ಗಾಂಧಿಧೀಜಿ ಅಡ್ಡಾಡಿದ ಸ್ಥಳಗಳ ಅಭಿವೃದ್ಧಿ

•ಭೇಟಿ-ವಾಸ್ತವ್ಯ-ಚಳವಳಿ-ವಿಶ್ರಾಂತಿ ಪಡೆದ ತಾಣಗಳ ಗುರುತಿಸುವ ಕಾರ್ಯ

Team Udayavani, Aug 23, 2019, 12:13 PM IST

23-April-15

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲು ಮುಂದಾಗಿರುವ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಇಲಾಖೆ, ಗಾಂಧಿಧೀಜಿಯವರು ಭೇಟಿ ನೀಡಿರುವ ಸ್ಥಳಗಳನ್ನು ಗುರುತಿಸಿ, ಅಭಿವೃದ್ಧಿ ಪಡಿಸಿ, ಪ್ರವಾಸಿ ವೃತ್ತಗಳನ್ನಾಗಿ ರೂಪಿಸಿ, ದೇಶ-ವಿದೇಶ ಪ್ರವಾಸಿಗರಿಗೆ ಪರಿಚಯಿಸಲು ಮುಂದಾಗುತ್ತಿದೆ.

ಸ್ಥಳಗಳ ಅಭಿವೃದ್ಧಿ: ಗಾಂಧೀಜಿಯವರು ರಾಜ್ಯದ ಯಾವ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅಂತಹ ಸ್ಥಳಗಳನ್ನು ಗುರುತಿಸಿ ವರದಿ ನೀಡುವಂತೆ ಆಯಾ ಜಿಲ್ಲಾಡಳಿತಕ್ಕೆ ಕೋರಿದ್ದಾರೆ. ಈ ನಿಟ್ಟಿನಲ್ಲಿ ಗಾಂಧೀಜಿಯವರು ಭೇಟಿ ನೀಡಿದ್ದ ಸ್ಥಳ, ವಾಸ್ತವ್ಯ ಮಾಡಿದ್ದ ಸ್ಥಳ, ಚಳವಳಿ ಆರಂಭಿಸಿದ್ದ ಸ್ಥಳ, ವಿಶ್ರಾಂತಿ ಪಡೆದಿದ್ದ ಸ್ಥಳಗಳನ್ನು ಗುರುತಿಸಲಾಗುತ್ತಿದೆ. ಈ ಎಲ್ಲ ಸ್ಥಳಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲಾಗುತ್ತದೆ. ಇದಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳೀಯ ಹೋಂ ಸ್ಟೇ, ಆಶ್ರಮ, ವಸತಿ ಸೌಲಭ್ಯಗಳೊಂದಿಗೆ ಪ್ರವಾಸಿ ವೃತ್ತವನ್ನಾಗಿ ನಿರ್ಮಿಸಿ ದೇಶ-ವಿದೇಶ ಪ್ರವಾಸಿಗಳ ವೀಕ್ಷಣೆಗೆ ಅನುಕೂಲ ಕಲ್ಪಿಸಲಾಗುತ್ತದೆ.

ಬಳ್ಳಾರಿಗೂ ಭೇಟಿ ನೀಡಿದ್ದ ಗಾಂಧಿ: ಮಹಾತ್ಮಾ ಗಾಂಧೀಜಿಯವರು ಬಳ್ಳಾರಿಗೂ ಭೇಟಿ ನೀಡಿದ್ದು, ಈ ಕುರಿತ ಕುರುಹುಗಳು ಬಳ್ಳಾರಿಯಲ್ಲೂ ಇವೆ. ಸ್ವಾತಂತ್ರ ಪೂರ್ವದಲ್ಲಿ ಬಳ್ಳಾರಿಗೆ ಭೇಟಿ ನೀಡಿದ್ದ ಅವರು ಬಳ್ಳಾರಿಯಿಂದ ಬೇರೆಡೆ ತೆರಳಲು ರೈಲು ನಿಲ್ದಾಣಕ್ಕೆ ಹೋಗಿದ್ದರು. ಆಗ ರೈಲು ತಡವಾದ ಹಿನ್ನೆಲೆಯಲ್ಲಿ ಕೆಲ ಹೊತ್ತು ನಿಲ್ದಾಣದಲ್ಲೇ ವಿಶ್ರಾಂತಿ ಪಡೆದಿದ್ದರು. ಅದರ ನೆನಪಿಗಾಗಿ ರೈಲ್ವೆಯವರು ಅಲ್ಲೊಂದು ಸ್ಮಾರಕ ನಿರ್ಮಿಸಿದ್ದಾರೆ. ಕಳೆದ ವರ್ಷ ಕಲಾವಿದರಿಂದ ಗಾಂಧಿಧೀಜಿಯವರು ಚಿತ್ರವನ್ನೂ ಬರೆಸಿದ್ದಾರೆ. ಇದು ನಿತ್ಯ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಿದೆ. ಅಲ್ಲದೇ, ಗಾಂಧಿಧೀಜಿಯವರು ಮುನ್ಸಿಪಲ್ ಕಾಲೇಜು ಮೈದಾನಕ್ಕೆ ಮತ್ತು ಕೂಡ್ಲಿಗಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಜತೆಗೆ ಗಾಂಧಿಧೀಜಿಯವರ ಚಿತಾಭಸ್ಮವೂ ಬಳ್ಳಾರಿಯಲ್ಲಿದೆ. ಗಾಂಧೀ ಭೇಟಿ ನೀಡಿದ್ದ ಸ್ಥಳಗಳು ಅಭಿವೃದ್ಧಿಯಾದಲ್ಲಿ ಉಳಿದ ಸ್ಥಳಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ.

ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಮಹಾತ್ಮಾ ಗಾಂಧೀಜಿಯವರು ಎಲ್ಲೆಲ್ಲಿ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಕೇಳಿದ್ದಾರೆ. ಅವುಗಳನ್ನು ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕೂಡ್ಲಿಗಿ, ಬಳ್ಳಾರಿ ರೈಲು ನಿಲ್ದಾಣ, ಕೊಪ್ಪಳ ಜಿಲ್ಲೆಯ ಬಾಣಾಪುರಕ್ಕೆ ಭೇಟಿ ನೀಡಿದ್ದರು ಎಂಬ ಮಾಹಿತಿಯಿದ್ದು, ಈ ಕುರಿತು ವರದಿ ಕಳುಹಿಸಲಾಗುವುದು. ಜತೆಗೆ ಆಯಾ ಜಿಲ್ಲಾ ಕಂದಾಯ ಇಲಾಖೆಗೂ ಸಂಪರ್ಕಿಸಿ ಈ ಕುರಿತು ಮಾಹಿತಿ ನೀಡುವಂತೆ ಕೋರಲಾಗುವುದು.
ಮೋತಿಲಾಲ್ ಲಮಾಣಿ,
ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬಳ್ಳಾರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.