ನಾಳೆಯಿಂದ ಸಾವಯವ ಕೃಷಿ ಕಾರ್ಯಾಗಾರ
ರಾಸಾಯನಿಕ ಮುಕ್ತ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ
Team Udayavani, Jun 14, 2019, 4:31 PM IST
ಬಳ್ಳಾರಿ: ಮೈಸೂರಿನ ಉಳುಮೆ ಪ್ರತಿಷ್ಠಾನದ ನೈಸರ್ಗಿಕ ಕೃಷಿಕ ಟಿ.ಜಿ.ಎನ್.ಅವಿನಾಶ್ ಭಿತ್ತಿಪತ್ರ ಬಿಡುಗಡೆ ಮಾಡಿದರು.
ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಎರ್ರಿತಾತ ದೇವಸ್ಥಾನದ ಪ್ರಾಂಗಣದಲ್ಲಿ ಜೂ.15, 16 ರಂದು ಎರಡು ದಿನಗಳ ಕಾಲ ರೈತನ ಸಮೃದ್ಧಿ ಮತ್ತು ನೆಲ, ಜಲದ ಕುರಿತು ಜನಜಾಗೃತಿಗಾಗಿ ನೈಸರ್ಗಿಕ ಕೃಷಿ ವಿಜ್ಞಾನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಉಳುಮೆ ಪ್ರತಿಷ್ಠಾನದ, ನೈಸರ್ಗಿಕ ಕೃಷಿಕ ಟಿ.ಜಿ.ಎನ್.ಅವಿನಾಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರೈತರು ಮಳೆಯ ಕೊರತೆ, ಅಂತರ್ಜಲ ಕುಸಿತ ಸೇರಿ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಅನಿಯಮಿತವಾಗಿ ರಾಸಾಯನಿಕ ಬಳಕೆಯಿಂದಾಗಿ ಸುಸ್ಥಿರ ಸಾವಯವ ಕೃಷಿ ಪದ್ಧತಿಯೆಂಬುದೇ ಮರೀಚಿಕೆಯಾಗುತ್ತಿದೆ. ಹಾಗಾಗಿ ರಾಸಾಯನಿಕ ಮುಕ್ತ ಕೃಷಿ ಪದ್ಧತಿಯನ್ನು ಪ್ರತಿಯೊಬ್ಬ ರೈತರು ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಮುಂದಿನ ದಿನಗಳಲ್ಲಿ ರೈತರಿಗೆ ಮರಗಳ ಬೆಳೆಸುವ ಆಧಾರಿತ ಕೃಷಿ ಪದ್ಧತಿಯೊಂದೇ ಪರಿಹಾರ ಮಾರ್ಗವಾಗಿದೆ. ಕೃಷಿ ಜಮೀನುಗಳಲ್ಲಿ ಮರಗಳನ್ನು ಬೆಳೆಸುವುದರಿಂದ ಮಳೆ ಪ್ರಮಾಣ ಹೆಚ್ಚುತ್ತದೆ. ಮರಗಳಲ್ಲಿ 107 ಹಣ್ಣಿನ ಮರಗಳು, 90 ತರಕಾರಿ ಗಿಡಗಳಿವೆ. ಸಮುದ್ರ ತೀರದಲ್ಲಿ ಬೆಳೆಯುವ ಏರೋ ಸೌತ್ಸ್ ಬೆಳೆಯಬೇಕಾಗಿದೆ. ಈ ಮರಗಳು ಮಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸುರಿಸುತ್ತವೆ. ಸುರಿದ ಮಳೆಯ ತೇವಾಂಶವನ್ನು ಕಾಪಾಡುತ್ತವೆ. ಇಂಥ ವೈಜ್ಞಾನಿಕ ಕೃಷಿ ಪದ್ಧತಿಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ವಿವರಿಸಿದರು.
ಕಾರ್ಯಾಗಾರದಲ್ಲಿ ಬಿದ್ದ ಮಳೆಯನ್ನು ಭೂಮಿಯಲ್ಲಿ ಹಿಡಿದಿಟ್ಟುಕೊಳ್ಳುವ ವಿಧಾನ, ಸಸ್ಯ ಬೆಳವಣಿಗೆಯಲ್ಲಿ ಬೆಳಕಿನ ಮಹತ್ವ, ಹ್ಯೂಮಸ್ ಮತ್ತು ಸಾವಯವ ಇಂಗಾಲದ ಮಹತ್ವ (ಭೂಮಿಯನ್ನು ಸಹಜವಾಗಿ ಬಲಗೊಳಿಸುವಿಕೆ), ಭೂಮಿಯಲ್ಲಿ ಸಹಜವಾಗಿ ನೈಸರ್ಗಿಕ ಉತ್ಪತ್ತಿ ಮಾಡುವ ವಿಧಾನ, ದ್ವಿದಳ ಧಾನ್ಯಗಳ ಮಹತ್ವ ಮತ್ತು ನಾಟಿ ಬೀಜ ಆಯ್ಕೆ ಮಾಡುವ ವಿಧಾನ, ಸಂರಕ್ಷಣೆ ಮಾಡುವ ವಿಧಾನ, ನಮ್ಮ ಭೂಮಿಯಲ್ಲಿ ಸಹಜ ಎರೆಹುಳು ಮತ್ತು ಸೂಕ್ಷ್ಮ ಜೀವಿಗಳ ಮಹತ್ವ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಪ್ರಗತಿಪರ ರೈತರು ತಮ್ಮ ಅನುಭವ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಬಿ.ಯು.ಯರ್ರಿಸ್ವಾಮಿ, ಕಮ್ಮರಚೇಡು ಈಶ್ವರಪ್ಪ, ಜಿ.ನಾಗರಾಜ, ರಾಮಕೃಷ್ಣ, ಕೆ.ಮಾರೆಣ್ಣ, ಕೆ.ಶಿವಪ್ಪ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್