ಕಾಲುವೆ ಗುತ್ತಿಗೆದಾರರಿಂದ ರೈತರಿಗೆ ಬೆದರಿಕೆ ಕರೆ: ಕಾರ್ತಿಕ
ಸಂಬಂಧಪಟ್ಟ ಅಧಿಕಾರಿಗೆ ದೂರು
Team Udayavani, Jun 14, 2019, 2:58 PM IST
ಬಳ್ಳಾರಿ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಜೆ.ಕಾರ್ತಿಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಬಳ್ಳಾರಿ: ಎಲ್ಎಲ್ಸಿ ಲೈನಿಂಗ್ ಕಾಮಗಾರಿ ವಿರೋಧಿಸಿ ಪ್ರತಿಭಟಿಸಿದ ರೈತ ಮುಖಂಡರಿಗೆ ಗುತ್ತಿಗೆದಾರರೊಬ್ಬರು ದೂರವಾಣಿ ಕರೆ ಮಾಡಿ ಬೆದರಿಕೆಯೊಡ್ಡುತ್ತಿದ್ದಾರೆ. ಒಂದು ವೇಳೆ ರೈತರಿಗೆ ಏನೇ ಆದರೂ, ಅದಕ್ಕೆ ರಾಜ್ಯ ಸರ್ಕಾರ, ಅಧಿಕಾರಿಗಳು ಮತ್ತು ಗುತ್ತಿಗೆದಾರರೇ ನೇರ ಹೊಣೆಗಾರರಾಗುತ್ತಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಜೆ.ಕಾರ್ತಿಕ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜೂನ್ 10 ರಂದು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮತ್ತು ಎಲ್ಎಲ್ಸಿ ಕಾಲುವೆ ಲೈನಿಂಗ್ (ಆಧುನೀಕರಣ) ವಿರೋಧಿಸಿ ಹೊಸಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಲಾಯಿತು. ಆಗ ಸ್ಥಳಕ್ಕೆ ಆಗಮಿಸಿದ್ದ ಸಂಬಂಧಪಟ್ಟ ಮೇಲಧಿಕಾರಿಗಳು ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ ಎಂದರು.
ಇನ್ನು ಸ್ಥಳಕ್ಕೆ ಆಗಮಿಸಿದ್ದ ಕರ್ನಾಟಕ-ಆಂಧ್ರದ ಅಧಿಕಾರಿಗಳನ್ನು ಎಲ್ಎಲ್ಸಿ ಕಾಲುವೆ ಆಧುನೀಕರಣಕ್ಕೆ ಸಂಬಂಧಿಸಿದಂತೆ ಕಾಲುಗೆ ಡಿಸೈನ್ ಬದಲಾವಣೆ ಸೇರಿ ಕೆಲ ವಿಷಯ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕಾಲುವೆ ಕಾಮಗಾರಿ ಸ್ಥಗಿತಗೊಳಿಸಿ, ಐದು ದಿನಗಳೊಳಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಯ ನಡೆಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಆದರೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆಯುವ ಮುನ್ನವೇ ಎಲ್ಎಲ್ಸಿ ಕಾಮಗಾರಿಯನ್ನು ಪುನಃ ಆರಂಭಿಸಲಾಗಿದೆ. ಅಲ್ಲದೇ, ಪೊಲೀಸರೊಬ್ಬರು ಬುಧವಾರ ಕರೆ ಮಾಡಿ, ನೀವು ಮಾಡುತ್ತಿರುವುದು ಸರಿಯಲ್ಲ. ನಮಗೆ ಮೇಲಿಂದ ಒತ್ತಡವಿದೆ ಎಂದು ತಿಳಿಸಿದ್ದಾರೆ. ಜತೆಗೆ ಸಂಘದ ಸಿರುಗುಪ್ಪ ತಾಲೂಕು ಅಧ್ಯಕ್ಷ ದೇವರೆಡ್ಡಿ ಎನ್ನುವವರಿಗೆ ಭೂಪಾಲರೆಡ್ಡಿ ಎನ್ನುವ ಗುತ್ತಿಗೆದಾರರೊಬ್ಬರು 9482110777 ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ, ನಿಮ್ಮದು ಜಾಸ್ತಿಯಾಗಿದೆ ಎಂದು ಬೆದರಿಕೆಯೊಡ್ಡಿದ್ದಾರೆ. ಹಣ ಬಲ, ತೋಳ್ಬಲದಿಂದ ಸದೃಢರಾಗಿರುವ ಈ ಗುತ್ತಿಗೆದಾರರಿಂದ ರೈತರಿಗೆ ಯಾವುದೇ ತೊಂದರೆಯಾದರಲ್ಲಿ ಅದಕ್ಕೆ ರಾಜ್ಯ ಸರ್ಕಾರ, ಅಧಿಕಾರಿಗಳು ಮತ್ತು ಗುತ್ತಿಗೆದಾರರೇ ನೇರ ಹೊಣೆ ಹೊರಲಿದ್ದಾರೆ ಎಂದು ಎಚ್ಚರಿಸಿದರು.
ರೈತರು ಎಂದೂ ಹಿಂಸೆ ಮಾಡಿದವರಲ್ಲ. ಗಾಂಧಿ ತತ್ವ ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ಮಾಡಿಕೊಂಡೇ ಬಂದಿದ್ದೇವೆ. ಆದರೆ, ರೈತರಿಗೆ ಗುತ್ತಿಗೆದಾರರು ಬೆದರಿಕೆಯೊಡ್ಡುತ್ತಿರುವುದು ರೈತರಲ್ಲಿ ಭಯ, ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಕೂಡಲೇ ಜಿಲ್ಲಾಧಿಕಾರಿಗಳೊಂದಿಗೆ ಕುರಿತು ಚರ್ಚಿಸಿ, ಎಸ್ಪಿ ಬಳಿಗೆ ತೆರಳಿ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.
ಸಂಘದ ಮುಖಂಡರಾದ ಕಾರ್ತಿಕ್ ಬೃಂಗಿಮಠ, ದೇವರೆಡ್ಡಿ, ಪಿ.ನಾರಾಯಣರೆಡ್ಡಿ, ಖಾಸೀಂಸಾಬ್, ವೀರಭದ್ರರೆಡ್ಡಿ, ಬಿ.ವಿ.ಗೌಡ, ವಾಸುರಾಜ್, ಜಡೆಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’