ವರ್ಷಕ್ಕೆ 722 ಕೊಳವೆಬಾವಿ ಕೊರೆಸಿದ್ರು

•167 ಬೋರ್‌ವೆಲ್ ಫೇಲ್ •ಬಾಡಿಗೆಗೆ ಪಡೆದ ಖಾಸಗಿ ಬೋರ್‌ವೆಲ್ಗಳಿಂದಲೂ ನೀರು ಪೂರೈಕೆ

Team Udayavani, May 9, 2019, 11:23 AM IST

9-May-10

(ಸಾಂದರ್ಭಿಕ ಚಿತ್ರ)

ಬಳ್ಳಾರಿ: ಬಿಸಿಲನಾಡು ಬಳ್ಳಾರಿ ಜಿಲ್ಲೆಯಲ್ಲಿ ತುಂಗಭದ್ರಾ ಜಲಾಶಯವಿದ್ದರೂ, ಬಹುತೇಕ ಗ್ರಾಮಗಳಲ್ಲಿ ಸಮರ್ಪಕ ಕುಡಿವ ನೀರಿನ ಸೌಲಭ್ಯವಿಲ್ಲ. ಇದನ್ನು ನೀಗಿಸಲು ಪರ್ಯಾಯ ವ್ಯವಸ್ಥೆ ಕಂಡುಕೊಂಡಿರುವ ಜಿಲ್ಲಾಡಳಿತ ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಾದ್ಯಂತ ಹೊಸದಾಗಿ 722 ಬೋರ್‌ವೆಲ್ಗಳನ್ನು ಕೊರೆಸಿದೆ. ಇದರಲ್ಲಿ 167 ಬೋರ್‌ವೆಲ್ಗಳು ನಿಷ್ಕ್ರಿಯವಾಗಿವೆ.

ಜಿಲ್ಲೆಯ ಎಲ್ಲ ತಾಲೂಕುಗಳ ಬಹುತೇಕ ಗ್ರಾಮಗಳಲ್ಲಿ ಇಂದಿಗೂ ಸಮರ್ಪಕ ಕುಡಿವ ನೀರಿನ ವ್ಯವಸ್ಥೆ ಇಲ್ಲ. ಕೆಲ ಗ್ರಾಮಗಳಿಗೆ ಕೆರೆ, ಶುದ್ಧ ಕುಡಿಯುವ ನೀರಿನ ಘಟಕಗಳ ಮೂಲಕ ಕುಡಿವ ನೀರು ಸರಬರಾಜು ಮಾಡಲಾಗುತ್ತಿದೆ. ಕೆರೆಗಳು ಬತ್ತಿ ಹೋಗಿ ನೀರಿನ ಕೊರತೆಯುಳ್ಳ ಗ್ರಾಮಗಳಲ್ಲಿ ಪರ್ಯಾಯವಾಗಿ ಬೋರ್‌ವೆಲ್ ಕೊರೆಸಿ ನೀರು ಪೂರೈಸುವುದು ಅಥವಾ ಖಾಸಗಿಯವರಿಂದ ಬೋರ್‌ವೆಲ್ಗಳನ್ನು ಬಾಡಿಗೆಗೆ ಪಡೆದು ಅಲ್ಲಿನ ಜನರಿಗೆ ಕುಡಿಯಲು ನೀರು ಪೂರೈಕೆ ಮಾಡಲಾಗುತ್ತಿದೆ. ಹೀಗೆ ಜಿಲ್ಲೆಯಾದ್ಯಂತ ಒಟ್ಟು 191 ಹಳ್ಳಿಗಳಲ್ಲಿ 281 ಬೋರ್‌ವೆಲ್ಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಜತೆಗೆ ಜಿಲ್ಲೆಯಾದ್ಯಂತ ಕಳೆದ 2018 ಮಾರ್ಚ್‌ ತಿಂಗಳಿಂದ 2019 ಏಪ್ರಿಲ್ವರೆಗೆ ಹೊಸದಾಗಿ ಒಟ್ಟು 722 ಬೋರ್‌ವೆಲ್ಗಳನ್ನು ಕೊರೆಸಲಾಗಿದ್ದು, ಇದರಲ್ಲಿ 565 ಯಶಸ್ವಿಯಾಗಿ, 167 ಬೋರ್‌ವೆಲ್ಗಳು ನಿಷ್ಕ್ರಿಯ (ಫೇಲ್)ವಾಗಿವೆ.

ಬಳ್ಳಾರಿ ತಾಲೂಕಿನಲ್ಲಿ ಕೊರೆಸಲಾದ 77 ಬೋರ್‌ವೆಲ್ಗಳ ಪೈಕಿ 64 ಯಶಸ್ವಿಯಾಗಿದ್ದು, 13 ಫೇಲ್ ಆಗಿವೆ. ಹಡಗಲಿಯಲ್ಲಿ 108 ಬೋರ್‌ವೆಲ್ ಪೈಕಿ 104 ಯಶಸ್ವಿಯಾಗಿದ್ದು, ಕೇವಲ 4 ಬೋರ್‌ವೆಲ್ಗಳು ಮಾತ್ರ ಫೇಲ್ ಆಗಿವೆ. ಇನ್ನುಳಿದಂತೆ ಹ.ಬೊ.ಹಳ್ಳಿಯಲ್ಲಿ 49ರಲ್ಲಿ 24 ಯಶಸ್ವಿ, 25 ಫೇಲ್, ಹೊಸಪೇಟೆ 85ರಲ್ಲಿ 67 ಯಶಸ್ವಿ, 18 ಫೇಲ್, ಕೂಡ್ಲಿಗಿ 144ರಲ್ಲಿ 115 ಯಶಸ್ವಿ, 29 ಫೇಲ್, ಸಂಡೂರು 194ರಲ್ಲಿ 126 ಯಶಸ್ವಿಯಾಗಿದ್ದು, 68 ಫೇಲ್ ಆಗಿವೆ. ಸಿರುಗುಪ್ಪ ತಾಲೂಕಿನಲ್ಲಿ ಕೊರೆಸಲಾಗಿದ್ದ 65 ಬೋರ್‌ವೆಲ್ಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಪ್ರತಿಯೊಂದು ಬೋರ್‌ವೆಲ್ ಕೊರೆಸಲು ಅಂದಾಜು 45 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳವರೆಗೆ ವೆಚ್ಚವಾಗಲಿದ್ದು, ಕುಡಿಯುವ ನೀರಿನ ಸಲುವಾಗಿ ಬೋರ್‌ವೆಲ್ ಕೊರೆಸಲು ಅಂದಾಜು ಮೂರ್‍ನಾಲ್ಕು ಕೋಟಿ ರೂ. ವೆಚ್ಚವಾಗಿದೆ ಎಂದು ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆಯ ಅಂಕಿ ಅಂಶಗಳು ಸ್ಪಷ್ಟಪಡಿಸುತ್ತವೆ.

ಟ್ಯಾಂಕರ್‌ ನೀರು ಪೂರೈಕೆ: ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಕುಡಿವ ನೀರಿನ ಸಮಸ್ಯೆ ಉಲ್ಬಣಿಸಿದ ಪರಿಣಾಮ 51 ಗ್ರಾಮಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಟ್ಯಾಂಕರ್‌ಗಳಿಂದ ನೀರು ಪೂರೈಸಲಾಗುತ್ತಿದೆ. ಬಳ್ಳಾರಿ ತಾಲೂಕು 6 ಗ್ರಾಮಗಳು, ಕೂಡ್ಲಿಗಿ 25, ಸಂಡೂರು 4, ಹರಪನಹಳ್ಳಿ 15 ಸೇರಿ ಒಟ್ಟು 51 ಗ್ರಾಮಗಳಲ್ಲಿ ಟ್ಯಾಂಕರ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ನಾಲ್ಕು ಸರ್ಕಾರಿ ಟ್ಯಾಂಕರ್‌, 78 ಖಾಸಗಿ ಸೇರಿ ಒಟ್ಟು 82 ಟ್ಯಾಂಕರ್‌ಗಳು ನೆರೆಹೊರೆಯಲ್ಲಿ ಖಾಸಗಿಯವರಿಂದ ಬಾಡಿಗೆಗೆ ಪಡೆದಿರುವ ಬೋರ್‌ವೆಲ್ಗಳಿಂದ ನೀರು ಪಡೆದು ದಿನಕ್ಕೆ 334 ಟ್ರಿಪ್‌ ನೀರನ್ನು ಗ್ರಾಮಗಳಿಗೆ ಸರಬರಾಜು ಮಾಡಲಾಗುತ್ತಿದೆ. ಬೇಸಿಗೆ ದಿನಗಳಲ್ಲಿ ಕುಡಿವ ನೀರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕುಡಿವ ನೀರಿನ ಸಮಸ್ಯೆಯುಳ್ಳ ಗ್ರಾಮಗಳಲ್ಲಿ ಮೊದಲು ಬೋರ್‌ವೆಲ್ ಕೊರೆಸುವುದು, ನೀರು ಬೀಳದಿದ್ದಲ್ಲಿ ಪರ್ಯಾಯವಾಗಿ ಖಾಸಗಿಯವರಿಂದ ಬೋರ್‌ವೆಲ್ ಬಾಡಿಗೆಗೆ ಪಡೆದು ನೀರು ಪೂರೈಸಲು ಅವಕಾಶ ಕಲ್ಪಿಸಿಕೊಡಲು ಮೊದಲು ಕ್ರಮಕೈಗೊಳ್ಳಲಾಗುವುದು ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ಕುಡಿಯುವ ನೀರಿನ ಸಮಸ್ಯೆಯುಳ್ಳ ಗ್ರಾಮಗಳಲ್ಲಿ ನೀರು ಪೂರೈಸುವುದು ಮೊದಲ ಆದ್ಯತೆಯಾಗಿದೆ. ಅದಕ್ಕಾಗಿ ನೀರಿನ ಸಮಸ್ಯೆಯುಳ್ಳ ಗ್ರಾಮಗಳಲ್ಲಿ ಕಳದ ಒಂದು ವರ್ಷದಲ್ಲಿ ಜಿಲ್ಲೆಯಾದ್ಯಂತ ಹೊಸದಾಗಿ ಒಟ್ಟು 722 ಬೋರ್‌ವೆಲ್ ಕೊರೆಸಲಾಗಿದೆ. ಇದರಲ್ಲಿ 565 ಯಶಸ್ವಿಯಾಗಿದ್ದು, 167 ಫೇಲ್ ಆಗಿವೆ. ಬೋರ್‌ವೆಲ್ ಫೇಲ್ ಆಗಿರುವ ಕಡೆ ಪರ್ಯಾಯವಾಗಿ ಖಾಸಗಿಯವರಿಂದ ಬಾಡಿಗೆಗೆ ಪಡೆದ ಬೋರ್‌ವೆಲ್ಗಳ ಮೂಲಕ ಗ್ರಾಮಗಳಿಗೆ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.
•ಶಶಿಧರ್‌, ಕಾರ್ಯನಿರ್ವಾಹಕ ಅಭಿಯಂತರು,
ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ, ಬಳ್ಳಾರಿ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.