ಹೋರಾಟ ಕೈಬಿಡಿ; ಮತದಾನಕ್ಕೆ ಸಹಕರಿಸಿ

ಚಿಕ್ಕೋಡಿ ಹೋರಾಟ ಸಮಿತಿ ಮುಖಂಡರಿಗೆ ಜಿಪಂ ಸಿಇಒ ಮನವರಿಕೆ

Team Udayavani, Mar 24, 2019, 3:24 PM IST

10

ಚಿಕ್ಕೋಡಿ: ಜಿಲ್ಲಾ ಹೋರಾಟ ಸಮಿತಿ ಮತದಾನದ ಬಹಿಷ್ಕಾರ ಕುರಿತು ನಡೆಸಿದ ಆಂದೋಲನ ಕೈಬಿಡಬೇಕೆಂದು ಚುನಾವಣಾಧಿಕಾರಿ ರಾಜೇಂದ್ರ ಮನವಿ ಮಾಡಿದರು.

ಚಿಕ್ಕೋಡಿ: ಜಿಲ್ಲಾ ಹೋರಾಟ ಸಮಿತಿಯು ಮತದಾನ ಬಹಿಷ್ಕಾರ ಆಂದೋಲನ ಕೈಬಿಟ್ಟು ಪೂರ್ಣ ಪ್ರಮಾಣದ ಮತದಾನ ನಡೆಯಲು ಕೈ ಜೋಡಿಸಬೇಕೆಂದು ಚಿಕ್ಕೋಡಿ ಲೋಕಸಭೆ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ರಾಜೇಂದ್ರ ಹೇಳಿದರು.

ಇಲ್ಲಿನ ಮಿನಿವಿಧಾನಸೌಧ ಸಭಾ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಹೋರಾಟ ಸಮಿತಿ ಮುಖಂಡರ ಸಭೆ ನಡೆಸಿದ ಅವರು, ಚಿಕ್ಕೋಡಿ ಜಿಲ್ಲೆ ಘೋಷಣೆ ಕುರಿತು ರಾಜ್ಯ ಚುನಾವಣಾಧಿ ಕಾರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಲಾಗುತ್ತದೆ ಎಂದು ಮನವರಿಕೆ ಮಾಡಿದರು.

ಲೋಕಸಭೆ ಚುನಾವಣೆಯು ಐದು ವರ್ಷಕ್ಕೊಮ್ಮೆ ಬರುವ ದೇಶದ ಒಂದು ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಪ್ರಕ್ರಿಯೆಯಾಗಿದೆ. ಮತದಾನ ಮಾಡಬೇಡಿ ಎಂದು ಹೇಳುವುದು ಕಾನೂನಾತ್ಮಕ ಅಪರಾಧವಾಗುತ್ತದೆ ಎಂದರು.

ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಸ್ವ ಇಚ್ಛೆಯಿಂದ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬೇಕು ವಿನಾ ಬೇರೆ ವ್ಯಕ್ತಿಗೆ ಮತದಾನ ಮಾಡಬಾರದೆಂದು ಹೇಳುವುದು ಸಮಂಜಸವಲ್ಲ, ಹೋರಾಟ ಸಮಿತಿ ಸದಸ್ಯರು ನಡೆಸಿರುವ ಅಭಿಯಾನ ಮೊಟಕುಗೊಳಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಚಿಕ್ಕೋಡಿ ಜಿಲ್ಲೆಯಾಗಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ. ದೇಶದ 25 ನೆಯ ದೊಡ್ಡ ಜಿಲ್ಲೆ ಬೆಳಗಾವಿ. ರಾಜ್ಯದಲ್ಲಿ ಬೆಂಗಳೂರು ಕೇಂದ್ರ ಹೊರತುಪಡಿಸಿದರೆ ಬೆಳಗಾವಿ ಜಿಲ್ಲೆಯ ಅತೀ ದೊಡ್ಡ ಜಿಲ್ಲೆಯಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ವಿಭಜಿಸಿದರೆ ಅನುಕೂಲವಾಗುತ್ತದೆ. ಆದರೆ ಜಿಲ್ಲೆ ಘೋಷಣೆ ವಿಷಯ ಸರ್ಕಾರದ ಮಟ್ಟದಲ್ಲಿ ಆಗುವುದರಿಂದ ನಿಮ್ಮ ಬೇಡಿಕೆ ಈಡೇರಿಸಲು ನಮ್ಮಿಂದ ಸಾಧ್ಯವಾಗುವುದಿಲ್ಲ, ಹೋರಾಟಗಾರರ ಬೇಡಿಕೆಯನ್ನು ರಾಜ್ಯ ಚುನಾವಣಾ ಧಿಕಾರಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗುತ್ತದೆ ಎಂದರು.

ಜಿಲ್ಲಾ ಹೋರಾಟ ಸಮಿತಿ ಮುಖಂಡ ಬಿ.ಆರ್‌.ಸಂಗಪ್ಪಗೋಳ ಮಾತನಾಡಿ, ನಮ್ಮ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ನಾವು ಮತದಾನ ಮಾಡಬೇಡಿ ಎಂದು ಹೇಳುತ್ತೇವೆ. ನಮ್ಮ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಬಹುದು ಎಂದರು. ಆದರೆ ನಮ್ಮ ಸಮಸ್ಯೆ ಬಗೆಹರಿಸುತ್ತೇವೆಂದು ಮೇಲಧಿ ಕಾರಿಗಳ ಜೊತೆ ಮಾತುಕತೆ ನಡೆಸಿ ಮತ್ತೊಮ್ಮೆ ನಮ್ಮ ಸಭೆ ಕರೆಯಬೇಕು ಎಂದು ಮನವಿ ಮಾಡಿದರು.

ಸಾಹಿತಿ ಪ್ರೊ|ಎಸ್‌.ವೈ. ಹಂಜಿ ಮಾತನಾಡಿ, ಚಿಕ್ಕೋಡಿ 25 ಲಕ್ಷ ಜನಸಂಖ್ಯೆ ಹೊಂದಿರುವ ದೊಡ್ಡ ಜಿಲ್ಲೆ . ಇದನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವುದು ಅವಶ್ಯಕ ಎಂದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿ ಸದಸ್ಯರಾದ ತುಕಾರಾಮ ಕೋಳಿ, ಬಸವರಾಜ ಢಾಕೆ, ರೇವಪ್ಪ ತಳವಾರ, ಸಂಜು ಬಡಿಗೇರ, ಸಿದ್ದು ಪಾಟೀಲ, ಅರ್ಜುನ ಚೆನ್ನವರ, ಸುಭಾಷ ಬಸರಗಿ, ಭೀಮರಾವ ಚೌಗಲೆ, ವಾಸುದೇವ ಯಕಣೆ, ಬಾಳಪ್ಪ ವಾಲಿಕಾರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.