ಚುನಾವಣೆ ಬಳಿಕ ಮೈತ್ರಿ ಸರ್ಕಾರ ಪತನ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕೇವಲ ಮೂರು ಜಿಲ್ಲೆಗಳಿಗೆ ಮಾತ್ರ ಸೀಮಿತ
Team Udayavani, Apr 14, 2019, 12:39 PM IST
ಮರಿಯಮ್ಮನಹಳ್ಳಿ: ನಾಣಿಕೆರೆ ವೃತ್ತದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರ ಶ್ರೀರಾಮುಲು ಮತಯಾಚಿಸಿದರು.
ಮರಿಯಮ್ಮನಹಳ್ಳಿ: ಲೋಕಸಭಾ ಚುನಾವಣೆ ನಂತರ ರಾಜ್ಯ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ರಾಜ್ಯ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಭವಿಷ್ಯ ನುಡಿದರು.
ಪಟ್ಟಣದ ನಾಣಿಕೆರೆ ವೃತ್ತದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಪರ ಮತಯಾಚಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತಾಗಿದೆ. ಯಾವುದೇ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ಬರುತ್ತಿಲ್ಲ. ರಾಜ್ಯದ ಸಮ್ಮಿಶ್ರ ಸರ್ಕಾರ ಕೇವಲ ಮೂರು ಜಿಲ್ಲೆಗಳ ಸರ್ಕಾರವಾಗಿದೆ ಎಂದು ಟೀಕಿಸಿದ ಅವರು, ಈ ಬಾರಿ ನರೇಂದ್ರ ಮೋದಿಯವರೇ ಪ್ರಧಾನಮಂತ್ರಿಯಾಗಲಿದ್ದಾರೆ. ದೇಶದಲ್ಲಿ
ಬಿಜೆಪಿಯು 300 ಸ್ಥಾನ ಗೆಲ್ಲಲಿದೆ ಎಂದರು.
ನರೇಂದ್ರ ಮೋದಿಯವರು ನಿನ್ನೆ ನಡೆದ ಸಭೆಯಲ್ಲಿ ತುಂಗಭದ್ರಾಜಲಾಶಯಕ್ಕೆ
ಸಮನಾಂತರ ಜಲಾಶಯ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ. ಈ ಬಾರಿ ಕರ್ನಾಟಕದಲ್ಲಿ 24 ಸ್ಥಾನ ಬಿಜೆಪಿ ಗೆಲ್ಲಲು ನಾವೆಲ್ಲರೂ ಶ್ರಮಿಸುವುದಾಗಿ ಪ್ರಧಾನಿಯವರಿಗೆ ಮಾತು ಕೊಟ್ಟಿದ್ದೇವೆ ಎಂದರು.
ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಜೆಪಿಯ ಕೊಡುಗೆಯಾಗಿದೆ. ತಾವು ಸಂಸದನಾಗಿದ್ದ ವೇಳೆ ಹತ್ತು ಸಾವಿರ ಕೋಟಿ ರೂ. ಅನುದಾನ ತಂದು
ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದರು.
ಅಭ್ಯರ್ಥಿ ವೈ.ದೇವೇಂದ್ರಪ್ಪ ಮಾತನಾಡಿ, ಉತ್ತಮ ಆಡಳಿತ ನಡೆಸಲು ವಿದ್ಯಾಭ್ಯಾಸವೊಂದೇ ಮಾನದಂಡ ಅಲ್ಲ, ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎಂಬಂತೆ ರೈತರ ,ದುಡಿಯುವ ವರ್ಗಗಳ ತುಳಿತಕ್ಕೊಳಗಾದವರ ನೋವು ಅರ್ಥಮಾಡಿಕೊಂಡು ಅವರಿಗೆ ಸ್ಪಂದಿಸುವ ಗುಣ ಬೇಕಾಗಿದೆ. ಅಂತಹ ಗುಣ ನನ್ನಲ್ಲಿದೆ ಎಂದರು.
ಈ ವೇಳೆ ಮಾಜಿ ಶಾಸಕ ನೇಮಿರಾಜನಾಯ್ಕ, ಮುಖಂಡರಾದ ನರೆಗಲ್ ಕೊಟ್ರೇಶ್,ಡಿ. ರಾಘವೇಂದ್ರಶೆಟ್ಟಿ, ಬಿ.ಎಂ.ಎಸ್.ಪ್ರಕಾಶ, ಪ.ಪಂ.
ಸದಸ್ಯ ನರಸಿಂಹ ಮೂರ್ತಿ, ಶ್ರವಣಕುಮಾರ, ಪಿ.ವಿ.ರಾಘವೇಂದ್ರ,ಲಲಿತಮ್ಮ, ರುದ್ರೇಶ ನಾಯ್ಕ, ಬಂಗಾರಿ ಮಂಜುನಾಥ, ರವಿಕಿರಣ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು