ಜಿಂದಾಲ್ ನಿಂದ ಕಿಕ್‌ಬ್ಯಾಕ್‌ ಪಡೆದು ರೈತರ ಕೈ ಬಿಡದಿರಿ

ಜನಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟಕ್ಕಿಳಿಯಲಿ •ಜಿಂದಾಲ್ಗೆ ಈಗಾಗಲೇ ಜಮೀನು ನೀಡಿದವರಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ

Team Udayavani, Jun 19, 2019, 11:17 AM IST

19-June-12

ಬಳ್ಳಾರಿ: ರೈತ ಮುಖಂಡ ಕುಡಿತಿನಿ ಶ್ರೀನಿವಾಸ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ವಿಷಯದಲ್ಲಿ ಪರ-ವಿರೋಧ ಮಾತನಾಡುತ್ತಿರುವ ಹಾಲಿ, ಮಾಜಿ ಶಾಸಕರು ಜಿಂದಾಲ್ನಿಂದ ಕಿಕ್‌ಬ್ಯಾಕ್‌ ಪಡೆದು ರೈತರನ್ನು ಮಧ್ಯದಲ್ಲೇ ಬಿಡದೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸಬೇಕು. ಪರಭಾರೆ ಮಾಡುತ್ತಿರುವ ಜಮೀನಿನ ಮೂಲ ರೈತರಿಗೆ ಎಕರೆಗೆ 30-35 ಲಕ್ಷ ರೂ. ಪರಿಹಾರ ಕೊಡಿಸಬೇಕು ಎಂದು ಕಾಂಗ್ರೆಸ್‌ ಮತ್ತು ರೈತ ಮುಖಂಡ ಕುಡಿತಿನಿ ಶ್ರೀನಿವಾಸ್‌ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡುವ ವಿಷಯಕ್ಕೆ ಸಂಬಂಧಿಸಿ ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಪರವಾಗಿ ಮಾತನಾಡಿದ್ದಾರೆ. ವಿಜಯನಗರ ಶಾಸಕ ಆನಂದ್‌ಸಿಂಗ್‌, ಮಾಜಿ ಶಾಸಕ ಅನಿಲ್ ಲಾಡ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷಗಳ ಕಾಲ ರೈತರ ಬಗ್ಗೆ ಕಾಳಜಿ ವಹಿಸದ ಹಾಲಿ-ಮಾಜಿ ಶಾಸಕರು ಈಗ ರೈತರ ಬಗ್ಗೆ ಹೋರಾಟ ಮಾಡುವುದಾಗಿ ಮುಂದೆ ಬರುತ್ತಿರುವುದು ಅನುಮಾನ ಮೂಡಿಸಿದೆ ಎಂದರು.

ಇವರು ರೈತರ ಪರವಾಗಿ ಹೋರಾಟ ಮಾಡಲು ಪ್ರಾಮಾಣಿಕವಾಗಿ ಮುಂದೆ ಬಂದಿದ್ದೇ ಆದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಣೆ-ಪ್ರಮಾಣ ಮಾಡಿ ಹೋರಾಟಕ್ಕಿಳಿಯಲಿ. ನಾವು ಸಹ ಬೆಂಬಲಿಸುತ್ತೇವೆ. ಆದರೆ, ಹಾಲಿ-ಮಾಜಿ ಶಾಸಕರು ಪರ-ವಿರೋಧ ಹೇಳಿಕೆ ನೀಡಿ ಜಿಂದಾಲ್ ಸಂಸ್ಥೆಯಿಂದ ಕಿಕ್‌ ಬ್ಯಾಕ್‌ ಪಡೆದು ರೈತರನ್ನು ಅರ್ಧಕ್ಕೆ ನಡು ನೀರಲ್ಲಿ ಬಿಟ್ಟು ಹೋಗಬಾರದು. ರೈತರಿಗೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಜಿಂದಾಲ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಪೈಕಿ 870 ಎಕರೆ ಜಮೀನಿನ ಮಾಲೀಕರಿಗೆ ಇಂದಿಗೂ ಸಮರ್ಪಕ ಪರಿಹಾರ ಲಭಿಸಿಲ್ಲ. ಪರಿಹಾರ ವಿತರಿಸುವಲ್ಲೂ ತಾರತಮ್ಯವೆಸಗಲಾಗುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳು ಸಹ ಸಂಸ್ಥೆಯ ಬೆಂಬಲಕ್ಕೆ ನಿಂತ ಕಾರಣ ಈ ತಾರತಮ್ಯ ಮುಂದುವರಿಯುತ್ತಿದೆ. ಜಿಂದಾಲ್ ಸಂಸ್ಥೆ ಸಂಡೂರು ತಾಲೂಕು ಚಿಕಂತಾಪುರ ಗ್ರಾಮದ ಬಳಿ ಸ್ವಾಧೀನ ಪಡಿಸಿಕೊಂಡಿರುವ ಜಮೀನಿಗೆ ಎಕರೆಗೆ 23 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದಕ್ಕೆ ಸಂಡೂರು ಶಾಸಕ, ಸಚಿವ ಈ.ತುಕಾರಾಂ ಅವರ ಬೆಂಬಲವಿದೆ. ಅದೇ ರೀತಿ ರಾಷ್ಟ್ರೀಯ ಹೆದ್ದಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಪರಿಹಾರ ನೀಡುವಲ್ಲೂ ತಾರತಮ್ಯ ಮಾಡಲಾಗಿದೆ. ಎನ್‌ಎ ಆಗಿರುವ ಎಕರೆ ಜಮೀನಿಗೆ 1.10 ಕೋಟಿ ರೂ. ಪರಿಹಾರ ನೀಡಿದರೆ, ಕೇವಲ 80 ಸೆಂಟ್ಸ್‌ ಜಮೀನಿಗೆ 2.24 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ. ಸ್ಥಳೀಯ ಶಾಸಕರು, ಸಚಿವರ ಅಭಯವುಳ್ಳ ಫಲಾನುಭವಿಗಳಿಗೆ ದುಪ್ಪಟ್ಟು ಪರಿಹಾರ ನೀಡುವ ಜಿಂದಾಲ್ ಸಂಸ್ಥೆ ಏನೂ ಇಲ್ಲದ ಫಲಾನುಭವಿಗಳಿಗೆ ಅತ್ಯಂತ ಕಡಿಮೆ ಪರಿಹಾರ ನೀಡಿದೆ ಎಂದು ಆರೋಪಿಸಿದರು.

ಮಿತ್ತಲ್, ಬ್ರಹ್ಮಿಣಿ, ಎನ್‌ಎಂಡಿಸಿಯಲ್ಲೂ ತಾರತಮ್ಯ: ತಾಲೂಕಿನ ಕುಡಿತಿನಿ, ವೇಣಿವೀರಾಪುರ, ಹರಗಿನಡೋಣಿ, ಜಾನೆಕುಂಟೆ ಗ್ರಾಮಗಳ ನಡುವೆ 10 ಸಾವಿರಕ್ಕೂ ಹೆಚ್ಚು ಜಮೀನನ್ನು ಆರ್ಸೆಲ್ಲಾರ್‌ ಮಿತ್ತಲ್, ಬ್ರಾಹ್ಮಿಣಿ, ಎನ್‌ಎಂಡಿಸಿ ಸಂಸ್ಥೆಗಳು ಕೆಐಎಡಿಬಿ ಮೂಲಕ ಖರೀದಿಸಿದೆ. 2010 ಆಗಸ್ಟ್‌ 10 ರಂದು ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ ಸರ್ಕಾರ ಎಕರೆಗೆ 8,12 ಲಕ್ಷ ರೂ. ಬೆಲೆ ನಿಗದಿಪಡಿಸಿ ಮಿತ್ತಲ್ ಕಂಪನಿಗೆ 4865 ಎಕರೆ ಜಮೀನು ನೀಡಿದೆ. ಅದೇ ರೀತಿ 2010 ಮೇ 22 ರಂದು ಅಧಿಸೂಚನೆ ಹೊರಡಿಸಿದ್ದ ಸರ್ಕಾರ ಕೇವಲ 5,6 ಲಕ್ಷ ರೂ. ಬೆಲೆ ನಿಗದಿಪಡಿಸಿ ಬ್ರಹ್ಮಿಣಿ ಕಂಪನಿಗೆ 4761 ಎಕರೆ ಜಮೀನು ನೀಡಲಾಗಿದೆ. ಇನ್ನು 2011ರಲ್ಲಿ ಮತ್ತೂಂದು ಅಧಿಸೂಚನೆ ಹೊರಡಿಸಿದ್ದು, 2880 ಎಕರೆ ಜಮೀನನ್ನು ಎಕರೆಗೆ 23 ಲಕ್ಷ ರೂ. ಬೆಲೆ ನಿಗದಿಪಡಿಸಿ ಎನ್‌ಎಂಡಿಸಿಗೆ ಕೊಡಿಸಲಾಗಿದೆ. ವಿಧಾನಪರಿಷ್‌ ಸದಸ್ಯ ಕೆ.ಸಿ. ಕೊಂಡಯ್ಯನವರೇ ಈ ಬೆಲೆ ನಿಗದಿಪಡಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ವೆಂಕಟೇಶ್‌, ಕೃಷ್ಣಪ್ಪ, ಸುನೀಲ್ಕುಮಾರ್‌ ಸೇರಿದಂತೆ ಕುಡಿತಿನಿ, ವೇಣಿವೀರಾಪುರ, ಹರಗಿನಡೋಣಿ, ಜಾನೆಕುಂಟೆ ಸೇರಿದಂತೆ ವಿವಿಧ ಗ್ರಾಮಗಳ ರೈತರು ಇದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.