ಗುರು ಪೌರ್ಣಿಮೆ ವಿಜೃಂಭಣೆ: ಭಕ್ತಿ ಸಮರ್ಪಣೆ
ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಭಕ್ತರಿಗೆ ಪ್ರಸಾದ ವ್ಯವಸ್ಥೆ ಸಾರ್ವಜನಿಕರಿಂದ ರಕ್ತದಾನ ಶಿಬಿರ
Team Udayavani, Jul 17, 2019, 11:12 AM IST
ಬಳ್ಳಾರಿ: ಗುರುಪೌರ್ಣಿಮೆ ನಿಮಿತ್ತ ಸಾಯಿಬಾಬಾ ದೇವಸ್ಥಾನದಲ್ಲಿ ದರ್ಶನ ಪಡೆಯಲು ಸಾಲುಗಟ್ಟಿ ನಿಂತ ಭಕ್ತರು.
ಬಳ್ಳಾರಿ: ಗುರು ಪೂರ್ಣಿಮೆ ನಿಮಿತ್ತ ಜಿಲ್ಲೆಯಾದ್ಯಂತ ಸಾಯಿಬಾಬಾ ಮಂದಿರ ಸೇರಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಪಲ್ಲಕ್ಕಿ ಉತ್ಸವಗಳು ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಜರುಗಿದವು.
ನಗರದ ಅನಂತಪುರ ರಸ್ತೆಯಲ್ಲಿನ ಶಿರಡಿ ಸಾಯಿಬಾಬಾ ದೇವಾಲಯ, ಹೊಸಪೇಟೆ ನಗರದ ಸಾಯಿಬಾಬಾ ದೇವಾಲಯ ಸೇರಿದಂತೆ ನಾನಾ ದೇವಾಲಯಗಳಲ್ಲಿ ವಿವಿಧ ಪೂಜೆಗಳು ನಡೆದವು.
ಹರಿದು ಬಂದ ಜನಸಾಗರ: ನಗರದ ಅನಂತಪುರ ರಸ್ತೆಯ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಗುರು ಪೂರ್ಣಿಮೆ ನಿಮಿತ್ತ ನಗರ ಸೇರಿದಂತೆ ನಾನಾ ಕಡೆಯಿಂದ ಜನಸಾಗರವೇ ಬುಧವಾರ ಹರಿದು ಬಂದಿತ್ತು. ಗುರು ಪೂರ್ಣಿಮೆ ನಿಮಿತ್ತ ದೇವಾಲಯದಲ್ಲಿ ಬೆಳಗ್ಗೆ 5.15ಕ್ಕೆ ಕಾಕಡ ಆರತಿ, 6ಕ್ಕೆ ಗಣಪತಿ ಪೂಜೆ, ಸಾಯಿಬಾಬಾ ಅವರಿಗೆ ಮಂಗಳ ಸ್ನಾನ, ಕ್ಷೀರಾಭಿಷೇಕ, ಸಾಯಿ ಸಚ್ಚರಿತ್ರೆ ಪಾರಾಯಣ, 6.30ಕ್ಕೆ ಸಾಯಿಬಾ ನಗರ ಸಂಕೀರ್ತನೆ, 7.15ಕ್ಕೆ ಸಾಯಿಬಾಬಾ ಪಾದುಕೆಗಳಿಗೆ ಗಂಗಾ ಜಲಾಭಿಷೇಕ, 8ಕ್ಕೆ ಸಾಯಿಬಾಬಾ ಅವರಿಗೆ ಅರ್ಚನೆ, ವಿಶೇಷ ಅಲಂಕಾರ, ಲಘು ಆರತಿ, ಮ.12ಕ್ಕೆ ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಸಂಜೆ 6.15ಕ್ಕೆ ಧೂಪಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು. 7.30ಕ್ಕೆ ಪಲ್ಲಕ್ಕಿ ಉತ್ಸವ, 9.30ಕ್ಕೆ ಶೇಜಾರತಿ, ಉಯ್ನಾಲೆ ಸೇವೆ ವಿಜೃಂಭಣೆಯಿಂದ ನಡೆಯಿತು. ದೇವಾಲಯದ ಸಮಿತಿ ಅಧ್ಯಕ್ಷ ಎನ್.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎಲ್ಲ ಪೂಜಾ ಕಾರ್ಯಕ್ರಮಗಳು ಜರುಗಿದವು. ಭಕ್ತರ ಸಂಖ್ಯೆ ನಿರೀಕ್ಷೆಗೂ ಹೆಚ್ಚು ಆಗಮಿಸಿದ ಹಿನ್ನೆಲೆಯಲ್ಲಿ ಸಮಿತಿ ಪದಾಧಿಕಾರಿಗಳು ಹರಸಹಾಸಪಟ್ಟರು. ಆದರೂ ಸಮಿತಿ ಪದಾಧಿಕಾರಿಗಳು ಎಲ್ಲರಿಗೂ ದರ್ಶನದ ವ್ಯವಸ್ಥೆ ಕಲ್ಪಿಸಿದರು. ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಕ್ತದಾನ ಶಿಬಿರ: ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದರ್ಶನಕ್ಕೆ ಆಗಮಿಸಿದ ಬಹುತೇಕ ಜನರು ಸ್ವಯಂ ಪ್ರೇರಿತವಾಗಿ ಆಗಮಿಸಿ ರಕ್ತದಾನ ಮಾಡುವುದು ಸಾಮಾನ್ಯವಾಗಿತ್ತು. ಸಮಿತಿ ನೂರಾರು ಪದಾಧಿಕಾರಿಗಳು, ಭಕ್ತರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್