ಧರ್ಮ ಅರಿತವ ಪರಿಪೂರ್ಣ ವ್ಯಕ್ತಿ


Team Udayavani, Mar 2, 2021, 1:07 PM IST

ಧರ್ಮ ಅರಿತವ ಪರಿಪೂರ್ಣ ವ್ಯಕ್ತಿ

ಗೋಕಾಕ: ಎಲ್ಲ ಧರ್ಮಗಳು ಮನುಷ್ಯನನ್ನು ಸಮಾಜದ ಆಸ್ತಿಯನ್ನಾಗಿ ಮಾಡಲು ಶ್ರಮಿಸುತ್ತವೆ. ಧರ್ಮ ಎನ್ನುವುದು ಜಾತಿ ಸೂಚಕ ಪದವಲ್ಲ. ಧರ್ಮಗಳನ್ನು ಅರಿತು ನಾವು ನಡೆದರೆ ಪರಿಪೂರ್ಣ ವ್ಯಕ್ತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಐಪಿಎಸ್‌ ರವಿ ಚನ್ನಣ್ಣನವರ ಹೇಳಿದರು.

ಸೋಮವಾರ ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯಸಂಪಾದನ ಮಠದ 16 ನೇ ಶರಣ ಸಂಸ್ಕೃತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ತಪ್ಪುಗಳಿಂದ ಮನುಷ್ಯ ಕಲಿಯಬೇಕು. ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು.

ವಿದ್ಯಾರ್ಜನೆಯೇ ನನ್ನ ಕಸಬು ಎಂದ ಅವರು,ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯ. ನಾನುಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ,ಭಗತ್‌ಸಿಂಗ್‌ ಅವರ ತತ್ವಾದರ್ಶಗಳನ್ನು ಬೆಳೆಸಿಕೊಂಡಿದ್ದೇನೆ. ನನ್ನಿಂದ ಏನೂ ಆಗುವುದಿಲ್ಲಎಂದು ತಾತ್ಸಾರ ಭಾವನೆ ಬರಬಾರದು. ನನ್ನಿಂದ ಎಲ್ಲವೂ ಸಾಧ್ಯವೆಂದು ಭಾವಿಸಬೇಕು. ಮನುಷ್ಯನ್ನು ಸೋಲಿಸುವ ವಸ್ತು ಜಗತ್ತಿನಲ್ಲಿಇಲ್ಲ. ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದರು.

ಯುವ ಸಮುದಾಯ ಮೊಬೈಲ್‌, ಫೇಸ್‌ಬುಕ್‌, ಟ್ವಿಟರ್‌ಗಳಿಂದ ದೂರವಿರಬೇಕು. ನಿನ್ನನ್ನು ನೀನು ಪ್ರೀತಿಸು, ನಾನೇ ವಿಶೇಷ ಎಂದು ಬದುಕಬೇಕು. ಎಲ್ಲರಿಗೂ ಸಮಯ ಪ್ರಜ್ಞೆ ಅತೀ ಅವಶ್ಯವಾಗಿದೆ. ಕಳೆದ 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ಮಾಡಿದ್ದರು. ಈಗಲೂ ಮನೆ ಮನೆಯಲ್ಲಿ ಅನುಭವ ಮಂಟಪ ಮಾಡಬೇಕು. ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ನಾನು ಪೊಲೀಸ ಇಲಾಖೆಯಲ್ಲಿ ಸೇವೆ ಮಾಡುತ್ತಿದ್ದೇನೆ. ಬಡತನ ಶಾಪವಲ್ಲ, ಶಿಕ್ಷಣ ಪಡೆಯಬೇಕು. ಜ್ಞಾನಾರ್ಜನೆ ಮಾಡಬೇಕು. ಯಾವುದೇ ಹುದ್ದೆಯಾಗಲಿ ಸೇರಿ ಆರ್ಥಿಕ ಸಬಲತೆ ಹೊಂದಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಬೇಕು. ಶರಣರ ತತ್ವಗಳನ್ನು ಪಾಲಿಸಬೇಕು. ಸಂಸ್ಕಾರ, ಸಂಸ್ಕೃತಿ ಕಲಿಯುವಂತಹ ಕಾರ್ಯ ಮನೆಮನೆಗೆ ಮುಟ್ಟುವ ಕಾರ್ಯ ಈ ವೇದಿಕೆಯಿಂದ ನಡೆಯಲಿ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಶ್ರೀಮಠದಿಂದ ರವಿ ಚನ್ನಣ್ಣನವರ ಅವರನ್ನು ಸನ್ಮಾನಿಸಲಾಯಿತು. ಮರಡಿಮಠದ ಶ್ರೀ ಪವಾಡೇಶ್ವರ ಸ್ವಾಮಿಗಳು, ಶೂನ್ಯ ಸಂಪಾದನ ಮಠದ ಶ್ರೀಮುರುಘರಾಜೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಸಭಾ ಸದಸ್ಯ ಹಾಗೂ ಶರಣ ಸಂಸ್ಕೃತಿ ಉತ್ಸವ ಸಮಿತಿ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪ್ರಶಾಂತ ಕುರಬೇಟ, ಲಕ್ಕಪ್ಪ ಗೌಡರ, ಕೀರ್ತಿ ಸಸಾಲಟ್ಟಿ, ಪವಿತ್ರಾ ಹತ್ತರವಾಟ, ರಿಯಾಜ ನದಾಫ್‌, ಸ್ನೇಹಲ್‌ ಗರಗಟ್ಟಿ, ಮಾಲಾ ಐದುಡ್ಡಿ ಇದ್ದರು. ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶರಣರು ಮತ್ತು ದಾಸೋಹಮೂರ್ತಿಗಳಾದ ಚಂದ್ರಶೇಖರ ಕೊಣ್ಣೂರ, ಪ್ರಸನ್‌ ತಂಬಾಕೆ, ಮಗನನಾಲ್‌ ಪಟೇಲ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಪ್ರಾಸ್ತಾವಿಕವಾಗಿ ವಿವೇಕ ಜತ್ತಿ ಮಾತನಾಡಿದರು. ಎಸ್‌.ಕೆ.ಮಠದ ಸ್ವಾಗತಿಸಿ, ನಿರೂಪಿಸಿದರು. ಆರ್‌.ಎಲ್‌.ಮಿರ್ಜಿ ವಂದಿಸಿದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.