ಜಿಪಂ ಅಧ್ಯಕ್ಷೆ ಐಹೊಳೆ ಪತಿ ಬಂಧನ
Team Udayavani, May 18, 2019, 11:46 AM IST
ಬೆಳಗಾವಿ: ನಿವೇಶನ ಕೊಡುವುದಾಗಿ ಹೇಳಿ 2 ಲಕ್ಷ ರೂ. ಸಂಗ್ರಹ ಮಾಡಿ ವಂಚಿಸಿದ ಆರೋಪದ ಮೇರೆಗೆ ಜಿಲ್ಲಾ ಪಂಚಾಯತ ಅಧ್ಯಕ್ಷೆಯ ಪತಿ ಪ್ರಶಾಂತ ಐಹೊಳೆ ಅವರನ್ನು ಅಥಣಿ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅಥಣಿ ಪಟ್ಟಣದ ಸಂಜಯ ಸಂಕಪಾಲಕರ ನೀಡಿದ ದೂರಿನ ಮೇರೆಗೆ ಪ್ರಶಾಂತ ಐಹೊಳೆ ವಿರುದ್ಧ ಐಪಿಸಿ ಸೆಕ್ಷನ್ 406, 420 ಹಾಗೂ 506 ಕಲಂ ಅಡಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪ್ರಶಾಂತ ಐಹೊಳೆ ಮಹಾಲಕ್ಷ್ಮೀ ಎಸ್ಟೇಟ್ ಹೆಸರಿನಲ್ಲಿ ನಿವೇಶನ ಕೊಡುವುದಾಗಿ ಹೇಳಿ 2 ಲಕ್ಷ ರೂ. ಪಡೆದುಕೊಂಡಿದ್ದ. ಆದರೆ ನಿವೇಶನ ಕೊಡದೇ ತಮಗೆ ವಂಚಿಸಿದ್ದಾರೆ ಎಂದು ದೂರುದಾರ ಸಂಜಯ ಸಂಕಪಾಲಕರ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ದಾಖಲೆಗಳ ಆಧಾರದ ಮೇಲೆ ಪ್ರಶಾಂತ ಐಹೊಳೆ ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ಎಸ್ಪಿ ಸುಧೀರಕುಮಾರ ರೆಡ್ಡಿ ತಿಳಿಸಿದ್ದಾರೆ. ಅಥಣಿಯಲ್ಲಿ ಶ್ರೀ ಮಹಾಲಕ್ಷ್ಮೀ ಟ್ರೇಡ್ ಡಿಸ್ಟ್ರಿಬ್ಯುಷನ್ ಪ್ರೈ.ಲಿ. ಎಂಬ ಕಂಪನಿ ಹೆಸರಿನಲ್ಲಿ ಠೇವಣಿ ಇಟ್ಟುಕೊಂಡು ವಾಪಸ್ಸು ನೀಡದೇ ವಂಚನೆ ಮಾಡಿರುವ ಬಗ್ಗೆಯೂ ಮೇ 6ರಂದು ಪ್ರಶಾಂತ ಐಹೊಳೆ ಹಾಗೂ ಪತ್ನಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2011ರಲ್ಲಿ 50 ಸಾವಿರ ರೂ. ಠೇವಣಿ ಇಟ್ಟುಕೊಂಡು ನಂತರ ಆ ಮೊತ್ತವನ್ನು ವಾಪಸು ನೀಡದೇ ಠೇವಣಿದಾರರಾದ ಕಾಗವಾಡ ತಾಲೂಕಿನ ಉಗಾರ ಬಿ.ಕೆ. ಗ್ರಾಮದ ಧರೆಪ್ಪ ಸತ್ಯಪ್ಪ ಕುಸನಾಳೆ ಹಾಗೂ ದಾದಾ ಧರೆಪ್ಪ ಕುಸನಾಳೆ ಅವರಿಗೆ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?