ಪೌಷ್ಟಿಕ ಆಹಾರದಿಂದ ಆರೋಗ್ಯ
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ ಅಭಿಮತ
Team Udayavani, Jul 3, 2019, 4:19 PM IST
ಬಳ್ಳಾರಿ: ಅಂದ್ರಾಳ್ ಪ್ರದೇಶದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ ಮಾತನಾಡಿದರು.
ಬಳ್ಳಾರಿ: ಪೌಷ್ಟಿಕ ಆಹಾರವನ್ನು ಸರಿಯಾದ ಸಮಯದಲ್ಲಿ ತಾಯಿ ಮತ್ತು ಮಗು ಸೇವಿಸಬೇಕು ಇದರಿಂದ ಆರೋಗ್ಯ ವೃದ್ಧಿಗೆ ಸಹಕಾರಿ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ ಹೇಳಿದರು.
ನಗರದ ಅಂದ್ರಾಳ್ ಪ್ರದೇಶದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮರಿಸ್ವಾಮಿ ಮಠ ನಗರ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪೌಷ್ಟಿಕ ಆಹಾರದ ಕೊರತೆ, ದೀರ್ಘಕಾಲದ ಅನಾರೋಗ್ಯ ಮಗುವಿನ ಅಪೌಷ್ಟಿಕತೆಗೆ ಕಾರಣವಾಗುತ್ತದೆ. ಅಪೌಷ್ಟಿಕತೆಯು ಅತಿಸಾರ ಭೇದಿ, ನ್ಯೂಮೋನಿಯಾದಂಥ ಅಸ್ವಸ್ಥತೆಗೆ ಕಾರಣವಾಗುವುದಲ್ಲದೇ ಗರ್ಭಿಣಿಗೆ ನಿಯಮಿತ ಪ್ರಸವ ಪೂರ್ವ ಆರೈಕೆ ಅತ್ಯವಶ್ಯಕ. ಮಗುವಿನ ಜನನದ ನಂತರ 6 ತಿಂಗಳವರೆಗೆ ಕೇವಲ ತಾಯಿ ಎದೆಹಾಲನ್ನು ಮಾತ್ರ ನೀಡಬೇಕು ಎಂದರು.
ಆರೋಗ್ಯವಂತ ಮಗು 6 ತಿಂಗಳ ನಂತರ ತಾಯಿ ಹಾಲಿನ ಜೊತೆ ಪೂರಕ ಆಹಾರವನ್ನು ನೀಡಬೇಕು. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ವಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿರುವ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದಲ್ಲಿ ಮಗುವಿನ ಆರೋಗ್ಯದ ಆಧಾರದ ಮೇಲೆ 14 ದಿನಗಳವರೆಗ ಮಗುವಿಗೆ ಚಿಕಿತ್ಸೆ ಮತ್ತು ಉಪಚಾರವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಈ ವೇಳೆ ತಾಯಿಗೆ ದೈನಂದಿನ ದುಡಿಮೆಯ ಸಹಾಯಧನವನ್ನು ಸಹ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತವ್ವ ಉಪ್ಪಾರ ಮಾತನಾಡಿ, ಮಗುವಿಗೆ ಬಾಲ್ಯದಲ್ಲಿ ಕಾಣುವ ರೋಗಗಳ ನಿಯಂತ್ರಣಕ್ಕಾಗಿ 10 ಮಾರಕ ರೋಗಗಳ ವಿರುದ್ಧ ಹಾಕುವ ಲಸಿಕೆಗಳನ್ನು ಕಾಲಕಾಲಕ್ಕೆ ಸಂಪೂರ್ಣ ಲಸಿಕೆ ಹಾಕಿಸಿ ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪಾಲಕರು ಸಹಕರಿಸಬೇಕು ಎಂದರು.
ಇದೆ ವೇಳೆ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಯಂದಿರಿಗೆ, ಶಾಲಾ ಮಕ್ಕಳಿಗೆ ಭಿತ್ತಿ ಚಿತ್ರಗಳು ಹಾಗೂ ವೀಡಿಯೋ ಪ್ರದರ್ಶನದ ಮೂಲಕ ಆರೋಗ್ಯ ಜಾಗೃತಿ ಮೂಡಿಸಲಾಯಿತು ಮತ್ತು ಆರೋಗ್ಯದ ಸಮಸ್ಯೆಗಳಿಗೆ ಉತ್ತರಿಸಲಾಯಿತು.
ಈ ಸಂದರ್ಭದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ಗೀತಾ, ಪುಷ್ಪಲತಾ, ಪ್ರೊಜೆಕ್ಟ್ ನಿಷ್ಟ್ ನರಸಿಂಹಮೂರ್ತಿ, ಸಿಬ್ಬಂದಿ ಗೌಸ್ಬಾಷಾ, ಚಿದಾನಂದ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್