ಬಿಜೆಪಿ ಜಯಭೇರಿ; ಸಂಭ್ರಮಾಚರಣೆ

ಸಿಹಿ ಹಂಚಿ-ಪಟಾಕಿ ಸಿಡಿಸಿ ವಿಜಯೋತ್ಸವ •ಮೋದಿ-ಗೆಲುವಿನ ರೂವಾರಿಗಳ ಪರ ಮೊಳಗಿದ ಜೈಕಾರ

Team Udayavani, May 24, 2019, 12:30 PM IST

24-May-15

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಗೆಲುವಿನ ಬಳಿಕ ನಗರದ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮಾಚರಣೆ.

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಯ ಬಳ್ಳಾರಿ ಕ್ಷೇತ್ರದ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರವಾದ ಆರ್‌ವೈಎಂಇಸಿ ಕಾಲೇಜು ಎದುರು ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಸಂಭ್ರಮಿಸಿದರು.

ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಕೇಂದ್ರದ ಹೊರಗೆ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಪಕ್ಷದ ಕಾರ್ಯಕರ್ತರು ಬಿಜೆಪಿ ಬಾವುಟಗಳನ್ನು ಬೈಕ್‌ಗಳಲ್ಲಿ ನಗರದಾದ್ಯಂತ ಸಂಚರಿಸಿ ಸಂಭ್ರಮಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿ ಗೆಲುವಿಗಾಗಿ ಅಭಿಮಾನಿಗಳು ಬಿರು ಬಿಸಲನ್ನು ಲೆಕ್ಕಸದೇ, ಒಂದೊಂದು ಬೂತ್‌ನ ಮತ ಎಣಿಕೆಯನ್ನು ಎದುರು ನೋಡುತ್ತಿದ್ದರು. ಅಭ್ಯರ್ಥಿಗೆ ಮುನ್ನಡೆ ಸಾಧಿಸುತ್ತಿದ್ದಂತೆ ಕಾರ್ಯಕರ್ತರು ಜೈಕಾರ ಸಂತಸ ವ್ಯಕ್ತಪಡಿಸಿದರು.

ಮತ ಎಣಿಕೆ ನಡೆಯುತ್ತಿದ್ದ ಕೇಂದ್ರದ ಸಮೀಪ ಬೆಳಗ್ಗೆಯಿಂದಲೇ ನಗರ ಕಾರ್ಯಕರ್ತರು ಸೇರಿ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಸಂಡೂರು, ಕೂಡ್ಲಿಗಿ, ಕಂಪ್ಲಿ ತಾಲೂಕುಗಳಿಂದ ಅಗಮಿಸಿದ್ದ ಬಿಜೆಪಿ, ಕಾಂಗ್ರೆಸ್‌- ಜೆಡಿಎಸ್‌ ಹಾಗೂ ಇತರೆ ಪಕ್ಷಗಳ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ ಎಣಿಕೆ ಆರಂಭಗೊಂಡು ಬಹಳ ಹೊತ್ತಾದ್ದರೂ ಸ್ಥಳಕ್ಕೆ ಆಗಮಿಸಿರಲಿಲ್ಲ. ಸುಮಾರು 11 ಗಂಟೆಗೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವೈ.ದೇವೇಂದ್ರಪ್ಪ ಮುನ್ನಡೆ ಸಾಧಿಸುತ್ತಿದ್ದಂತೆ ಎಣಿಕೆ ಕೇಂದ್ರದತ್ತ ಧಾವಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಚುನಾಯಿತ ಅಭ್ಯರ್ಥಿ ದೇವೇಂದ್ರಪ್ಪ ಹಾಗೂ ಶ್ರೀರಾಮಲು ಪರ ಜೈಕಾರ ಕೂಗಿದರು.

ಫಲಿತಾಂಶ ಪ್ರಕಟವಾದ ಬಳಿಕೆ ಎಣಿಕೆ ಕೇಂದ್ರದಿಂದ ಹೊರಬಂದು ಚುನಾಯಿತ ಅಭ್ಯರ್ಥಿ ವೈ.ದೇವೇಂದ್ರಪ್ಪ, ಶಾಸಕ ಶ್ರೀರಾಮುಲು, ಕಾರ್ಯಕರ್ತರತ್ತ ಕೈ ಬೀಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಸುತ್ತುವರಿದು ಹಾರಗಳನ್ನು ಹಾಕಿ ಸಂಭ್ರಮಿಸಿದರು.

ಕ್ಷೇತ್ರದಲ್ಲಿ ಗೆಲುವಿನ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದ ವೈ.ದೇವೆಂದ್ರಪ್ಪ ಗೆಲುವನ್ನು ಎದುರು ಕಾಯುತ್ತಿದ್ದ ಅವರ ಅಭಿಮಾನಿಗಳು ಜೈಕಾರ ಕೂಗಿ ಸಂತಸಗೊಂಡರೆ, ಮತ್ತೆ ಕೆಲವರು ಬೋಲೋ ಭಾರತ್‌ ಮಾತಾಕಿ ಜೈ, ರಾಮ್‌, ಶ್ರೀರಾಮ್‌, ಜೈ ಮೋದಿ ಎಂದು ಹೇಳುತ್ತಾ ವಾಹನಗಳಲ್ಲಿ ತೆರಳಿದರು.

ಎಲ್ಲಾ ಕಡೆಗಳಲ್ಲಿ ರಸ್ತೆ ಬಂದ್‌: ನಗರದ ರಾವ್‌ ಬಹದ್ದೂರ್‌ ವೈ ಮಹಾಬಳೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ಗುರುವಾರ ಮತ ಎಣಿಕೆ ನಡೆಯುತ್ತಿದ್ದ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು. ಕಾಲೇಜಿನ ಎಲ್ಲಾ ಕಡೆಯ ರಸ್ತೆಗಳನ್ನು ಬಂದ್‌ ಮಾಡಲಾಗಿತ್ತು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.