ಇವಿಎಂ ಯಂತ್ರಗಳ ಮೇಲೂ ಅನುಮಾನ


Team Udayavani, Apr 14, 2019, 5:18 PM IST

14-April-33

ಬಳ್ಳಾರಿ: ಗಾಂಧಿಭವನದಲ್ಲಿ ಎಸ್‌ಯುಸಿಐನಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಜಲಿಯನ್‌ ವಾಲಾಭಾಗ್‌ ಘಟನೆ ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಹತ್ಯಾಕಾಂಡ ಕಂಬಕ್ಕೆ ಅಭ್ಯರ್ಥಿ ಎ.ದೇವದಾಸ್‌ ಪುಷ್ಪ ನಮನ ಸಲ್ಲಿಸಿದರು.

ಬಳ್ಳಾರಿ: ದೇಶದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುತ್ತಿರುವ ಚುನಾವಣೆಗಳು ನಾಟಕದಂತಾಗಿವೆ. ನ್ಯಾಯಬದ್ಧವಾಗಿ ನಡೆಯುತ್ತಿದ್ದ ಚುನಾವಣೆಗಳು ಮರೆಯಾದ ಹಿನ್ನೆಲೆಯಲ್ಲಿ ಇವಿಎಂಯಂತ್ರಗಳು ಬಂದ ನಂತರವೂ ಚುನಾವಣೆಗಳ ಬಗ್ಗೆ ಅನುಮಾನ ಪಡುವಂತಾಗಿದೆ ಎಂದು ಎಸ್‌ ಯುಸಿಐಸಿ ಪಕ್ಷದ ರಾಜ್ಯ ಕಾರ್ಯದರ್ಶಿ ಸದಸ್ಯ ಕೆ.ಸೋಮಶೇಖರ್‌ ಆರೋಪಿಸಿದರು.

ನಗರದ ಗಾಂಧಿಭವನದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶನಿವಾರ ಏರ್ಪಡಿಸಿದ್ದ ಸಾರ್ವಜನಿಕ ಬಹಿರಂಗ
ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಮೊದಲನೆಯ ಹಂತದ ಚುನಾವಣೆಯಲ್ಲಿ ಆಂಧ್ರಪ್ರದೇಶ, ಉತ್ತರ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕ ಇವಿಎಂ ಯಂತ್ರಗಳು ಕೈಕೊಟ್ಟಿವೆ.
ಯಾವುದೇ ಪಕ್ಷದ ಗುಂಡಿ ಒತ್ತಿದರೂ ಬಿಜೆಪಿಗೆ ಮತ ಬೀಳುವ ವಿದ್ಯಮಾನ ನಡೆದಿದೆ ಎಂಬ ವಿಷಯ ಜನರ ಮನಸ್ಸಿನಲ್ಲಿ ನೂರಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತ್ತೂಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಚುನಾವಣೆ
ಆಯೋಗಕ್ಕೆ ಕಿಮ್ಮತ್ತು ನೀಡದೆ ಹೋದಲ್ಲೆಲ್ಲ ರಾಜಕೀಯ ಭಾಷಣದಲ್ಲಿ ಸೇನೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಏನು ಮಾಡುತ್ತಿದೆ.? ಸೇನೆಯನ್ನು ರಾಜಕೀಯಕ್ಕೆ
ಬಳಸುವುದನ್ನು ವಿರೋಧಿಸಿ ಅನೇಕ ನಿವೃತ್ತ ಸೇನಾ ಅಧಿಕಾರಿಗಳು ರಾಷ್ಟ್ರಪತಿಗಳಿಗೆ ಪತ್ರ ಸಹ ಬರೆದಿದ್ದಾರೆ ಎಂದು ತಿಳಿಸಿದರು.

ನೀಡಿರುವ ಭರವಸೆಗಳ ಬಗ್ಗೆ ಚಕಾರವೆತ್ತದ ಪ್ರಧಾನಿ ನರೇಂದ್ರ ಮೋದಿಗೆ ತನ್ನ ಸಾಧನೆಗಳ ಬಲದ ಮೇಲೆ ಮತ ಕೇಳುವ ನೈತಿಕತೆಯಿಲ್ಲ. ಕಾಂಗ್ರೆಸ್‌ ಜನವಿರೋಧಿ ನೀತಿಗಳನ್ನೇ ಬಿಜೆಪಿ
ಮುಂದುವರಿಸುತ್ತಿದೆ. ಈ ಎರಡು ಪಕ್ಷಗಳು ಜನರಿಗೆ ದ್ರೋಹವೆಸಗಿವೆ. ಹಾಗಾಗಿ ಈ ಎರಡು ಪಕ್ಷಗಳನ್ನು ತಿರಸ್ಕರಿಸಿ, ಜನರ ಧ್ವನಿಯನ್ನು ಎತ್ತಿಹಿಡಿಯುತ್ತಿರುವ ಹೋರಾಟ ಬೆಳೆಸುತ್ತಿರುವ ಎಸ್‌ಯುಸಿಐಸಿ ಪಕ್ಷಕ್ಕೆ ಮತ ಹಾಕುವ ಮೂಲಕ ಎ.ದೇವದಾಸ್‌ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಎಸ್‌ಯುಸಿಐಸಿ ಅಭ್ಯರ್ಥಿ ಎ.ದೇವದಾಸ್‌ ಮಾತನಾಡಿ, ದುಡಿಯುವ ಜನರಾದ ನಾವು ನಮ್ಮದೇ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಬಂಡವಾಳಶಾಹಿಗಳು ತಮ್ಮ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳನ್ನು ಹಣ, ಮಾಧ್ಯಮ ಬಲದ ಮೂಲಕ ಮುನ್ನಲೆಗೆ ತಂದು, ಜನರಲ್ಲಿ ಈ ಪಕ್ಷಗಳ ಬಗ್ಗೆ ಇಲ್ಲದ ಭ್ರಮೆಯನ್ನು ಸೃಷ್ಟಿ ಮಾಡುತ್ತಿವೆ. ಈ ಸತ್ಯವನ್ನು ನಾವು ಅರಿಯಬೇಕು. ಈ ವ್ಯವಸ್ಥೆಯಲ್ಲಿ ಯಾರೇ ಅಧಿಕಾರಕ್ಕೇರಿದರೂ, ಬಂಡವಾಳಶಾಹಿಗಳ ಉದ್ಧಾರವೇ ಖಚಿತ. ಹಾಗಾಗಿ ಕಾರ್ಮಿಕ
ವರ್ಗ ಹೋರಾಟ ಕಟ್ಟುತ್ತಾ ಈ ವ್ಯವಸ್ಥೆಯನ್ನೇ ಕಿತ್ತೂಗೆಯಬೇಕು. ಆ ಮೂಲಕ ಜನರ ಎಲ್ಲಾ ಸಮಸ್ಯೆಗಳಿಗೆ ಕೊನೆ ಹಾಡಬೇಕು. ಆದ್ದರಿಂದ ಎಸ್‌ಯುಸಿಐಸಿ ಪಕ್ಷದ ಟ್ರ್ಯಾಕ್ಟರ್‌ ಗುರುತಿಗೆ ಮತ
ಹಾಕುವಂತೆ’ ಮನವಿ ಮಾಡಿದರು.

ಇದಕ್ಕೂ ಮುನ್ನ 1919ರ ಏ.13 ರಂದು ನಡೆದಿದ್ದ ಜಲಿಯನ್‌ ವಾಲಾಬಾಗ್‌ ಘಟನೆಯು ಶನಿವಾರಕ್ಕೆ 100 ವರ್ಷ ಪೂರೈಸಿದ
ಹಿನ್ನೆಲೆಯಲ್ಲಿ ಹತ್ಯಾಕಾಂಡದ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣಾ ಉಪಾಧ್ಯ, ಜಿಲ್ಲಾ ಸಮಿತಿ ಸದಸ್ಯೆ ಎಂ.ಎನ್‌.ಮಂಜುಳಾ ಮಾತನಾಡಿದರು. ಸದಸ್ಯೆ ಡಿ.ನಾಗಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಶಾಂತಾ, ಡಾ| ಪ್ರಮೋದ್‌, ಗೋವಿಂದ್‌, ಸುರೇಶ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.