ಮನೆ ಬಾಗಿಲಿಗೆ ಬಂತು ರಾಹುಲ್ ಗಾಂಧಿ ಪತ್ರ!

ಪತ್ರದಲ್ಲಿದೆ ನ್ಯಾಯ್‌ ಯೋಜನೆ ಮಾಹಿತಿ

Team Udayavani, Apr 22, 2019, 1:29 PM IST

22-April-18

ಹರಪನಹಳ್ಳಿ: ನ್ಯಾಯ್‌ ಯೋಜನೆ ಕುರಿತು ರಾಹುಲ್ಗಾಂಧಿ ಅವರಿಂದ ಬಂದಿರುವ ಪತ್ರ.

ಹರಪನಹಳ್ಳಿ: ಬಡತನ ರೇಖೆಗಿಂತ ಕೆಳಗಿರುವ ಪ್ರತಿ ಕುಟುಂಬಕ್ಕೆ ಮಾಸಿಕ 6,000 ಧನಸಹಾಯ ನೀಡುವ ನ್ಯಾಯ್‌ ಯೋಜನೆ ಆರಂಭಿಸುವುದಾಗಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಕಾಂಗ್ರೆಸ್‌ ಪಕ್ಷ ತಾಲೂಕಿನ ಹಲವಾರು ಪ್ರತಿ ಕುಟುಂಬಗಳಿಗೆ ವೈಯಕ್ತಿಕವಾಗಿ ಪತ್ರ ಬರೆದು ಯೋಜನೆ ಬಗ್ಗೆ ಮಾಹಿತಿ ನೀಡಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ಗಾಂಧಿ ಅವರ ಸಹಿ ಇರುವ ಈ ಪತ್ರವು ಕನಿಷ್ಠ ಆದಾಯ ಖಾತರಿಯ ಈ ಯೋಜನೆಯ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ.

ಪತ್ರದಲ್ಲಿ ಇರುವುದು: ಬಡವರು, ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮಧ್ಯಮ ವರ್ಗದವರು ಹಾಗೂ ವ್ಯಾಪಾರಸ್ಥರು ಈ ದೇಶ ಕಟ್ಟುತ್ತಾರೆ. ಆದರೆ ಕಳೆದ ಐದು ವರ್ಷಗಳಿಂದ ಈ ಎಲ್ಲ ವರ್ಗದ ದನಿಗಳನ್ನು ಅದುಮಿ ಕೇವಲ 15-20 ಉದ್ಯೋಗಪತಿಗಳಿಗಾಗಿ ಮಾತ್ರ ಮೋದಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಈ ಸರ್ಕಾರದ ನೀತಿಗಳಲ್ಲಿ ರೈತನ ಪರಿಶ್ರಮಕ್ಕೆ ಬೆಲೆ, ಯುವಕರಿಗೆ ನೌಕರಿ, ಬಡವರಿಗೆ ಆದಾಯ, ಕಾರ್ಮಿಕರ ದಿನಗೂಲಿ ಮತ್ತು ಸಣ್ಣ ವ್ಯಾಪಾರಿಗಳ ಜೀವನೋಪಾಯದ ಬಗ್ಗೆ ಯಾವುದೇ ಮಾತು ಇಲ್ಲ. ವಿಪರೀತ್ಯವೆಂಬಂತೆ ಅನಾಣ್ಯೀಕರಣ ಮತ್ತು ಗಬ್ಬರ್‌ಸಿಂಗ್‌ ತೆರಿಗೆಗಳಿಂದ ಭಾರತೀಯರ ಹೊಟ್ಟೆ ಮೇಲೆ ಹೊಡೆದಿದ್ದಾರೆ. ದೇಶದ ವ್ಯಾಪಾರ, ಜೀನೋಪಾಯ ಮತ್ತು ಉದ್ಯೋಗ ಹಾಳು ಮಾಡಲಾಗಿದೆ, ಅದ್ದರಿಂದ ಈಗ ನ್ಯಾಯ ಸಿಗುತ್ತದೆ.

ಕಾಂಗ್ರೆಸ್‌ ಪಕ್ಷವು ಭಾರತವನ್ನು ಎರಡು ಮಾಡಲು ಬಿಡುವುದಿಲ್ಲ. ಈ ದೇಶದ ಮೇಲೆ ಬಡವರಿಗೆ, ರೈತರಿಗೆ, ಕಾರ್ಮಿಕರಿಗೆ ಮತ್ತು ವ್ಯಾಪಾರಸ್ಥರಿಗೆ ಸಮಾನವಾದ ಹಕ್ಕಿದೆ. ಮೋದಿಜಿಯವರು ಜನತೆಯಿಂದ ಕಿತ್ತುಕೊಳ್ಳುವುದರಲ್ಲಿ ನಂಬಿಕೆ ಇಡುತ್ತಾರೆ. ಆದರೆ ನಮ್ಮ ವಿಶ್ವಾಸ ಜನತೆಗೆ ನ್ಯಾಯ ಒದಗಿಸುವುದಾಗಿದೆ.

ನಾವು ಜನರನ್ನು ಸರ್ಕಾರದ ಬೊಕ್ಕಸದ ಭಾಗೀದಾರರನ್ನಾಗಿ ಮಾಡುತ್ತೇವೆ. ಕಳೆದ 5 ವರ್ಷಗಳಲ್ಲಿ ಜನರ ಮೇಲಾಗಿರುವ ದೌರ್ಜನ್ಯ. ಅನ್ಯಾಯ ಹೋಗಲಾಡಿಸಿ ಅವರ ಸಮ್ಮಾನವನ್ನು ಹಿಂತಿಗಿಸುವುದಾಗಿದೆ. ಈಗ ನ್ಯಾಯ ಸಿಗುತ್ತದೆ.

ಕಾಂಗ್ರೆಸ್‌ ಪಕ್ಷವು ನ್ಯಾಯ ಯೋಜನೆಯನ್ನು ತಂದಿದೆ. ನ್ಯಾಯ ಅಂದರೆ ಕನಿಷ್ಠ ತೆರಿಗೆ ಯೋಜನೆ. ನ್ಯಾಯ ಯೋಜನೆಯಡಿ ದೇಶದ ಅತಿ ಬಡ ಕುಟುಂಬದ ಮಹಿಳೆಯರ ಖಾತೆಯಲ್ಲಿ ಪ್ರತಿ ವರ್ಷವೂ 72,000 ರೂ.ಗಳನ್ನು ಜಮೆ ಮಾಡಿಸುತ್ತದೆ. ಈ ಕೆಲಸವನ್ನು ಯಾವುದೇ ಹೊಸ ತೆರಿಗೆಯನ್ನು ಹಾಕದೇ ಮಾಡಲಾಗುವುದು. ಆದ್ದರಿಂದ ಈಗ ನ್ಯಾಯ ಸಿಗುತ್ತದೆ. ಅಣ್ಣ, ತಂಗಿಯರೇ ಮತ್ತು ಯುವ ಸ್ನೇಹಿತರೇ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ರಚಿಸಿ ದೆಶಕ್ಕೆ ನ್ಯಾಯವನ್ನು ಒದಗಿಸಿ, ಬನ್ನಿ ಎಲ್ಲರೂ ಸೇರಿ ಒಂದು ಉತ್ತಮ ಭಾರತ ಕಟ್ಟೋಣ, ಬಡತನ ತೊಲಗಿಸೋಣ. 72 ಸಾವಿರ ರೂ. ಪಡೆಯೋಣ ಎಂಬ ಒಕ್ಕಣಿಕೆ ಈ ಪತ್ರದಲ್ಲಿದೆ.

ಪ್ರತಿ ಮತಗಟ್ಟೆ ವ್ಯಾಪ್ತಿಯ ಬಡ ಕುಟುಂಬಗಳ ವಿಳಾಸ ಸಂಗ್ರಹಿಸಲಾಗಿತ್ತು. ಅಲ್ಲದೇ ಮೊಬೈಲ್ನಲ್ಲಿ ನೋಂದಣಿ ಮಾಡಿಸಲಾಗಿತ್ತು. ಮೊಬೈಲ್ಗೆ ಒಂದು ಸಂದೇಶ ಬಂದಿರುತ್ತದೆ. ಅದರಲ್ಲಿ ತಮ್ಮ ಮೊಬೈಲ್ ಸಂಖ್ಯೆ ಹಾಕಿದ್ದಲ್ಲಿ ರಾಹುಲ್ ಗಾಂಧಿ ಬರೆದಿರುವ ಪತ್ರ ಡೌನ್‌ಲೋಡ್‌ ಆಗುತ್ತದೆ.
• ಎಲ್.ಮಂಜ್ಯನಾಯ್ಕ,
ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.