ಜಿಂದಾಲ್ಗೆ ಮುತ್ತಿಗೆ ಯತ್ನ
ಸರ್ಕಾರ ಕಠಿಣ ನಿರ್ಣಯ ಕೈಗೊಳ್ಳದಿದ್ದರೆ ಜುಲೈನಲ್ಲಿ ಹೆದ್ದಾರಿ ಬಂದ್
Team Udayavani, Jun 16, 2019, 11:38 AM IST
ಬಳ್ಳಾರಿ: ಜಿಂದಾಲ್ಗೆ ಜಮೀನು ಪರಭಾರೆ ವಿರೋಧಿಸಿ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು.
ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡಿಕೊಡುವುದಾಗಿ ಮೈತ್ರಿ ಸರ್ಕಾರ ಕೈಗೊಂಡ ನಿರ್ಣಯ ವಿರೋಧಿಸಿ ಜಿಂದಾಲ್ಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಪ್ರತಿಭಟನಾನಿರತರನ್ನು ಪೊಲೀಸರು ಶನಿವಾರ ವಶಕ್ಕೆ ತೆಗೆದುಕೊಂಡು ಬಿಡುಗಡೆ ಮಾಡಿದರು.
ಸ್ಥಳೀಯ ಕನ್ನಡಪರ ಸಂಘಟನೆಗಳ ಒಕ್ಕೂಟ, ರೈತ ಸಂಘದ ನೇತೃತ್ವದಲ್ಲಿ ಜಿಂದಾಲ್ ಕಾರ್ಖಾನೆಯ ಮುಖ್ಯದ್ವಾರ ಎದುರು ಪ್ರತಿಭಟನಾ ಧರಣಿ ನಡೆಸಿದ ವಾಟಾಳ್ ನಾಗರಾಜ್, ಕಾರ್ಖಾನೆ, ಮೈತ್ರಿ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಾವ ಚಿಂತನೆಯನ್ನೂ ಮಾಡದೇ ಈ ನಿರ್ಣಯ ಒಪ್ಪಿದ್ದಾರೆ. ಈ ಜಮೀನು ಯಾರಪ್ಪನ ಮನೆಯ ಆಸ್ತಿ ಅಲ್ಲ. ಕನ್ನಡಿಗರ ಆಸ್ತಿ. ಮೈತ್ರಿ ಸರ್ಕಾರದ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಜಿಂದಾಲ್ ಕಾರ್ಖಾನೆಯಿಂದ ವಿಷ ಹರಡುತ್ತಿದೆ. ಸುತ್ತಲಿನ ಜನ ವಿಷ ಕುಡಿದು ಬದುಕುತ್ತಿದ್ದಾರೆ. ಸಚಿವ ಸಂಪುಟದಲ್ಲಿ ಮಹಾಮೋಸ ನಡೆದಿದೆ. ಉಪ ಸಮಿತಿ ಹೆಸರೇ ಮೋಸದ ಸಮಿತಿ. ಸರ್ಕಾರದ ಸಚಿವರೇ ಸಮಿತಿಯಲ್ಲೂ ಇದ್ದು, ದೇಶ ಕಂಡ ದೊಡ್ಡ ಭ್ರಷ್ಟಾಚಾರವಿದು. ಆದ್ದರಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು. ಕಳೆದ 1995ರಿಂದ ಆಗಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಬೇಕು. ಕೊಟ್ಟ ಜಮೀನು ಯಾವುದಕ್ಕೆ ಬಳಕೆಯಾಗಿದೆ. ಈ ಬಗ್ಗೆ ಸರ್ಕಾರ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ಸಚಿವರು ಕಡ್ಲೆಪುರಿ ವ್ಯಾಪಾರ ಮಾಡಿದಂತೆ ಕೇವಲ ಒಂದು ಲಕ್ಷಕ್ಕೆ ಎಕರೆ ಜಮೀನು ಮಾರಾಟ ಮಾಡಿದ್ದಾರೆ. ರಾಜ್ಯದ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಜನರನ್ನು ಮೌಡ್ಯರನ್ನಾಗಿ ಮಾಡಿದ್ದಾರೆ. ಜಿಂದಾಲ್ ಕಂಪನಿಯವರು ಅನಧಿಕೃತವಾಗಿ ತುಂಗಭದ್ರಾ ನೀರು ಬಳಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಕೂಡಲೇ ಕಠಿಣ ನಿರ್ಣಯ ಕೈಗೊಳ್ಳದಿದ್ದಲ್ಲಿ ಜುಲೈ ತಿಂಗಳ ಮೊದಲ ವಾರದಲ್ಲಿ ಕನ್ನಡಿಗರ ಸಮ್ಮೇಳನ ಆಯೋಜಿಸಿ, ಕೊನೆಯ ವಾರದಲ್ಲಿ ಬಳ್ಳಾರಿ ಬಂದ್, ರಾಜ್ಯ ಹೆದ್ದಾರಿ ಬಂದ್, ಜೈಲ್ ಭರೋ ಚಳವಳಿ ಮಾಡುತ್ತೇವೆಂದು ವಾಟಾಳ್ ನಾಗರಾಜ್ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ