ಭ್ರಷ್ಟ ಪಕ್ಷಗಳನ್ನು ಮತದಾರರು ತಿರಸ್ಕರಿಸಲಿ
ನೋಟ್ಬ್ಯಾನ್ ಮಾಡಿದ್ದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳ
Team Udayavani, Apr 19, 2019, 4:24 PM IST
ಹೊಸಪೇಟೆ: ಚುನಾವಣೆ ಅಂಗವಾಗಿ ಆಯೋಜಿ ಸಿದ್ದ ಸಾರ್ವಜನಿಕರ ಸಭೆಯಲ್ಲಿ ಎಸ್.ಆರ್.ಹಿರೇಮಠ ಮಾತನಾಡಿದರು.
ಹೊಸಪೇಟೆ: ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಈ ಮೂರು ಭ್ರಷ್ಟ ಪಕ್ಷಗಳನ್ನು ಜನತೆ ತಿರಸ್ಕರಿಸಬೇಕು ಎಂದು ಸಿಟಿಜನ್ಸ್ ಫಾರ್
ಡೆಮಾಕ್ರಸಿ ಅಧ್ಯಕ್ಷ ಎಸ್.ಆರ್. ಹಿರೇಮಠ ಕರೆ ನೀಡಿದರು.
ಲೋಕ ಸಭಾ ಚುನಾ ವಣೆ ಅಂಗವಾಗಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ಆಯೋ ಜಿ ಸಿದ್ದ
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಪಿಎ ಆಡಳಿತದಲ್ಲಿ ನಡೆದ ಹಗರಣಗಳ ಸರಮಾಲೆಯಿಂದ
ಬೇಸತ್ತ ಜನತೆಗೆ ನಾನು ತಿನ್ನಲ್ಲ, ತಿನ್ನುವವರನ್ನೂ ಬಿಡಲ್ಲ ಎಂದು ಹೇಳಿಕೊಂಡು ಬಂದ ಬಿಜೆಪಿ ಭಿನ್ನವಾಗಿ ಕಂಡಿತು. ಆದರೆ ಬಿಜೆಪಿ
ಆಡಳಿತಾವಧಿಯಲ್ಲಿ ಹಲವಾರು ಬಿಜೆಪಿಯ ಸಚಿವರು ಭ್ರಷ್ಟಾಚಾರದ ಆರೋಪಗಳಿಂದ ಮುಕ್ತರಾಗಿ ಜೈಲುಗಳಿಂದ ಹೊರ
ಬರುತ್ತಿರುವುದು, ಬ್ಯಾಂಕ್ಗಳಿಗೆ ದ್ರೋಹ ಬಗೆದ ಬಂಡವಾಳಿಗರು ವಿದೇಶಕ್ಕೆ ಪಲಾಯನ ಮಾಡುತ್ತಿರುವುದು, ಇವೆಲ್ಲ ವೂ ಬಿಜೆಪಿ ಭಿನ್ನ ಪಕ್ಷವಲ್ಲ ಎಂದು ಸಾಬೀತುಪಡಿಸಿದೆ ಎಂದು ಆರೋಪಿಸಿದರು.
ಯುವಕರಿಗೆ ಉದ್ಯೋಗದ ಭರವಸೆ ನೀಡಿದ ಪ್ರಧಾನಿ ಮೋದಿ ಯ ವರು ಐದು ವರ್ಷದ ಅವಧಿಯಲ್ಲಿ ಕನಿಷ್ಠ ಉದ್ಯೋಗ ಸೃಷ್ಟಿಸಲಿಲ್ಲ. ಬದಲಾಗಿ ನೋಟ್ಬ್ಯಾನ್ ಮಾಡುವ ಮೂಲ ಕ ಉದ್ಯೋಗ ನಾಶಕ್ಕೆ ಕಾರಣರಾದರು. ಬಳ್ಳಾರಿ ಲೋಕಸಭಾ ಕ್ಷೇತ್ರದ
ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎ.ದೇವದಾಸ್ ಅವರನ್ನು ಬೆಂಬಲಿಸಬೇಕು ಮನವಿ ಮಾಡಿದರು.
ಪಕ್ಷದ ರಾಜ್ಯ ಸಮಿತಿ ಸದಸ್ಯ ಕೆ.ಸೋಮಶೇಖರ್ ಮಾತ ನಾ ಡಿ, ದೇಶದಲ್ಲಿ ಬಂಡವಾಳಶಾಹಿ ಪರವಾದ ರಾಜಕೀಯ ಪಕ್ಷಗಳು ಜನತೆ ಮೂಲಭೂತ ಅಗತ್ಯತೆಗಳನ್ನು ಪೂರೈಸಲು ಸಂಪೂರ್ಣ ವಿಫಲವಾಗಿದೆ. ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಕೋಮು ಪ್ರಚೋಧನೆಯನ್ನು ಮಾಡಲಾಗುತ್ತಿದೆ ಎಂದು ದೂರಿ ದರು.
ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ರಾಧಾಕೃಷ್ಟ ಉಪಾಧ್ಯ, ಎಂ.ಎನ್.ಮಂಜುಳಾ, ಡಿ.ನಾಗಲಕ್ಷ್ಮೀ,
ಎಚ್.ಎರ್ರಿಸ್ವಾಮಿ, ಹುಲುಗಪ್ಪ, ಅಭಿಷೇಕ್, ರವಿ ನೇತ್ರಾವತಿ, ದಯಾನಂದ, ಕರಿಯಪ್ಪ ಗುಡಿಮನಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ