ಯುವ ನ್ಯಾಯವಾದಿಗಳು ಕಠಿಣ ಪರಿಶ್ರಮ ಪಡಬೇಕು: ನ್ಯಾಯಮೂರ್ತಿ ಸಚೀನ ಮಗದುಮ್ಮ


Team Udayavani, Jul 30, 2022, 7:49 PM IST

tdy-20

ಚಿಕ್ಕೋಡಿ: ಕಠಿಣ ಪರಿಶ್ರಮದೊಂದಿಗೆ ಹಿರಿಯ ನ್ಯಾಯವಾದಿಗಳ ಸಹಕಾರ ಮತ್ತು ಮಾರ್ಗದರ್ಶನ ಇಂದಿನ ಯುವ ನ್ಯಾಯವಾದಿಗಳ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತದೆ. ಹಿರಿಯ ನ್ಯಾಯವಾದಿಗಳ ಸಹಕಾರದಿಂದಲೇ ನಾನು ಉನ್ನತ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಬೆಂಗಳೂರು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಚೀನ ಮಗದುಮ್ಮ ಹೇಳಿದರು.

ಇಲ್ಲಿನ ನ್ಯಾಯವಾದಿಗಳ ಸಂಘ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಕೀಲ ವೃತ್ತಿಯಲ್ಲಿ ಕಲಿಕೆ ಎನ್ನುವುದು ನಿರಂತರವಾಗಿರಬೇಕು. ಎಷ್ಟೇ ಬೆಳವಣಿಗೆ ಕಂಡರೂ ಸಹ ಹೊಸ ಹೊಸ ವಿಚಾರಗಳನ್ನು ಕಲಿಯಬೇಕು ಎನ್ನುವ ಮನೋಭಾವ ಯುವ ನ್ಯಾಯವಾದಿಗಳಿಗೆ ಬರಬೇಕು ಎಂದರು.

ನಾನು ಚಿಕ್ಕೋಡಿ ನಗರದಲ್ಲಿ ಹುಟ್ಟಿ ಬೆಳೆದು ಚಿಕ್ಕೋಡಿ ನ್ಯಾಯಾಲಯದಲ್ಲಿ ಎರಡು ವರ್ಷ ವಕೀಲ ವೃತ್ತಿ ಆರಂಭಿಸಿ ಈಗ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾದರೂ ಚಿಕ್ಕೋಡಿ ನ್ಯಾಯಾಲಯದಲ್ಲಿ ವೃತ್ತಿ ಆರಂಭಿಸಿರುವ ಅನುಭವ ಮರೆಯಲು ಸಾಧ್ಯವಾಗುದಿಲ್ಲ. ಚಿಕ್ಕೋಡಿ ಹಿರಿಯ ನ್ಯಾಯವಾದಿಗಳು ಕೊಡುವ ಗೌರವ ಅಪಾರವಾಗಿದೆ. ಗ್ರಂಥಾಲಯದಲ್ಲಿ ಇರುವ ಹೊಸ ಹೊಸ ಪುಸ್ತಕಗಳನ್ನು ಓದಲಿಕ್ಕೆ ಹುರುದುಂಬಿಸಿರುವ ನೆನಪು ಸದಾ ಇರುತ್ತದೆ ಎಂದರು.

ಸಂವಿಧಾನ ಬರೆದ ಡಾ, ಬಿ.ಆರ್.ಅಂಬೇಡ್ಕರ ವಾದ ಮಂಡಿಸಿರುವ ಚಿಕ್ಕೋಡಿ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಆರಂಭಿಸಿರುವ ನ್ಯಾಯವಾದಿಗಳು ಪುಣ್ಯ ಮಾಡಿದ್ದಾರೆ ಎಂದ ಅವರು, ಹುಟ್ಟೂರಲ್ಲಿ ಎಲ್ಲರೂ ಪ್ರೀತಿಯಿಂದ ಸತ್ಕಾರ ಮಾಡಿರುವುದು ನನಗೆ ಖುಷಿ ತರಿಸಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗೇಶ ಕಿವಡ ಮಾತನಾಡಿ, ಚಿಕ್ಕೋಡಿ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಆರಂಭಿಸಿದ ನ್ಯಾಯಮೂರ್ತಿ ಸಚೀನ ಅವರು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿರುವುದು ಚಿಕ್ಕೋಡಿ ಭಾಗದ ಜನರಿಗೆ ಖುಷಿ ತರಿಸಿದೆ. ಸಚೀನ ಮಗದುಮ್ಮ ಅವರ ಸಹಕಾರ ಮತ್ತು ಮಾರ್ಗದರ್ಶನ ಚಿಕ್ಕೋಡಿ ನ್ಯಾಯವಾದಿಗಳ ಸಂಘದ ಮೇಲಿರಲಿ ಎಂದರು.

ಚರಮೂರ್ತಿಮಠದ ಸಂಪಾದನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ವೇದಿಕೆ ಮೇಲೆ ಏಳನೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ, ನ್ಯಾಯಾದೀಶಾದ ಟಿ.ಶ್ರೀಕಾಂತ, ಚಿದಾನಂದ ಬಡಿಗೇರ, ಅಶೋಕ ಆರ್.ಎಚ್, ನಾಗೇಶ ಪಾಟೀಲ, ಸರ್ಕಾರಿ ವಕೀಲ ಆರ್.ಐ.ಖೋತ, ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ  ಎಲ್.ವ್ಹಿ.ಬೋರನ್ನವರ, ಉಪಾಧ್ಯಕ್ಷ ಬಿ.ಪಿ.ದೇಶಿಂಗೆ, ಬಿ.ಎನ್.ಪಾಟೀಲ,  ಬಿ.ಆರ್.ಯಾದವ, ರವಿ ಹುದ್ದಾರ, ಎಸ್.ಟಿ.ಮುನ್ನೋಳ್ಳಿ, ಪ್ರಕಾಶ ಅನ್ವೇಕರ, ಎಸ್.ಪಿ.ಉತ್ತೂರೆ, ಆರ್,ಎನ್,ಬಾಕಳೆ, ಎಚ್.ಎಸ್.ನಸಲಾಪೂರೆ ಮುಂತಾದವರು ಇದ್ದರು.

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯರು ಕಲ್ಮೇಶ ಕಿವಡ ಸ್ವಾಗತಿಸಿದರು. ಸತೀಶ  ಕುಲಕರ್ಣಿ ನಿರೂಪಿಸಿದರು. ಮಹೇಶ ಮಠಪತಿ ವಂದಿಸಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.