ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಎರಡನೇ ಬಲಿ
Team Udayavani, Jun 30, 2020, 10:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ 19 ಮಹಾಮಾರಿಗೆ ಎರಡನೇ ಬಲಿಯಾಗಿದೆ.
ಇದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಸೋಮವಾರ ಮೃತಪಟ್ಟಿದ್ದ 32 ವರ್ಷದ ಅಥಣಿ ತಾಲೂಕಿನ ಯುವಕನಲ್ಲಿ ಕೋವಿಡ್ ಸೋಂಕು ಇದ್ದಿದ್ದು ಇಂದು ದೃಢಪಟ್ಟಿದೆ.
ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ 32 ವರ್ಷದ ಯುವಕ ತೀವ್ರ ಉಸಿರಾಟದ ತೊಂದರೆಯಿಂದ ಬಲಲುತ್ತಿದ್ದರು.
ಕೂಡಲೇ ಆ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಉಸಿರಾಟದ ತೊಂದರೆಯಿದ್ದುದರಿಂದ ಆ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ರವಿವಾರ ಜಿಲ್ಲಾಸ್ಪತ್ರೆಗೆ ದಾಖಲುಗೊಂಡಿದ್ದ ಆ ಯುವಕ ಸೋಮವಾರ ಮೃತಪಟ್ಟಿದ್ದ.
ಉಸಿರಾಟ ತೊಂದರೆಯಿಂದ ಬಳಲಿ ಮೃತಪಟ್ಟಿದ್ದರಿಂದ ವೈದ್ಯರು ಯುವಕನ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು.
ಮಂಗಳವಾರ ಯುವಕನ ವರದಿ ಪಾಸಿಟಿವ್ ಬಂದಿದೆ. ಈ ಯುವಕ ಲಾಕ್ ಡೌನ್ ಗಿಂತ ಮುಂಚೆಯೇ ವಿದೇಶದಿಂದ ಮರಳಿದ್ದನು ಎನ್ನಲಾಗುತ್ತಿದೆ.
ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ ಗೆ ತೆರಳಿದ್ದ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ ಈ ಯುವಕನ ಅಜ್ಜಿ ಈ ಮೊದಲೇ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು ಮತ್ತು ಇದು ಜಿಲ್ಲೆಯಲ್ಲಿ ದಾಖಲಾಗಿದ್ದ ಕೋವಿಡ್ 19 ಸೋಂಕು ಸಂಬಂಧಿರ ಬಲಿಯಾಗಿತ್ತು.
ಇದೀಗ ಅಥಣಿಯ ಈ ಯುವಕನೂ ಮಹಾಮಾರಿಗೆ ಬಲಿಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ