಕ ದಳ ಸಿಬ್ಬಂದಿ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಮೊಟಕುಗೊಳಿಸಿದ್ದರು. ಯುವಕ ಮೃತಪಟ್ಟಿದ್ದಾನೆ. ಮೃತದೇಹ ಹೊರ ತೆಗೆಯಬೇಕೆಂದು ಭಾವಿಸಿ ಭಾನುವಾರ ಬೆಳಗ್ಗೆ ಬಂದರಾಯಿತು ಎಂದು ಅಲ್ಲಿಂದ ತೆರಳಿದ್ದರು.
ಕರೆ ಮಾಡಿ ಲೋಕೇಷನ್ ಶೇರ್ ಮಾಡಿದ: ಸುಮಾರು 10 ಗಂಟೆಗಳ ಬಳಿಕ ಭಾನುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರದೀಪನ ಮೊಬೈಲ್ಗೆ ನೆಟ್ವರ್ಕ್ ಸಿಕ್ಕಿದೆ. ಕೂಡಲೇ ಆತ ತನ್ನ ಸ್ನೇಹಿತರಿಗೆ ಕರೆ ಮಾಡಿದ್ದಾನೆ. ತನ್ನ ಲೊಕೇಷನ್ ಶೇರ್ ಮಾಡಿದ್ದಾನೆ. ಬಳಿಕ ಆತನ ಸ್ನೇಹಿತರು ಗೋಕಾಕನ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ಗೆ ಮಾಹಿತಿ ನೀಡಿದ್ದಾರೆ. ಕಂದಕಕ್ಕೆ ಬಿದ್ದ ಯುವಕನ ರಕ್ಷಣಾ ಕಾರ್ಯಾಚರಣೆಗೆ ಅಯೂಬ್ ಸಿದ್ಧತೆ ಮಾಡಿಕೊಂಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿ ಕಾರ್ಯಪ್ರವೃತ್ತರಾಗಿದ್ದಾರೆ.
140 ಅಡಿ ಆಳದ ಕಂದಕಕ್ಕೆ ತೆರಳಿದ ಆಯೂಬ್ ಖಾನ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಪ್ರದೀಪ ಸಾಗರ್ನನ್ನು ರಕ್ಷಿಸಿ ಹೊರ ಕರೆದುಕೊಂಡು ಬಂದಿದ್ದಾರೆ. ಸದ್ಯ ಪ್ರದೀಪ ಸಾಗರ್ನನ್ನು ಗೋಕಾಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?