ವೈದ್ಯೆಯರ ವೃತ್ತಿ ನಿರ್ವಹಣೆ ಅದ್ಭುತ: ತೇಜಸ್ವಿನಿ

ರಾಜ್ಯಮಟ್ಟದ ಮಹಿಳಾ ವೈದ್ಯರ ಸಮ್ಮೇಳನ 'ಅದ್ವಿತಿ-2019' ಕಾರ್ಯಕ್ರಮಕ್ಕೆ ಚಾಲನೆ

Team Udayavani, Jul 22, 2019, 11:27 AM IST

22-July-12

ಬಳ್ಳಾರಿ: ಅಲ್ಲಂ ಭವನದಲ್ಲಿ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ವೈದ್ಯಕೀಯ ದಿನಾಚರಣೆ ಮತ್ತು ರಾಜ್ಯಮಟ್ಟದ ಮಹಿಳಾ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಉದ್ಘಾಟಿಸಿದರು.

ಬಳ್ಳಾರಿ: ಮಹಿಳಾ ವೈದ್ಯರು ಕುಟುಂಬದೊಂದಿಗೆ ವೃತ್ತಿ ಜೀವನವನ್ನೂ ಸಮರ್ಪಕವಾಗಿ ನಿರ್ವಹಿಸುವ ರೀತಿ ಅದ್ಭುತವಾದುದು ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆಯ ನಿರ್ದೇಶಕಿ ತೇಜಸ್ವಿನಿ ಅನಂತಕುಮಾರ್‌ ಮಹಿಳಾ ವೈದ್ಯರ ಬಗ್ಗೆ ಗುಣಗಾನ ಮಾಡಿದರು.

ನಗರ ಹೊರವಲಯದ ಅಲ್ಲಂ ಭವನದಲ್ಲಿ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕ ಮತ್ತು ವೈದ್ಯರ ವಿಭಾಗದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಮತ್ತು ರಾಜ್ಯಮಟ್ಟದ ಮಹಿಳಾ ವೈದ್ಯರ ಸಮ್ಮೇಳನ ‘ಅದ್ವಿತಿ-2019’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವೈದ್ಯರೂ ಮನುಷ್ಯರೇ, ಅವರ ಮನಸ್ಸು ಎಲ್ಲಾ ನೋವುಗಳನ್ನು ಅನುಭವಿಸುತ್ತದೆ. ಅದರಲ್ಲೂ ಮಹಿಳಾ ವೈದ್ಯರು ಕುಟುಂಬದೊಂದಿಗೆ ವೃತ್ತಿ ಜೀವನವನ್ನು ನಿರ್ವಹಿಸುವ ರೀತಿ ಅದ್ಭುತವಾದುದು. ವೈದ್ಯರು ಎಷ್ಟೇ ದೊಡ್ಡ ವ್ಯಕ್ತಿಯನ್ನು ಪ್ರಭಾವಿಸಬಲ್ಲರು ಎಂದು ತಿಳಿಸಿದರು.

ಮಹಿಳೆಯರು ಮನೆಯೊಂದಿಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡರೆ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲು ಸಹಕಾರಿಯಾಗುತ್ತದೆ. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮನಸ್ಥಿತಿ ಇರಬೇಕು ಎಂದ ಅವರು, ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ, ಕಸವನ್ನು ಮರುಬಳಕೆ ಮಾಡಿಕೊಳ್ಳುವ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕು. ಭಾರತೀಯ ವಿಚಾರ ಮತ್ತು ತತ್ವಗಳು ಇಂದಿಗೂ ನಮ್ಮಲ್ಲಿವೆ. ಕೇವಲ ಸೀರೆ ಮತ್ತು ಕುಂಕುಮ ಇಟ್ಟುಕೊಂಡರೆ ಸಂಸ್ಕೃತಿಯನ್ನು ಗೌರವಿಸಿದಂತೆ ಅಲ್ಲ. ಅದು ನಮ್ಮ ನಡವಳಿಕೆಯಲ್ಲಿ ಕಾಣಿಸಬೇಕು. ಸಾಧನೆ ಮಾಡಲು ಕಾಯಬಾರದು, ಕಾರ್ಯ ಪ್ರವೃತ್ತರಾಗಬೇಕು ಎಂದರು.

ಸಂಘದ ರಾಜ್ಯಾಧ್ಯಕ್ಷ ಡಾ| ಅನ್ನದಾನಿ.ಎಂ. ಮೇಟಿ ಮಾತನಾಡಿ, ದೇಶದಲ್ಲಿ ಮಹಿಳಾ ವೈದ್ಯರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದರೂ ಸಮಸ್ಯೆಗಳಿವೆ. ಮಹಿಳಾ ವೈದ್ಯರ ಮೇಲಿನ ಹಲ್ಲೆಗಳನ್ನು ತಡೆದು ರಕ್ಷಣೆಗಾಗಿ ಮಹಿಳಾ ವೈದ್ಯರೆಲ್ಲರೂ ಸಂಘಟಿತರಾಗಬೇಕು. ರಾಷ್ಟ್ರಮಟ್ಟದಲ್ಲಿ ವೈದ್ಯರ ಮೇಲಿನ ಹಲ್ಲೆ ತಡೆಯಲು ಕಾಯ್ದೆ ಜಾರಿಯಾಗಬೇಕಿದೆ ಎಂದರು.

ಹೃದ್ರೋಗ ತಜ್ಞೆ ಡಾ| ವಿಜಯಲಕ್ಷ್ಮೀ ಮತ್ತು ಉನ್ನತಿ ಫೌಂಡೇಶನ್‌ ಅಧ್ಯಕ್ಷೆ ಡಾ| ಸರಸ್ವತಿ ಹೆಗಡೆ ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳ ಮಹಿಳಾ ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಹಿಳಾ ವೈದ್ಯರ ಸಂಘಟನೆ ಬಲಪಡಿಸುವುದು, ವೃತ್ತಿಯ ಸಮಸ್ಯೆಗಳಿಗೆ ಪರಿಹಾರ, ಮಹಿಳಾ ವೈದ್ಯರಾಗುವ ವಿದ್ಯಾರ್ಥಿನಿಯರಿಗೆ ಉತ್ತೇಜನ ನೀಡುವ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಯಿತು. ಸಮತೋಲನದ ಜೀವನ, ಡಿಜಿಟಲ್ ಯುಗದಲ್ಲಿ ಮಕ್ಕಳ ಪಾಲನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿವಿಧ ಕ್ಷೇತ್ರಗಳ ಸಾಧಕರು ಉಪನ್ಯಾಸ ನೀಡಿದರು.

ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಡಾ| ಎನ್‌. ಶ್ರೀನಿವಾಸ್‌, ಕಾರ್ಯದರ್ಶಿ ಗೋವರ್ಧನ್‌ ರೆಡ್ಡಿ, ಡಾ| ಯೋಗಾನಂದ ರೆಡ್ಡಿ, ಡಾ| ಅರುಣಾ ಕಾಮಿನೇನಿ, ವೆಂಕಟರಾವ್‌ ಚಲಪತಿ, ಡಾ| ಮಧುಸೂಧನ್‌ ಕಾರಿಗನೂರು, ಡಾ| ನಾಜ್‌ಜಹಾನ್‌ ಶೈಕ್‌, ಡಾ| ಗಂಗಮ್ಮ, ಡಾ| ಜಯಶ್ರೀ ಇದ್ದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.