ಸಂಭ್ರಮದ ಈದ್-ಉಲ್-ಫಿತರ್
•ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು•ಗಣ್ಯರಿಂದ ಶುಭಾಶಯ ಕೋರಿಕೆ-ಸಿಹಿ ವಿತರಣೆ
Team Udayavani, Jun 6, 2019, 11:07 AM IST
ಬಳ್ಳಾರಿ: ರಂಜಾನ್ ಅಂಗವಾಗಿ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬಳ್ಳಾರಿ: ಇಸ್ಲಾಂ ಧರ್ಮದ ಪವಿತ್ರ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸಲ್ಮಾನರು ಶ್ರದ್ಧಾ, ಭಕ್ತಿಯಿಂದ ಸಂಭ್ರಮದಿಂದ ಬುಧವಾರ ಆಚರಿಸಿದರು.
ಕಳೆದ 30 ದಿನಗಳಿಂದ ಉಪವಾಸ ವ್ರತವನ್ನು ಮಂಗಳವಾರ ಸಂಜೆ ಕೈಬಿಟ್ಟ ಮುಸಲ್ಮಾನರು ಬೆಳಗ್ಗೆಯೇ ಹೊಸ ಬಟ್ಟೆ ಧರಿಸಿ ಮಂದಿರಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮನೆಗೆ ಬಂದು ಸಿಹಿ ತಿನಿಸು ಸೇವಿಸಿದರು. ನಗರದ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಆಲಂಗಿಸುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಹಿನ್ನೆಲೆಯಲ್ಲಿ ಮುಸಲ್ಮಾನರು ಹೊಸ ಉಡುಗೆ ತೊಟ್ಟು ಪ್ರಾರ್ಥನೆ ಸಲ್ಲಿಸಿ ಸಂಭ್ರಮಿಸಿದರು.
ಮುಸ್ಲಿಂ ಧರ್ಮ ಗುರು ಖಾಜಿ ಗುಲಾಂ ಮೊಹಮೂದ್ ಸಿದ್ದಿಕಿ ಧರ್ಮ ಸಂದೇಶ ನೀಡಿ, ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಶಾಸಕ ಅನಿಲ್ ಲಾಡ್, ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಮಹಮ್ಮದ್ ರಫೀಕ್, ರಾಜ್ಯಸಭೆ ಸದಸ್ಯ ಸೈಯ್ಯದ್ ನಾಸೀರ್ ಹುಸೇನ್, ಜೆಡಿಎಸ್ ಮುಖಂಡ ಹೊತೂರ್ ಮಹಮ್ಮದ್ ಇಕ್ಬಾಲ್, ಯುವ ಮುಖಂಡ ಹನುಮ ಕಿಶೋರ್ ಸೇರಿದಂತೆ ಹಲವು ಮುಖಂಡರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮುಸ್ಲಿಂ ಮುಖಂಡರಿಗೆ ಹಬ್ಬದ ಶುಭಾಶಯ ಕೋರಿದರು. ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದರು.
ನಂತರ ಪಕ್ಕದಲ್ಲೇ ಇದ್ದ ಖಬರಸ್ಥಾನಕ್ಕೆ ತೆರಳಿದ ಮುಸಲ್ಮಾನರು ತಮ್ಮ ತಮ್ಮ ಹಿರಿಯ ಸಮಾಧಿಗಳಿಗೆ ಹೂವು, ಪತ್ರಿಗಳನ್ನು ಇಟ್ಟು ಪ್ರಾರ್ಥಿಸಿದರು. ಹಬ್ಬದ ನಿಮಿತ್ತ ಬಂಡಿಮೋಟ್ ಪ್ರದೇಶದಲ್ಲಿ ಕಾಂಗ್ರೆಸ್ ಯುವ ಮುಖಂಡ ಪ್ರಭಂಜನ್ ಕುಮಾರ್ ತಂಪು ಪಾನೀಯಗಳನ್ನು ವಿತರಿಸಿದರು. ಈದ್ಗಾ ಮೈದಾನಕ್ಕೆ ತೆರಳುವ ಮಾರ್ಗದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರಾರ್ಥನೆ ನಂತರ ಜನಸಂದಣಿಯಿಂದ ಮೈದಾನದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ