ಹೂಳಿನ ಜಾತ್ರೆಗೆ ದೇಣಿಗೆ ಸಂಗ್ರಹ ಕ್ಷೀಣ: ಪುರುಷೋತ್ತಮಗೌಡ

ಈ ಬಾರಿಗೆ 5,47,100 ರೂ. ದೇಣಿಗೆ ಸಂಗ್ರಹ ರೈತ ಸಂಘದಿಂದ 30 ಸಾವಿರ ರೂ. ಅಧಿಕ ವ್ಯಯ

Team Udayavani, Jun 10, 2019, 4:47 PM IST

10-Juen-34

ಬಳ್ಳಾರಿ: ಸುದ್ದಿಗೋಷ್ಠಿಯಲ್ಲಿ ತುಂಗಭದ್ರಾ ರೈತ ಸಂಘದ ಜಿಲ್ಲಾಧ್ಯಕ್ಷ ದರೂರು ಪುರುಷೋತ್ತಮಗೌಡ ಮಾತನಾಡಿದರು.

ಬಳ್ಳಾರಿ: ತುಂಗಭದ್ರಾ ರೈತ ಸಂಘದಿಂದ ಸತತ ಮೂರನೇ ಬಾರಿಗೆ ತುಂಗಭದ್ರಾ ಜಲಾಶಯದಲ್ಲಿ ಕೈಗೊಳ್ಳಲಾಗಿದ್ದ ತುಂಗಭದ್ರಾ ಹೂಳಿನ ಜಾತ್ರೆಗೆ ದಾನಿಗಳಿಂದ ಸಂಗ್ರಹವಾಗಿದ್ದ ದೇಣಿಗೆಗಿಂತಲೂ 30 ಸಾವಿರಕ್ಕೂ ಹೆಚ್ಚು ಸಂಘದಿಂದಲೇ ಖರ್ಚು ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ಹೂಳನ್ನು ತೆರವುಗೊಳಿಸಲು ಎಚ್ಚೆತ್ತುಕೊಳ್ಳಬೇಕಿದ್ದ ರಾಜ್ಯ ಸರ್ಕಾರ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ತುಂಗಭದ್ರಾ ರೈತ ಸಂಘ ಸತತ ಮೂರನೇ ಬಾರಿಗೆ ತುಂಗಭದ್ರಾ ಹೂಳಿನ ಜಾತ್ರೆ ಹೆಸರಲ್ಲಿ ಹೂಳೆತ್ತುವ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ 2017ರಲ್ಲಿ ಸತತ 30 ದಿನಗಳ ಕಾಲ 80 ಟ್ರ್ಯಾಕ್ಟರ್‌, 20 ಲಾರಿಗಳು, 6 ಜೆಸಿಬಿ ಯಂತ್ರಗಳಿಂದ ಹೂಳೆತ್ತಲಾಗಿತ್ತು. ಆಗ 30 ಲಕ್ಷ ರೂ. ಖರ್ಚು ಮಾಡಲಾಗಿತ್ತು. 2018ರಲ್ಲಿ ಒಂದು ದಿನದ ಮಟ್ಟಿಗೆ 75 ಟ್ರ್ಯಾಕ್ಟರ್‌, 5 ಜೆಸಿಬಿ ಯಂತ್ರಗಳನ್ನು ಬಳಕೆ ಮಾಡಿ ಒಂದು ಲಕ್ಷ ರೂ. ಖರ್ಚು ಮಾಡಲಾಗಿತ್ತು. 2019ರಲ್ಲಿ ಮೂರನೇ ಬಾರಿಗೆ ಮೇ 29 ರಿಂದ ಜೂ.2ರ ವರೆಗೆ ಐದು ದಿನಗಳ ಕಾಲ 25 ಟ್ರ್ಯಾಕ್ಟರ್‌ಗಳಿಂದ ಹೂಳನ್ನು ತೆರವುಗೊಳಿಸಲಾಗಿದ್ದು, ಇದಕ್ಕಾಗಿ ದಾನಿಗಳಿಂದ 5,47,100 ರೂ.ಗಳು ಸಂಗ್ರಹವಾದರೆ, 5,77,428 ರೂ. ಖರ್ಚು ಮಾಡಲಾಗಿದೆ. 30 ಸಾವಿರಕ್ಕೂ ಹೆಚ್ಚು ಹಣ ಸಂಘದಿಂದ ಹೆಚ್ಚುವರಿಯಾಗಿ ಖರ್ಚು ಮಾಡಲಾಗಿದೆ. ಈ ಕುರಿತ ಲೆಕ್ಕಪತ್ರಗಳನ್ನು ದೇಣಿಗೆ ನೀಡಿದ ದಾನಿಗಳ ಮನೆಗೂ ತಲುಪಿಸಲಾಗುವುದು ಎಂದು ತಿಳಿಸಿದರು.

ಕೇವಲ ಪುಸ್ತಕ ಓದಿ ಇಂಜಿನಿಯರ್‌ಗಳಾಗಿರುವ ಇವರಿಗೆ ಸಾಮಾನ್ಯ ರೈತನಿಗೆ ಇರುವ ಅನುಭವವಿಲ್ಲ. ಇಂಥಹ ಇಂಜಿನಿಯರ್‌ಗಳು ಸರ್ವೆ ನಡೆಸಿ ಜಲಾಶಯಲ್ಲಿ ಹೂಳು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ಪ್ರಯತ್ನಿಸಿದರೆ ಹೂಳನ್ನು ಹಾಕಲು 66 ಸಾವಿರ ಎಕರೆ ಜಮೀನು ಬೇಕು ಎಂದು ತಪ್ಪು ಮಾಹಿತಿ ನೀಡಿ ಜಲಾಶಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು.

ಎಲ್ಎಲ್ಸಿ ಕಾಲುವೆ ಬಗ್ಗೆ ಗೊಂದಲ ಬೇಡ: ತುಂಗಭದ್ರಾ ಬಲದಂಡೆ ಎಲ್ಎಲ್ಸಿ ಕಾಲುವೆ ಆಧುನೀಕರಣ ವಿಷಯದಲ್ಲಿ ರೈತರಲ್ಲಿ ಯಾವುದೇ ಗೊಂದಲ ಬೇಡ. ಕಾಲುವೆಯನ್ನು ಆಧುನೀಕರಣ ನೆಪದಲ್ಲಿ ಯಾವುದೇ ಕಾರಣಕ್ಕೂ ಅಗಲೀಕರಣ ಮಾಡಲಾಗುವುದಿಲ್ಲ. ಈ ಕುರಿತು ಸಂಬಂಧಪಟ್ಟ ಇಂಜಿನಿಯರ್‌ಗಳನ್ನು ಸಂಪರ್ಕಿಸಿ ಅಧಿಕೃತವಾಗಿ ಮಾಹಿತಿ ಪಡೆಯಲಾಗಿದೆ. ಕಾಲುವೆ ಈಗಿರುವ ಅಗಲವನ್ನು ಒಂದು, ಒಂದುವರೆ ಅಡಿಗಳಷ್ಟು ಕಡಿಮೆ ಮಾಡಲಾಗುತ್ತಿದೆ. ಆದ್ದರಿಂದ ರೈತರು ಯಾವುದೇ ಕಾರಣಕ್ಕೆ ಗೊಂದಲಕ್ಕೀಡಾಗದೇ ಅನುಮಾನವಿದ್ದಲ್ಲಿ ದೂರವಾಣಿಗೆ ಸಂಪರ್ಕಿಸಿದರೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ರೈತರ ಅನುಮಾನವನ್ನು ದೂರ ಮಾಡಲಾಗುವುದು. ಜಿಂದಾಲ್ಗೆ ಜಮೀನು ಪರಭಾರೆಯಿಂದಾಗಿ ರೈತರಿಗೆ ಯವುದೇ ಲಾಭವಿಲ್ಲ. ಜಮೀನಿಗೆ ಸಂಬಂಧಿಸಿದಂತೆ ದಶಕದ ಹಿಂದೆಯೇ ಈ ಎಲ್ಲ ಮಾತುಗಳು ನಡೆದಿವೆ. ಜಿಂದಾಲ್ ಮತ್ತು ಸರ್ಕಾರದ ನಡುವಿನ ಒಳಒಪ್ಪಂದಕ್ಕೆ ಮೈತ್ರಿ ಸರ್ಕಾರದ ಮಾಜಿ ಸಚಿವರೇ ಆರೋಪಿಸುತ್ತಾರೆ ಹೊರತು ಇದರಿಂದ ಸಾಮಾನ್ಯ ಜನರಿಗೆ ಯಾವುದೇ ಲಾಭಗಳಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ವೀರನಗೌಡ, ಕುರುಬರಮೂರ್ತಿ, ಜಾಲಿಹಾಳ್‌ ಶ್ರೀಧರಗೌಡ, ಗಂಗಾವತಿ ವೀರೇಶ್‌, ದರೂರು ರಂಜಾನ್‌ಸಾಬ್‌, ಶಾನವಾಸಪುರ ಶರಣನಗೌಡ ಇತರರಿದ್ದರು.

ಜಲಾಶಯದಲ್ಲಿನ ಹೂಳು ತೆರವುಗೊಳಿಸುವ ಹೂಳಿನ ಜಾತ್ರೆಯನ್ನು ಮುಂದಿನ ವರ್ಷದಿಂದ ಸಾಂಕೇತಿಕವಾಗಿ ಮಾಡಲ್ಲ. ದೀರ್ಘಾವಧಿ ಯೋಜನೆಯನ್ನಾಗಿ ಮಾಡಿಕೊಂಡು ಜನವರಿ ತಿಂಗಳಲ್ಲೇ ಹೂಳೆತ್ತುವ ಕೆಲಸಕ್ಕೆ ಚಾಲನೆ ನೀಡಲಾಗುವುದು. ಜಲಾಶಯದ ಇಂಜಿನಿಯರ್‌ಗಳು, ಅಧಿಕಾರಿಗಳು ಜಲಾಶಯದಲ್ಲಿನ ಹೂಳೆತ್ತುವುದು ಅಸಾಧ್ಯ ಎಂದು ರೈತರನ್ನು, ಜನಪ್ರತಿನಿಧಿಗಳನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು.
ದರೂರು ಪುರುಷೋತ್ತಮಗೌಡ,
ತುಂಗಭದ್ರಾ ರೈತ ಸಂಘದ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.