ಗಣಿನಾಡಲ್ಲಿ ಗೆದ್ದು ಬೀಗಿದ ದೇವೇಂದ್ರಪ್ಪ

ದಾಖಲೆ ವೀರಗೆ ಸೋಲಿನ ಉಡುಗೊರೆ•ಸ್ಥಳೀಯ ಅಭ್ಯರ್ಥಿಯ ಬೆನ್ನಿಗೆ ನಿಂತ ಮತದಾರ

Team Udayavani, May 24, 2019, 11:30 AM IST

24-May-12

ಬಳ್ಳಾರಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮಾಚರಣೆ.

ಬಳ್ಳಾರಿ: ಗಣಿನಾಡು ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪ್ರತಿಸ್ಪರ್ಧಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ವಿರುದ್ಧ 54,304 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದು, ಉಪ ಚುನಾವಣೆಯಲ್ಲಿ ಗೆದ್ದಿದ್ದ ದಾಖಲೆ ವೀರ ಉಗ್ರಪ್ಪರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದೆ.

ಕಳೆದ ಉಪ ಚುನಾವಣೆಯಲ್ಲಿ ಆರಂಭದಿಂದಲೂ ಪ್ರತಿ ಸುತ್ತಿನ ಮತಗಳ ಎಣಿಕೆಯಲ್ಲೂ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಆರಂಭದಲ್ಲೇ ಹಿನ್ನಡೆ ಅನುಭವಿಸಿದರು. ಆರಂಭದ ಅಂಚೆ ಮತಗಳ ಎಣಿಕೆಯಲ್ಲಿ ಉಗ್ರಪ್ಪರಿಗೆ 3080, ಬಿಜೆಪಿಯ ವೈ.ದೇವೇಂದ್ರಪ್ಪರಿಗೆ 4579 ಮತಗಳು ಲಭಿಸಿದ್ದು, 1499 ಮತಗಳ ಮುನ್ನಡೆ ಸಾಧಿಸಿದ್ದರು. ನಂತರ ಆರಂಭವಾದ ವಿದ್ಯುನ್ಮಾನ ಮತಗಳ ಎಣಿಕೆಯಲ್ಲೂ ದೇವೇಂದ್ರಪ್ಪ ಅಲ್ಪ ಪ್ರಮಾಣದ ಮತಗಳ ಮುನ್ನಡೆಯ ನಾಗಾಲೋಟ ಮುಂದುವರಿಸಿದರು. ಮೊದಲ ಸುತ್ತಿನಲ್ಲಿ 34,770 ಮತಗಳನ್ನು ಪಡೆದ ದೇವೇಂದ್ರಪ್ಪ, 33,220 ಮತ ಗಳಿಸಿದ ಉಗ್ರಪ್ಪರಿಗಿಂತ 1,550 ಮತಗಳ ಮುನ್ನಡೆಯಾದರು. ಎರಡನೇ ಸುತ್ತಿನಿಂದ ಸತತ ಆರು ಸುತ್ತುಗಳವರೆಗೆ ಪ್ರತಿ ಸುತ್ತಿನಲ್ಲೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಮುನ್ನಡೆ ಕಾಯ್ದುಕೊಂಡಿದ್ದ ದೇವೇಂದ್ರಪ್ಪ, 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪ 746 ಮತಗಳ ಮುನ್ನಡೆ ಸಾಧಿಸಿದರು. ಇನ್ನು ಮುಂದೆ ಉಗ್ರಪ್ಪನವರೇ ಮುನ್ನಡೆ ಸಾಧಿಸಿ ಅಂತಿಮವಾಗಿ ಜಯ ಗಳಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ 8ನೇ ಸುತ್ತಿನಲ್ಲಿ ಬಿಜೆಪಿಯ ದೇವೇಂದ್ರಪ್ಪ ಪುನಃ ಮುನ್ನಡೆಯಾಗಿ ಶಾಕ್‌ ನೀಡಿದರು. 8ನೇ ಸುತ್ತಿನಲ್ಲಿ ಕಾಂಗ್ರೆಸ್‌ನ ಉಗ್ರಪ್ಪಗೆ 2,67,749 ಮತಗಳ ಲಭಿಸಿದ್ದು, ಬಿಜೆಪಿಯ ದೇವೇಂದ್ರಪ್ಪರಿಗೆ 2,71,651 ಮತಗಳು ಲಭಿಸಿ, 3902 ಮತಗಳ ಮುನ್ನಡೆ ಸಾಧಿಸಿದರು.

ಇನ್ನು 9ನೇ ಸುತ್ತಿನಿಂದ ದೇವೇಂದ್ರಪ್ಪ ಎಲ್ಲೂ ಹಿಂತಿರುಗಿ ನೋಡಿದ್ದೇ ಇಲ್ಲ. 9ನೇ ಸುತ್ತಿನಲ್ಲಿ 9937 ಇದ್ದ ಅಂತರ 10ನೇ ಸುತ್ತಿಗೆ 14,529ಕ್ಕೆ, 11ನೇ ಸುತ್ತಿಗೆ 21,099, 12ನೇ ಸುತ್ತಿಗೆ 28,899 ಮತಗಳಿಗೆ ಏರಿಕೆಯಾಯಿತು. ಬಿಜೆಪಿಯ ಅಂತರ ಹೆಚ್ಚುತ್ತಿದ್ದಂತೆ ಕಮಲ ಪಾಳೆಯದಲ್ಲಿ ಗೆಲುವಿನ ನಗೆ ಬೀರಿದರೆ, ಸೋಲನ್ನು ಖಚಿತಪಡಿಸಿಕೊಂಡ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಎಣಿಕೆ ಕೇಂದ್ರದಿಂದ ಹೊರನಡೆದರು. ಪ್ರತಿ ಸುತ್ತಿನಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಪಕ್ಷಕ್ಕೆ ಸರಾಸರಿ 4 ಸಾವಿರಕ್ಕೂ ಹೆಚ್ಚು ಮತಗಳು ಲಭಿಸುತ್ತಿದ್ದುದು ಬಿಜೆಪಿ ಅಂತರ ಕುಸಿಯದಿರಲು ಕಾರಣವಾಯಿತು. ಅಂತಿಮವಾಗಿ 19 ಸುತ್ತುಗಳ ಮುಕ್ತಾಯಕ್ಕೆ ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪರಿಗೆ 5,60,681 ಮತಗಳು, ಬಿಜೆಪಿಯ ದೇವೇಂದ್ರಪ್ಪಗೆ 6,16,388 ಮತಗಳು ಲಭಿಸಿ 55,707 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದರು. ಕೇವಲ 7 ತಿಂಗಳ ಮಟ್ಟಿಗೆ ಕಾಂಗ್ರೆಸ್‌ ವಶದಲ್ಲಿದ್ದ ಜಿಲ್ಲೆಯ ಲೋಕಸಭೆ ಕ್ಷೇತ್ರದ ಮೇಲೆ ಪುನಃ ಕಮಲ ಅರಳಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.