ಮೈಮರೆತ ಜನತೆ; ಪೊಲೀಸರಿಂದ ಲಾಠಿ ಏಟಿನ ರುಚಿ
baton shot by police
Team Udayavani, Dec 31, 2020, 1:53 PM IST
ಗೋಕಾಕ: ತಾಲೂಕಿನ 32 ಗ್ರಾಪಂಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಶಾಂತ ರೀತಿಯಿಂದ ಜರುಗಿದೆ. ಸರಕಾರಿ ಪಿಯು ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ 12 ಕೊಠಡಿಗಳಲ್ಲಿ 50ಕ್ಕೂ ಹೆಚ್ಚು ಟೇಬಲ್ಗಳಲ್ಲಿ ಮತಗಳ ಎಣಿಕೆ ಪ್ರಾರಂಭವಾಯಿತು.
ವಿಜೇತ ಅಭ್ಯರ್ಥಿಗಳ ಬೆಂಬಲಿಗರು ಗುಲಾಲು ಎರಚಿ, ಪಟಾಕ್ಷಿ ಸಿಡಿಸಿ, ಸಿಹಿ ಹಂಚುತ್ತ ವಿಜಯೋತ್ಸವ ಆಚರಿಸುತ್ತ ತಮ್ಮ ಗ್ರಾಮಗಳಿಗೆ ಹಿಂತಿರುಗುವ ದೃಶ್ಯ ಸಾಮಾನ್ಯವಾಗಿತ್ತು. ಕಾಲೇಜು ಪಕ್ಕದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣ ತಾಲೂಕಿನ ವಿವಿಧೆಡೆಯಿಂದ ಬಂದ ಸಾವಿರಾರು ಜನರಿಂದ ತುಂಬಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಬೇಕಾಯಿತು. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು.
ಇದನ್ನೂ ಓದಿ:ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ ಅಧಿಕ
ಬಾರದ ಅಂಚೆ ಮತ
ಗ್ರಾಪಂ ಚುನಾವಣೆ ಅಂಗವಾಗಿ ಬರಬೇಕಾಗಿದ್ದ ಅಂಚೆ ಮತಗಳು ಬಾರದ್ದರಿಂದ ಅಭ್ಯರ್ಥಿಗಳಿಗೆ ನಿರಾಸೆಯಾಯಿತು. ತಾಲೂಕಿನ ಎಲ್ಲ ಪಂಚಾಯತಿಗಳಲ್ಲಿ ಇದ್ದ 1313 ಮತಪತ್ರಗಳಲ್ಲಿ (ಸರ್ವೀಸ್ ವೋಟರ್) ಒಂದೂ ಮತಪತ್ರ ಮರಳಿ ಬಂದಿಲ್ಲ. ಇವೆಲ್ಲ ಮತಗಳು ಸೇನೆಯ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ತಾಲೂಕಿನ ಸಿಬ್ಬಂದಿಗೆ ಕಳಿಸಲಾಗಿತ್ತು. ಆದರೆ ಅವುಗಳು ಮರಳಿ ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್
Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ನಲ್ಲಿ ಜಲವೈಭವ
ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್ ಕುಣಿಕೆ ಬಿಗಿದು ಸಾವು
Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ