ರೈಲು ನಿಲ್ಲಿಸಿ ದುರಂತ ತಪ್ಪಿಸಿದ ಯುವಕರು
Team Udayavani, Jan 13, 2019, 12:50 AM IST
ಬೆಳಗಾವಿ: ಹಳಿ ಮೇಲೆ ಮರ ಬಿದ್ದಿದ್ದರಿಂದ ಸಾವಿರಾರು ಜನರ ಪ್ರಾಣಕ್ಕೆ ಅಪಾಯ ಅರಿತ ಇಬ್ಬರು ಯುವಕರು ಚಲಿಸುವ ರೈಲಿನ ವಿರುದ್ಧ ಓಡಿ ಬಂದು ರೈಲು ನಿಲ್ಲಿಸಿ ಸಂಭವಿಸಲಿದ್ದ ಭಾರೀ ದುರಂತ ತಪ್ಪಿಸಿದ ಘಟನೆ ಖಾನಾಪುರದ ಬಳಿ ತಡವಾಗಿ ಬೆಳಕಿಗೆ ಬಂದಿದೆ.
ಖಾನಾಪುರ ಪಟ್ಟಣದ ರಿಯಾಜ್ ಹಾಗೂ ತೌಫಿಕ್ ಅವರು ಬೆಳಗಾವಿಗೆ ಹೊರಟಿದ್ದಾಗ ರೈಲಿನ ಹಳಿ ಮೇಲೆ ಮರ ಬಿದ್ದಿದ್ದನ್ನು ನೋಡಿದರು. ಅದೇ ಸಮಯದಲ್ಲಿ ಕೊಲ್ಲಾಪುರದಿಂದ ಹೈದ್ರಾಬಾದ್ಗೆ ತೆರಳುತ್ತಿದ್ದ ರೈಲು ಇತ್ತ ಬರುತ್ತಿರುವುದನ್ನೂ ಗಮನಿಸಿದರು. ಆಗ ಸಮಯ ಪ್ರಜ್ಞೆ ಮೆರೆದು ದೌಡಾಯಿಸುತ್ತಿದ್ದ ರೈಲಿನ ಎದುರಿಗೆ ಓಡಿ ಹೋಗಿ, ಲೋಕೋ ಪೈಲಟ್ನ ಗಮನ ಸೆಳೆದು, ರೈಲು ನಿಲ್ಲಿಸುವಂತೆ ಸನ್ನೆ ಮಾಡಿ ಭಾರೀ ದುರಂತ ತಪ್ಪಿಸಿದ್ದಾರೆ.
ಯುವಕರನ್ನು ದೂರದಿಂದಲೇ ನೋಡಿದ ಲೋಕೋ ಪೈಲಟ್, ರೈಲಿನ ವೇಗ ತಗ್ಗಿಸಿ ಮರ ಬಿದ್ದ ಸ್ಥಳಕ್ಕೆ ಬರುವಷ್ಟರಲ್ಲಿಯೇ ಬ್ರೇಕ್ ಹಾಕಿ ರೈಲು ನಿಲ್ಲಿಸಿದರು. ರೈಲು ಸಂಪೂರ್ಣ ನಿಯಂತ್ರಣಕ್ಕೆ ಬಂದಾಗ ಲೋಕೋ ಪೈಲಟ್ ಸೇರಿದಂತೆ ಯುವಕರು ಸೇರಿ ಹಳಿ ಮೇಲೆ ಬಿದ್ದಿದ್ದ ಮರವನ್ನು ಪಕ್ಕಕ್ಕೆ ಸರಿಸಿ, ಸುಗಮವಾಗಿ ರೈಲು ಸಂಚರಿಸುವಂತೆ ಮಾಡಿದರು. ಸಾವಿರಾರು ಜನ ಪ್ರಯಾಣಿಸುತ್ತಿದ್ದ ಈ ರೈಲಿನ ಪ್ರಯಾಣಿಕರ ಜೀವ ಉಳಿಸಿದ ಶ್ರೇಯಸ್ಸು ಈ ಯುವಕರಿಗೆ ಸಲ್ಲುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ